ಕಾಂಞಂಗಾಡು – ಕಾಣಿಯೂರು ಹಳಿ ನಿರ್ಮಾಣ ಬರೀ ರೈಲು!


Team Udayavani, Jun 29, 2019, 5:00 AM IST

3

ಸುಳ್ಯ: ಬಹುನಿರೀಕ್ಷಿತ ಮಹತ್ವಾಕಾಂಕ್ಷೆ ಕಾಂಞಂಗಾಡು – ಕಾಣಿಯೂರು ರೈಲು ಹಳಿ ನಿರ್ಮಾಣ ವಿಚಾರ ಕೇಂದ್ರ ರೈಲ್ವೇ ಸಚಿವರಿಗೆ ಸಲ್ಲಿ ಸಿದ ರೈಲ್ವೇ ಅಭಿವೃದ್ಧಿ ಪಟ್ಟಿಯಲ್ಲಿ ಸೇರದಿರುವುದು ಕಾಂಞಂಗಾಡು-ಕಾಣಿಯೂರು ಹಳಿ ನಿರ್ಮಾಣ ಬರೀ ರೈಲು ಎನ್ನುವ ಅನುಮಾನ ಮೂಡಿಸಿದೆ.

ತಾಲೂಕಿನ ಬಹುನಿರೀಕ್ಷಿತ ಬೇಡಿಕೆಯಾಗಿರುವ ಈ ಯೋಜನೆ ಕಳೆದ ಹತ್ತಾರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಆಗೊಮ್ಮೆ ಈಗೊಮ್ಮೆ ಚರ್ಚಾ ವಸ್ತುವಾಗುತ್ತಿರುವುದು ಬಿಟ್ಟಲ್ಲಿ ಉಳಿದಂತೆ ಕರಾವಳಿ ಭಾಗದ ಜನಪ್ರತಿನಿಧಿಗಳು ಅನುಷ್ಠಾನಕ್ಕೆ ಸಂಬಂಧಿಸಿ ತೋರಿದ ಆಸಕ್ತಿ ಗೌಣ ಎನ್ನುವುದು ಸ್ಪಷ್ಟವಾಗುತ್ತಿದೆ.

ಹೋರಾಟ ಸಮಿತಿಗೆ ನಿರಾಸೆ
ದ.ಕ. ಜಿಲ್ಲೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಜಿಲ್ಲೆಯ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿ ಜೂ. 27ರಂದು ರೈಲ್ವೇ ಸಚಿವ ಪಿಯೂಷ್‌ ಗೋಯಲ್ ಮತ್ತು ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರಿಗೆ ಮನವಿ ಸಲ್ಲಿಸಿದ್ದರು. ಇದರಲ್ಲಿ ಅನೆೇಕ ಯೋಜನೆಗಳ ಪ್ರಸ್ತಾವವಿದ್ದರೂ, ಬಹುಬೇಡಿಕೆ ಆಗಿರುವ ಕಾಣಿ ಯೂರು-ಕಾಂಞಂಗಾಡು ಹಳಿ ನಿರ್ಮಾಣದ ಬಗ್ಗೆ ಪ್ರಸ್ತಾವಿಸಿಲ್ಲ. ಇದು ಕಾಣಿಯೂರು- ಕಾಂಞಂಗಾಡು ರೈಲ್ವೇ ಕ್ರಿಯಾ ಯೋಜನೆ ಸಮಿತಿ ಪದಾಧಿಕಾರಿಗಳಿಗೆ ನಿರಾಸೆ ಮೂಡಿಸಿದೆ. ಯೋಜನೆ ಕಡೆಗಣಿಸಲಾಗುತ್ತಿದೆ ಎನ್ನುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

91 ಕಿ.ಮೀ. ಉದ್ದ
ಕಾಂಞಂಗಾಡ್‌ – ಪಾಣತ್ತೂರುವರೆಗೆ 41 ಕಿ.ಮೀ. ಮತ್ತು ಪಾಣತ್ತೂರಿನಿಂದ ಕಾಣಿಯೂರಿಗೆ 50 ಕಿ.ಮೀ. ಒಟ್ಟು 91 ಕಿ.ಮೀ. ಉದ್ದದ ಹಳಿ ನಿರ್ಮಾಣದ ಅಗತ್ಯ ವಿದೆ. ಕಾಂಞಂಗಾಡ್‌ – ಕೊಟ್ಟೋಡಿ – ಬಳಾಂತೋಡ್‌ – ಪಾಣತ್ತೂರು – ಕಲ್ಲಪಳ್ಳಿ, ಆಲೆಟ್ಟಿ, ಸುಳ್ಯ ಮೂಲಕ ಕಾಣಿಯೂರು ಬಳಿ ಮಂಗಳೂರು – ಬೆಂಗಳೂರು ರೈಲ್ವೇ ಮಾರ್ಗ ಸಂದಿಸುವ ಯೋಜನೆ ಇದಾಗಿದೆ.

1,458 ಕೋಟಿ ರೂ. ಯೋಜನೆ
2006-07ರಲ್ಲಿ ಈ ಮಾರ್ಗ ನಿರ್ಮಾಣದ ಕನಸು ಗರಿಗೆದರಿತ್ತು. ಬಳಿಕ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. 2008-09ರ ರೈಲ್ವೇ ಬಜೆಟ್‌ನಲ್ಲಿ ಅಂದಿನ ಸಚಿವ ಲಾಲೂ ಪ್ರಸಾದ್‌ ಯಾದವ್‌ ಹಳಿ ಸರ್ವೆಗೆ ಅನುದಾನ ಕಾದಿರಿಸಿದ್ದರು. ಅದರನ್ವಯ ಕಾಞಂಗಾಡ್‌ನಿಂದ ಪಾಣತ್ತೂರುವರೆಗೆ 41 ಕಿ.ಮೀ. ಸಮೀಕ್ಷೆ ನಡೆಯಿತು. 2010-11ರ ಬಜೆಟ್‌ನಲ್ಲಿ ಎರಡನೇ ಹಂತದಲ್ಲಿ ಪಾಣತ್ತೂರಿನಿಂದ ಕಾಣಿಯೂರು ತನಕ 50 ಕಿ.ಮೀ. ಸರ್ವೆಗೆ ಅನುದಾನ ಮೀಸಲಿರಿಸಿದರೂ ಬಳಕೆಗೆ ಸಿಗಲಿಲ್ಲ. 2103-14ನೇ ಸಾಲಿನ ರೈಲ್ವೇ ಬಜೆಟ್‌ನಲ್ಲಿ ಸಚಿವ ಡಿ.ವಿ. ಸದಾನಂದ ಗೌಡ ಅವರು ಕಾಞಂಗಾಡ್‌-ಕಾಣಿಯೂರು ಪೂರ್ಣ ಸರ್ವೆ ನಡೆಸಲು ಅನುದಾನ ಮೀಸಲಿರಿಸಿದರು. ಅದರಂತೆ 2015ರ ಮಾರ್ಚ್‌ನಲ್ಲಿ ಯೋಜನೆಯ ಸಮೀಕ್ಷೆ ಪೂರ್ತಿ ಮಾಡಿ ವರದಿ ಸಲ್ಲಿಸಲಾಗಿದೆ. ವಿವಿಧ ಕಾರಣಗಳಿಂದ ಆ ಕೆಲಸವೂ ನಿರೀಕ್ಷಿತ ಮಟ್ಟದಲ್ಲಿ ಸಾಗಿಲ್ಲ.

ಅನುದಾನದ ಅಗತ್ಯವಿದೆ
ಕಳೆದ ಜುಲೈನಲ್ಲಿ ಕಾಞಂಗಾಡ್‌-ಕಾಣಿಯೂರು ರೈಲ್ವೇ ಯೋಜನಾ ಕ್ರಿಯಾ ಸಮಿತಿ ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಅನುದಾನ ನೀಡುವಂತೆ ಒತ್ತಾಯಿಸಿದ ಪರಿಣಾಮ ಕೇರಳ ಸರಕಾರ ಅನುದಾನ ನೀಡಲು ಒಪ್ಪಿಗೆ ನೀಡಿತ್ತು. ಕರ್ನಾಟಕ ಸರಕಾರ ಅನುದಾನ ಕಾದಿರಿಸುವ ಪ್ರಕ್ರಿಯೆಗೆ ಇನ್ನೂ ಚಾಲನೆ ಸಿಕ್ಕಿಲ್ಲ. ಕ್ರಿಯಾ ಸಮಿತಿ ವತಿಯಿಂದ ಕೇರಳ ಮತ್ತು ಕರ್ನಾಟಕ ಭಾಗದ ಹೋರಾಟ ಸಮಿತಿ ಮುಖಂಡರು ಮತ್ತು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ನಡೆದು, ಅದರ ಪ್ರಕಾರ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಲಾಗಿದೆ.

ನಿರಾಸೆಯಾಗಿದೆ; ಗಮನಕ್ಕೆ ತಂದಿದ್ದೇವೆ
ರೈಲ್ವೇ ಸಚಿವರಿಗೆ ಸಲ್ಲಿಸಲಾದ ಪಟ್ಟಿಯಲ್ಲಿ ಕಾಂಞಂಗಾಡು -ಕಾಣಿಯೂರು ರೈಲು ಹಳಿ ನಿರ್ಮಾಣ ಪ್ರಸ್ತಾವಿಸಲಾಗದೆ ಇರುವುದು ನಮಗೆ ನಿರಾಶೆ ತಂದಿದೆ. ಇದು ಮಹತ್ವದ ಬೇಡಿಕೆ. ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ಸಂದೇಶದ ಮೂಲಕ ಸಂಸದರ ಗಮನಕ್ಕೆ ತರಲಾಗಿದೆ. ಅವರಿಂದ ಸ್ಪಂದನೆ ಬರಬೇಕಷ್ಟೆ. ಈ ವಿಚಾರವನ್ನು ಡಿ.ವಿ. ಸದಾನಂದ ಗೌಡ ಅವರ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಪರಿಶೀಲಿಸುವ ಭರವಸೆಯನ್ನು ಅವರು ನೀಡಿದ್ದಾರೆ.

– ಸುಧಾಕರ ರೈ, ಪ್ರ. ಕಾರ್ಯದರ್ಶಿ, ಕಾಂಞಂಗಾಡ್‌-ಕಾಣಿಯೂರು ರೈಲ್ವೇ ಯೋಜನಾ ಕ್ರಿಯಾ ಸಮಿತಿ

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.