ವಸತಿ ಯೋಜನೆಗೆ ಶೀಘ್ರ ಅನುದಾನ: ಕೋಟ

ಮಡಂತ್ಯಾರು: ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ

Team Udayavani, Dec 18, 2019, 8:27 PM IST

xc-10

ಬೆಳ್ತಂಗಡಿ: ವಸತಿ ಯೋಜನೆ ಯಡಿ ಹಲವಾರು ಕಡೆ ಅಕ್ರಮಗಳು ಕಂಡುಬಂದ ಹಿನ್ನೆಲೆಯಲ್ಲಿ ಅನುದಾನ ತಡೆಹಿಡಿಯಲಾಗಿತ್ತು. ಪ್ರಸಕ್ತ ಗ್ರಾ.ಪಂ.ಗಳ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಕರೆದು ಸೂಕ್ತ ಫಲಾನುಭವಿಗಳ ಪಟ್ಟಿ ತಯಾರಿಸಿ ಗೃಹ ಸಚಿವರೊಂದಿಗೆ ಚರ್ಚಿಸ ಲಾಗಿದೆ. ಶೀಘ್ರವೇ ವಸತಿ ಯೋಜನೆ ಫಲಾನುಭವಿಗಳಿಗೆ ಬಾಕಿ ಅನುದಾನ ಬಿಡುಗಡೆ ಮಾಡುವುದಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ಮಡಂತ್ಯಾರು ಗ್ರಾ.ಪಂ. ಸಭಾಭವನ ದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ದ.ಕ. ಜಿ.ಪಂ. ಮಂಗಳೂರು, ತಾ.ಪಂ. ಬೆಳ್ತಂಗಡಿ, ಗ್ರಾ.ಪಂ. ಮಡಂತ್ಯಾರು ಇದರ ವತಿ ಯಿಂದ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಪಂಚಾಯತ್‌ರಾಜ್‌ ವ್ಯವಸ್ಥೆ ಜಾರಿ ಬಳಿಕ ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಹತ್ತರ ಬದಲಾವಣೆ ಕಂಡಿದೆ. ರಾಜ್ಯದಲ್ಲಿ 99 ಸಾವಿರ ಗ್ರಾ.ಪಂ. ಸದಸ್ಯರಲ್ಲಿ 52 ಸಾವಿರ ಮಹಿಳೆಯರೇ ಇದ್ದಾರೆ. ಗ್ರಾ.ಪಂ.ಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಶೇ. 75ಕ್ಕೂ ಹೆಚ್ಚು ತೆರಿಗೆ ಸಂಗ್ರಹಿಸುವ ಗ್ರಾ.ಪಂ.ಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಸರಕಾರ ತೀರ್ಮಾನಿಸಿದೆ ಎಂದರು.

ಶಾಸಕ ಹರೀಶ್‌ ಪೂಂಜ ಅವರು ನೂತನ ಸಭಾಭವನ, ನಗದು ರಹಿತ ವ್ಯವಸ್ಥೆಗೆ ಚಾಲನೆ ನೀಡಿ, ಮಹಾತ್ಮಾ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಕನಸನ್ನು ಪ್ರಧಾನಿ ಮೋದಿ ಮುಂದುವರಿ ಸಿದ್ದು, ಅದನ್ನು ಮಡಂತ್ಯಾರು ಗ್ರಾ.ಪಂ. ಸಾಕಾರಗೊಳಿಸಿದೆ. ಮಡಂತ್ಯಾರು ಗ್ರಾ.ಪಂ. ಅಭಿವೃದ್ಧಿ ದೃಷ್ಟಿಯಿಂದ ನನ್ನ ಅವಧಿಯಲ್ಲಿ ವಿವಿಧ ಕಾಮಗಾರಿಗಳಿಗೆ 4 ಕೋ. ರೂ. ಮಂಜೂರಾಗಿ ಅನುಷ್ಟಾನಗೊಳಿಸಲಾ ಗಿದೆ. ನೀರಿಂಗಿಸುವಿಕೆ, ಪ್ಲಾಸ್ಟಿಕ್‌ ಮುಕ್ತ ಗ್ರಾ.ಪಂ., ಸ್ವದೇಶಿ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಬೇಕು. ಸರಕಾರ ದಿಂದ ಇನ್ನಷ್ಟು ಅನುದಾನ ಮಂಜೂರಿಗೆ ಪ್ರಯತ್ನಿಸುವು ದಾಗಿ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಕೆ. ಹರೀಶ್‌ಕುಮಾರ್‌ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಗ್ರಾ.ಪಂ. ಸದಸ್ಯರು ಜನರಿಗೆ ಮೂಲ ಸೌಕರ್ಯ ಒದಗಿಸಲು ಉತ್ತಮ ಸೇವೆ ನೀಡಬೇಕು. ಅಂತರ್ಜಲಕ್ಕೆ ಗ್ರಾ.ಪಂ. ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ. ಸರಕಾರದ ಅನುದಾನ ವನ್ನು ಸಮರ್ಪಕವಾಗಿ ಬಳಸಿದರೆ ಗ್ರಾಮದ ಉತ್ಕೃಷ್ಟ ಅಭಿವೃದ್ಧಿ ಸಾಧ್ಯ ಎಂಬುದಕ್ಕೆ ಮಡಂತ್ಯಾರು ಗ್ರಾ.ಪಂ. ಸಾಕ್ಷಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಗೋಪಾಕೃಷ್ಣ ಕೆ. ಪ್ರಸ್ತಾವಿಸಿದರು. ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ. ಸದಸ್ಯೆ ವಸಂತಿ ಲಕ್ಷ್ಮಣ ಕುಲಾಲ್‌, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಇ. ಜಯರಾಮ್‌, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ರಾಜಶೇಖರ ಶೆಟ್ಟಿ ಬಿ., ಮಡಂತ್ಯಾರು ವಾಣಿಜ್ಯ, ಕೈಗಾರಿಕಾ ಮತ್ತು ಸೇವಾ ಉದ್ದಿಮೆದಾರರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ., ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತ ಚಂದ್ರಕಾಂತ್‌ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಡಂತ್ಯಾರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ್‌ ಎಂ. ಸ್ವಾಗತಿಸಿ, ಗ್ರಾ.ಪಂ. ಸದಸ್ಯ ಕಾಂತಪ್ಪ ಗೌಡ ವಂದಿಸಿದರು. ಶಿಕ್ಷಕ ಧರಣೇಂದ್ರ ಕುಮಾರ್‌ ನಿರೂಪಿಸಿದರು.

ಸಾಧಕರಿಗೆ ಸಮ್ಮಾನ
ಪೂಂಜಾಲಕಟ್ಟೆ ಕರ್ನಾಟಕ ಶಾಲೆ ಮುಖ್ಯೋಪಾಧ್ಯಾಯ ಮೋನಪ್ಪ ಕೆ., ಶಿಕ್ಷಕ ಜೆರಾಲ್ಡ್‌ ಫೆರ್ನಾಂಡಿಸ್‌, ರಿತ್ವಿಕ್‌ ಅಲೆವೂರಾಯ, ದೀಪಾ ಕೆ.ಎಸ್‌. ಕುಂಜತ್ತೋಡಿ, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ ಅವರನ್ನು ಸಮ್ಮಾನಿಸಲಾಯಿತು. ನೂತನ ಸಭಾಭವನ, ಬಸವನಗುಡಿ ಸಾರ್ವಜನಿಕ ಶೌಚಾಲಯ, ನಗದು ರಹಿತ  ವ್ಯವಸ್ಥೆ, ಅಕ್ಷರ ಕರಾವಳಿ ಅಂಗನವಾಡಿ ಕಟ್ಟಡ ಶಿಲಾನ್ಯಾಸ, ನೂತನ ಬಸ್‌ ತಂಗುದಾಣ ಉದ್ಘಾಟನೆ, ಪ್ಲಾಸ್ಟಿಕ್‌ ಸಂಗ್ರಹಣ ಕೊಠಡಿ ಉದ್ಘಾಟನೆ, ರಸ್ತೆ ಉದ್ಘಾಟನೆ ಸಹಿತ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಲಾಯಿತು.

ಮಾದರಿ ಪಂಚಾಯತ್‌.
ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದರೆ ಊರಿನ ಅಭಿವೃದ್ಧಿ ಅಸಾಧ್ಯ. ಮಡಂತ್ಯಾರು ಗ್ರಾ.ಪಂ. ಗಾಂಧಿ ಪುರಸ್ಕಾರ ಪಡೆದು ಸಾಧನೆಯ ಪಥದಲ್ಲಿದ್ದು, ರಾಷ್ಟ್ರಕ್ಕೆ ಮಾದರಿಯಾದ ಪಂಚಾಯತ್‌ ಆಗಲು ಪ್ರಯತ್ನಿಸಿದೆ. ಶಾಸಕರ ಮೂಲಕ ಸರಕಾರದಿಂದ ಇನ್ನಷ್ಟು ಅನುದಾನ ಮಂಜೂರುಗೊಳಿಸಲು ಶ್ರಮಿಸುತ್ತೇನೆ.
– ಕೋಟ ಶ್ರೀನಿವಾಸ್‌ ಪೂಜಾರಿ, ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.