Rain ಬೆಳ್ತಂಗಡಿಯಲ್ಲಿ ಉತ್ತಮ ಮಳೆ, ಬಂಟ್ವಾಳದಲ್ಲಿ ಹಾನಿ
ಅ. 12ರಂದು ಎಲ್ಲೋ ಅಲರ್ಟ್; ಉತ್ತಮ ಮಳೆ ನಿರೀಕ್ಷೆ
Team Udayavani, Oct 11, 2023, 11:53 PM IST
ಮಂಗಳೂರು/ಬೆಳ್ತಂಗಡಿ/ಸುಳ್ಯ: ಬೆಳ್ತಂಗಡಿ ತಾಲೂಕಿನಲ್ಲಿ ಬುಧವಾರವೂ ಉತ್ತಮ ಮಳೆಯಾಗಿದೆ. ಕಳೆದ ಮೂರು ದಿನಗಳಿಂದ ಉತ್ತಮ ಮಳೆ ಸುರಿದಿದ್ದರಿಂದ ಕೆಲವೆಡೆ ಹಾನಿಯೂ ಸಂಭವಿಸಿತ್ತು. ಮುಂಡಾಜೆ, ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ, ನಾರಾವಿ, ಕುತ್ಲೂರು, ವೇಣೂರು ಸಹಿತ ಎಲ್ಲೆಡೆ ಸಂಜೆ ಬಳಿಕ ಉತ್ತಮ ಮಳೆ ಸುರಿದಿದೆ.
ಸುಳ್ಯ ತಾಲೂಕು ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ಸಾಧಾರಣ ಮಳೆಯಾಗಿದೆ. ಕಡಬ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಅರ್ಧ ಗಂಟೆಗೂ ಅಧಿಕ ಸಮಯ ಮಳೆಯಾಗಿದೆ. ಸುಳ್ಯ ನಗರ, ಅರಂತೋಡು, ಸಂಪಾಜೆ, ಮಂಡೆಕೋಲು, ಜಾಲ್ಸೂರು, ಬೆಳ್ಳಾರೆ, ಪಂಜ, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಬಳ್ಪ, ಎಡಮಂಗಲ, ಬಿಳಿನೆಲೆ ಭಾಗದಲ್ಲಿ ಸಾಧರಣ ಮಳೆಯಾಗಿದೆ. ಕಡಬ, ಕಲ್ಲುಗುಡ್ಡೆ, ನೂಜಿಬಾಳ್ತಿಲ, ರೆಂಜಿಲಾಡಿ ಭಾಗದಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗಿದೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರ ಮಳೆಯಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಅ. 12ರಂದು ಎಲ್ಲೋ ಅಲರ್ಟ್ ಘೋಷಿಸ ಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ 30.5 ಡಿ.ಸೆ. ಗರಿಷ್ಠ ಮತ್ತು 23.9 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಸಿಡಿಲಿನಿಂದ ಹಾನಿ
ಪುತ್ತೂರು: ಚಿಕ್ಕಮುಟ್ನೂರು ಗ್ರಾಮದ ಕೊಲ್ಯದಲ್ಲಿ ಮಂಗಳವಾರ ರಾತ್ರಿ ಸಿಡಿಲು ಬಡಿದು ಪೂವಪ್ಪ ಗೌಡ ಅವರ ಮನೆ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಮನೆಯೊಳಗಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬನ್ನೂರು ಗ್ರಾ.ಪಂ. ಅಧ್ಯಕ್ಷೆ ಸ್ಮಿತಾ ನಾಯ್ಕ, ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯ ತಿಮ್ಮಪ್ಪ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
5 ಮನೆಗಳಿಗೆ ಸಿಡಿಲಾಘಾತ
ಬಂಟ್ವಾಳ: ತಾಲೂಕಿನೆಲ್ಲಡೆ ಮಂಗಳವಾರ ರಾತ್ರಿ ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಈ ಸಂದರ್ಭ ಸಿಡಿಲು ಬಡಿದು 5 ಮನೆಗಳಿಗೆ ಹಾನಿಯಾಗಿದೆ.
ಬಾಳ್ತಿಲ ಗ್ರಾಮದ ಸುಧೆಕಾರಿನ ಶೀನ ಅವರ ಮನೆಯ ವಿದ್ಯುತ್ ಸಂಪರ್ಕಕ್ಕೆ ಸಿಡಿಲು ಬಡಿದು ಹಾನಿಯಾಗಿದೆ. ವಿದ್ಯುತ್ ಪರಿಕರಣಗಳು ಸುಟ್ಟು ಹೋಗಿವೆ. ಇಡ್ಕಿದು ಗ್ರಾಮದ ಅರ್ಕೆಚಾರುನಲ್ಲಿ ಥಾಮಸ್ ಅವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ.
ಬೋಳಂತೂರು ಗ್ರಾಮದ ಸುರಿಬೈಲಿನ ಅಬ್ದುಲ್ ಖಾದರ್ ಅವರ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಫೈಬರ್ ಶೀಟ್ಗಳು ಹಾನಿಗೀಡಾಗಿವೆ. ಸಾಲೆತ್ತೂರು ಗ್ರಾಮದ ಮೆದು ಕೂಡುರಸ್ತೆಯಲ್ಲಿ ಹಮೀದ್ ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಸಜೀಪಮುನ್ನೂರು ಗ್ರಾಮದ ಆಲಾಡಿಯಲ್ಲಿ ಅಬ್ದುಲ್ ರಝಾಕ್ ಅವರ ಮನೆಯ ಗೋಡೆ ಬಿರುಕು ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ