ಗಾಳಿ ಮಳೆಗೆ ವಿದ್ಯುತ್‌ ವ್ಯವಸ್ಥೆ ಅಸ್ತವ್ಯಸ್ತ

ಸಂಪರ್ಕ ಮರುಸ್ಥಾಪಿಸಲು ಶಕ್ತಿಮೀರಿ ಶ್ರಮಿಸುತ್ತಿರುವ ಮೆಸ್ಕಾಂ ಸಿಬಂದಿ

Team Udayavani, Aug 9, 2019, 5:00 AM IST

e-41

ಪುತ್ತೂರು: ಮೂರು ದಿನಗಳಿಂದ ಸುರಿಯುತ್ತಿರುವ ಗಾಳಿ ಸಹಿತ ಕುಂಭದ್ರೋಣ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ಸಂಜೆಯಿಂದ ಬೀಸಿದ ಭಾರೀ ಗಾಳಿಗೆ ನಗರದ ಸಹಿತ ಗ್ರಾಮಾಂತರ ಭಾಗಗಳಲ್ಲಿ ವಿದ್ಯುತ್‌ ವ್ಯವಸ್ಥೆ ಬಹುತೇಕ ಕೈಕೊಟ್ಟಿದೆ.

ಬುಧವಾರ ರಾತ್ರಿಯಿಡೀ ಕತ್ತಲಲ್ಲಿ ಕಳೆದ ಗ್ರಾಮಾಂತರದ ಜನ ಗುರುವಾರ ಹಗಲಲ್ಲಿ ವಿದ್ಯುತ್ತಿಲ್ಲದೆ ಬವಣೆ ಪಡಬೇಕಾಯಿತು. ಪುತ್ತೂರು ಮೆಸ್ಕಾಂ ವಿಭಾಗದ ಎಲ್ಲ ಉಪ ವಿಭಾಗಗಳಲ್ಲೂ ವಿದ್ಯುತ್‌ ಪೂರೈಕೆ ಸಮಸ್ಯೆ ಉಲ್ಬಣಿಸಿದೆ. ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಕಡಬ, ಸುಬ್ರಹ್ಮಣ್ಯ ಮತ್ತು ಸುಳ್ಯ ಉಪ ವಿಭಾಗಗಳ ಪೈಕಿ ಪುತ್ತೂರು ನಗರದ ಸಮಸ್ಯೆ ಒಂದಷ್ಟು ನಿವಾರಣೆಯಾಗಿದ್ದರೂ ಇತರ ಉಪ ವಿಭಾಗಗಳ ಸಮಸ್ಯೆ ನಿವಾರಿಸಲು ಮೆಸ್ಕಾಂ ರಾತ್ರಿ ಹಗಲು ಶ್ರಮಿಸುತ್ತಿದೆ.

ಬುಧವಾರ ರಾತ್ರಿಯಿಂದ ಬಹುತೇಕ ಕಡೆಗಳಲ್ಲಿ ಬಲವಾದ ಸುಂಟರಗಾಳಿ ಬೀಸಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು, ಮರದ ಗೆಲ್ಲುಗಳು ತುಂಡಾಗಿ ಬಿದ್ದಿದ್ದು, ಇದರ ನೇರ ಪರಿಣಾಮ ವಿದ್ಯುತ್‌ ಲೈನ್‌ಗಳ ಮೇಲೆ ಬಿದ್ದಿದೆ. ಎರಡು ದಿನಗಳ ಮೊದಲ ಲೆಕ್ಕಾಚಾರದ ಪ್ರಕಾರ ಇಡೀ ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ 75 ಕಂಬಗಳು ತುಂಡಾಗಿದ್ದು, ಎರಡು ಪರಿವರ್ತಕಗಳು ಹಾನಿಗೀಡಾಗಿದ್ದವು. ಇಲ್ಲೆಲ್ಲ ಹೊಸ ಕಂಬ ಅಳವಡಿಸಿ, ಟಿಸಿ ದುರಸ್ತಿಗೊಳಿಸಿ ಮತ್ತೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಬುಧವಾರ ಮತ್ತೆ ಗಾಳಿಯ ನರ್ತನ ಸಮಸ್ಯೆ ತಂದೊಡ್ಡಿದೆ.

ಪರಿವರ್ತಕಗಳಿಗೆ ಹಾನಿ
ಗುತ್ತಿಗಾರು ಮತ್ತು ಬೆಟ್ಟಂಪಾಡಿಗಳಲ್ಲಿ ಪರಿವರ್ತಕಗಳು ಹಾಳಾಗಿದ್ದು, ಸರಿಪಡಿಸಲಾಗಿದೆ. ಬಡಕ್ಕೋಡಿ, ಕುಕ್ಕುನಾಜೆ, ಪದಡ್ಕ, ಕಜೆಮೂಲೆ, ದುಗ್ಗಳ, ಬಿಂತೋಡಿ, ಸಜಂಕಾಡಿಗಳ ಟಿಸಿಗಳು ಹಾನಿಗೀಡಾಗಿವೆ. ಮಳೆ, ಗಾಳಿ ಮುಂದುವರಿದರೆ ವಿದ್ಯುತ್‌ ಸಮಸ್ಯೆ ಮತ್ತು ಜನರ ಬವಣೆ ಉಲ್ಬಣಗೊಳ್ಳುವ ಅಪಾಯವಿದೆ.

ಮಾನ್ಸೂನ್‌ ಗ್ಯಾಂಗ್‌ಮನ್‌ಗಳು ಮರ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಎಲ್ಲ ಸಿಬಂದಿ ರಾತ್ರಿ ಹಗಲು ಕೆಲಸ ಮಾಡುತ್ತಿದ್ದಾರೆ. ಸಂಜೆಯ ವೇಳೆಗೆ ಎಲ್ಲ ಕೆಲಸ ಮುಗಿಸಿ ಮರು ಪೂರೈಕೆ ಮಾಡ ಬಹುದು ಎಂಬ ವಿಶ್ವಾಸದಲ್ಲಿದ್ದೇವೆ. ಅಷ್ಟರಲ್ಲಿ ಬೇರೆಲ್ಲಾದರೂ ಸಮಸ್ಯೆ ಕಾಣಿಸಿಕೊಂಡರೆ ಕಷ್ಟ ಎನ್ನುತ್ತಾರೆ ಅಧಿಕಾರಿಗಳು.

ಸಮಸ್ಯೆಯ ಸರಮಾಲೆ
ನಿರಂತರವಾಗಿ ವಿದ್ಯುತ್‌ ಕೈಕೊಡುತ್ತಿರುವ ಕಾರಣ ಮನೆಯಲ್ಲಿ ಅಡುಗೆ ಮಾಡಲು ಸಮಸ್ಯೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆಯೂ ಕಾಣಿಸಿಕೊಂಡಿದೆ. ಬಾವಿ, ಬೋರ್‌ಗಳಲ್ಲಿ ನೀರಿದ್ದರೂ ನೀರೆತ್ತಲು ವಿದ್ಯುತ್ತಿಲ್ಲ. ಟ್ಯಾಂಕಿಗಳೆಲ್ಲ ಖಾಲಿಯಾಗಿವೆ ಎಂದು ಜನರು ಅಲವತ್ತುಕೊಳ್ಳುತ್ತಿದ್ದಾರೆ. ಹೊಟೇಲ್ ಉದ್ಯಮಗಳಿಗೂ ತಿಂಡಿ, ಊಟ ತಯಾರಿಸಲು ಸಮಸ್ಯೆಯಾಗಿದೆ. ಇನ್ನೊಂದು ಕಡೆ ಮೊಬೈಲ್ ಚಾರ್ಜ್‌ ಮಾಡಲಾಗದೆ, ಇಂಟರ್ನೆಟ್ ಬಳಸ ಲಾಗದೆ ಜನ ಕಂಗಾಲಾಗಿದ್ದಾರೆ. ಕೆಲವೆಡೆ ಮೊಬೈಲ್ ಟವರ್‌ಗಳು ಕೂಡ ವಿದ್ಯುತ್‌ ಅಭಾವ ದಿಂದಾಗಿ ಕೈಕೊಡುತ್ತಿವೆ. ವಿಶೇಷವಾಗಿ ಸುಳ್ಯ ಮತ್ತು ಪುತ್ತೂರು ಭಾಗದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್‌ಗಳು ವಿದ್ಯುತ್ತನ್ನೇ ಅವಲಂಬಿಸಿದ್ದು, ಜನರೇಟರ್‌ ಅಥವಾ ಬ್ಯಾಟರಿ ವ್ಯವಸ್ಥೆ ಹೊಂದಿಲ್ಲ.

ಪುತ್ತೂರು ನಗರ ಉಪ ವಿಭಾಗ ವ್ಯಾಪ್ತಿಯಲ್ಲಿ 9 ಕಂಬಗಳು ತುಂಡಾಗಿವೆ. ಬುಳೇರಿಕಟ್ಟೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮೊದಲಾದ ಕಡೆಗಳಲ್ಲಿ ವಿದ್ಯುತ್‌ ವ್ಯವಸ್ಥೆಗೆ ಹಾನಿಯಾಗಿದೆ ಎಂದು ನಗರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶಿಲ್ಪಾ ಶೆಟ್ಟಿ ತಿಳಿಸಿದ್ದಾರೆ. ಗ್ರಾಮಾಂತರ ಉಪ ವಿಭಾಗದಲ್ಲಿ 33 ಕಂಬಗಳು ತುಂಡಾಗಿದ್ದು, 7 ಪರಿವರ್ತಕಗಳು ಹಾನಿಗೊಂಡಿವೆ ಎಂದು ಗ್ರಾಮಾಂತರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಮಚಂದ್ರ ಹೇಳಿದ್ದಾರೆ.

ವ್ಯಾಪಕ ಹಾನಿ
ಪುತ್ತೂರು ನಗರ ಉಪ ವಿಭಾಗ ವ್ಯಾಪ್ತಿಯಲ್ಲಿ 9 ಕಂಬಗಳು ತುಂಡಾಗಿವೆ. ಬುಳೇರಿಕಟ್ಟೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮೊದಲಾದ ಕಡೆಗಳಲ್ಲಿ ವಿದ್ಯುತ್‌ ವ್ಯವಸ್ಥೆಗೆ ಹಾನಿಯಾಗಿದೆ ಎಂದು ನಗರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶಿಲ್ಪಾ ಶೆಟ್ಟಿ ತಿಳಿಸಿದ್ದಾರೆ. ಗ್ರಾಮಾಂತರ ಉಪ ವಿಭಾಗದಲ್ಲಿ 33 ಕಂಬಗಳು ತುಂಡಾಗಿದ್ದು, 7 ಪರಿವರ್ತಕಗಳು ಹಾನಿಗೊಂಡಿವೆ ಎಂದು ಗ್ರಾಮಾಂತರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಮಚಂದ್ರ ಹೇಳಿದ್ದಾರೆ.

ಶಕ್ತಿ ಮಿರಿ ಪ್ರಯತ್ನ

ಮಳೆಗಾಲದಲ್ಲಿ ತುರ್ತು ಕೆಲಸಗಳನ್ನು ನಿರ್ವಹಿಸಲೆಂದೇ ಮೆಸ್ಕಾಂ ಮಾನ್ಸೂನ್‌ ಗ್ಯಾಂಗ್‌ಮನ್‌ಗಳನ್ನು ನೇಮಿಸಿಕೊಳ್ಳುತ್ತದೆ. ಪ್ರತೀ ಸೆಕ್ಷನ್‌ ವ್ಯಾಪ್ತಿಯಲ್ಲಿ ಮೂವರು ಗ್ಯಾಂಗ್‌ಮನ್‌ಗಳಿದ್ದಾರೆ. ಮರ, ಗೆಲ್ಲು ಮುರಿದು ಬಿದ್ದಾಗ ಅವುಗಳನ್ನು ತೆರವು ಮಾಡುವ ಕೆಲಸವನ್ನು ಇವರು ಮಾಡುತ್ತಾರೆ. ಇದರೊಂದಿಗೆ ಮೆಸ್ಕಾಂ ಸಿಬಂದಿ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ.
– ನರಸಿಂಹ,ಪುತ್ತೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌, ಮೆಸ್ಕಾಂ

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.