ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ
Team Udayavani, Dec 7, 2021, 1:16 PM IST
ಪುತ್ತೂರು: ಡಿ.6ರಂದು ಸಂಜೆ ವಿಧಿವಶರಾದ ಮಾಜಿ ಶಾಸಕ ಉರಿಮಜಲು ರಾಮ ಭಟ್ಟ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಾವಿರಾರು ಅಭಿಮಾನಿಗಳ, ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅವಣರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ರಾಮ ಭಟ್ಟ ಅವರ ಕೊಂಬೆಟ್ಟು ಮನೆಯಲ್ಲಿ ಅಂತಿಮ ಯಾತ್ರೆಯ ಸಿದ್ಧತೆಯ ಬಳಿಕ ನೆಹರುನಗರ ವಿವೇಕಾನಂದ ಪದವಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜಿಗೆ ಮೆರವಣಿಗೆ ಮೂಲಕ ರಾಮಭಟ್ಟ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ದು ಅಲ್ಲಿ ನುಡಿನಮನ ಸಲ್ಲಿಸಲಾಯಿತು.
ಇದನ್ನೂ ಓದಿ:- ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್
ಅಲ್ಲಿಂದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕ ದರುಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಇದೇ ಸಂದರ್ಭದಲ್ಲಿ ಸರಕಾರಿ ಗೌರವ ನೀಡಲಾಯಿತು. ಬಳಿಕ ಚಿಕ್ಕಪುತ್ತೂರು ಮಡಿವಾಳಕಟ್ಟೆಯಲ್ಲಿ ಶಾಸ್ತ್ರೋಕ್ತವಾಗಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು