ರೆಡ್ಕ್ರಾಸ್ ಸಂಸ್ಥೆ ವಿಶ್ವಮಾನ್ಯ: ಉಮೇಶ್
Team Udayavani, May 9, 2019, 7:53 AM IST
ಬಂಟ್ವಾಳ: ಮಾನವೀಯತೆಯಿಂದ ಶಾಂತಿಯ ಕಡೆಗೆ ಆದರ್ಶ ಸಾರುತ್ತಿರುವ ರೆಡ್ ಕ್ರಾಸ್ ಸಂಸ್ಥೆ ವಿಶ್ವ ಮಾನ್ಯವಾಗಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್ ಹೇಳಿದರು.
ಅವರು ಮೇ 7ರಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿಶ್ವ ರೆಡ್ಕ್ರಾಸ್ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ನೊಂದವರ, ದುರ್ಬಲರ, ರೋಗಿಗಳ, ಶೋಷಿತರ, ಪ್ರಾಕೃತಿಕ ವಿಕೋಪಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಕರ ಸೇವೆಗೆ ಸಮರ್ಪಣೆ ಮಾಡಿದ ಮೇ 8 ಮಹತ್ವ ಪಡೆದಿದೆ ಎಂದರು.
ವಿಶ್ವದಲ್ಲಿ ಅತೀ ಹೆಚ್ಚು ಜೀವಹಾನಿ ಮಾಡುವಲ್ಲಿ ಯುದ್ಧಗಳು ಕಾರಣವಾಗಿವೆ. 1863ರಿಂದ ಸ್ಥಾಪಕ ಹೆನ್ರಿ ಡ್ಯುನಾಂಟ್ ಆಶಯವನ್ನು ರಕ್ತ ಸಂಗ್ರಹಣ ಸೇವೆ ಮೂಲಕ ಆರಂಭಿಸಿ ಜನಮನ್ನಣೆ ಗಳಿಸಿದೆ. ರೆಡ್ಕ್ರಾಸ್ ಸಂಸ್ಥೆ ವಿಶ್ವಾದ್ಯಂತ ನಿಷ್ಪಕ್ಷಪಾತ ಮತ್ತು ಏಕತೆಯಿಂದ ಸ್ವಯಂಸೇವಕರ ಮಾನವೀಯತೆಯ ತಳಹದಿಯ ಆಧಾರದ ಮೇಲೆ ಕೆಲಸ ಮಾಡುತ್ತದೆ. ರೋಟರಿ ಸಹಭಾಗಿತ್ವದಲ್ಲಿ ಇಂತಹ ಭಾವನೆಗಳಿಗೆ ಧ್ವನಿ ನೀಡುವ ಕೆಲಸ ನಿರಂತರವಾಗಿರಲಿ ಎಂದರು.
ಸಮಾರಂಭದಲ್ಲಿ ದಿನದ ಅದೃಷ್ಟವಂತ ಸದಸ್ಯ ಸುರೇಶ್ ಸಾಲ್ಯಾನ್ ಅವರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ