ಇಚ್ಲಂಪಾಡಿ; ಒಕ್ಕಲಿಗ ಗೌಡ ಗ್ರಾಮ ಸಮಿತಿಯಿಂದ 125 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ
Team Udayavani, Apr 8, 2020, 5:26 PM IST
ಕಲ್ಲುಗುಡ್ಡೆ; ಇಚ್ಲಂಪಾಡಿ ಒಕ್ಕಲಿಗ ಗೌಡ ಗ್ರಾಮ ಸಮಿತಿ ವತಿಯಿಂದ ಗ್ರಾಮದ ಸುಮಾರು 125 ಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಬುಧವಾರ ವಿತರಿಸಲಾಯಿತು.
ಗ್ರಾಮ ಸಮಿತಿ ಅಧ್ಯಕ್ಷ ಭಾಸ್ಕರ ಎಸ್. ಗೌಡ ಒಡ್ಯತಡ್ಕ ಮಾತನಾಡಿ, ಭಾರತ್ ಲಾಕ್ ಡೌನ್ ನಿಂದಾಗಿ ದಿನಗೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿದ್ದು, ಅವರಿಗೆ ನೆರವಾಗುವ ದೃಷ್ಟಿಯಿಂದ ಗ್ರಾಮದ ಆಯ್ದ ಕುಟುಂಬಕ್ಕೆ ಸಮಿತಿ ವತಿಯಿಂದ ಸಾಮಗ್ರಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಇಂತಹ ಸಂದರ್ಭದಲ್ಲಿ ಯಾರೂ ಕಷ್ಟದ ಜೀವನ ನಡೆಸಬಾರದೆಂಬ ಉದ್ದೇಶ ನಮ್ಮದು ಎಂದು ಅವರು ತಿಳಿಸಿದರು. ಇಚ್ಲಂಪಾಡಿ ಬೀಡಿನ ಪೆರ್ಗಡೆ ಶುಭಾಕರ ಹೆಗ್ಗಡೆ ಅವರು ಆಹಾರ ಸಾಮಾಗ್ರಿಗಳನ್ನು ವಿತರಿಸಿದರು.
ಆಹಾರ ಸಾಮಾಗ್ರಿ ಕಿಟ್ ನಲ್ಲಿ 10 ಕೆ.ಜಿ. ಅಕ್ಕಿ, 2 ಕೆ.ಜಿ. ಸಕ್ಕರೆ, ಕಾಲು ಕೆ.ಜಿ. ಚಹಾಹುಡಿ, 1 ಕೆ.ಜಿ. ಉಪ್ಪು, ಕಾಲು ಕೆ.ಜಿ. ಉಪ್ಪಿನಕಾಯಿ ಅಗತ್ಯ ಸಾಮಾಗ್ರಿಗಳನ್ನು ವ್ಯವಸ್ಥೆ ಮಾಡಲಾಯಿತು. ಗ್ರಾ.ಪಂ. ಉಪಾಧ್ಯಕ್ಷೆ ವಾಣಿ, ಸದಸ್ಯರಾದ ಮೋಹಿನಿ, ಶ್ರೀನಿವಾಸ, ಮಾಧವ, ಪಿ.ವಿ.ಅನ್ನಮ್ಮ, ಪ್ರಮುಖರಾದ ಮಾಯಿಲಪ್ಪ ಶೆಟ್ಟಿ, ರಾಮಕೃಷ್ಣ ಗೌಡ ಕೊರಮೇರು, ದಿನೇಶ್ ಗೌಡ, ವಿಶ್ವನಾಥ ಗೌಡ ಕೊರಮೇರು,ಅನಿಲ್ ಉಮೆಸಾಗು, ರಾಧಾಕೃಷ್ಣ ಕೆರ್ನಡ್ಕ, ಕೇಶವ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ