KSRTC ಬಸ್‌ನಲ್ಲಿ ತೆಂಗಿನೆಣ್ಣೆ ಸಾಗಾಟ ನಿರಾಕರಣೆ: ನಿರ್ವಾಹಕ-ಮಹಿಳೆ ಮಧ್ಯೆ ವಾಗ್ವಾದ


Team Udayavani, Nov 12, 2023, 11:26 PM IST

KSRTC ಬಸ್‌ನಲ್ಲಿ ತೆಂಗಿನೆಣ್ಣೆ ಸಾಗಾಟ ನಿರಾಕರಣೆ: ನಿರ್ವಾಹಕ-ಮಹಿಳೆ ಮಧ್ಯೆ ವಾಗ್ವಾದ

ಬಂಟ್ವಾಳ: ಸರಕು ಸಾಗಾಟಕ್ಕೆ ಸಂಬಂಧಿಸಿ ಬಿ.ಸಿ.ರೋಡಿನಲ್ಲಿ ಕೆಎಸ್ಸಾರ್ಟಿಸಿ ಪ್ರಯಾಣಿಕರ ಮಧ್ಯೆ ವಾಗ್ವಾದದ ಎರಡನೇ ಘಟನೆ ವರದಿಯಾಗಿದ್ದು, ರವಿವಾರ ಮಂಗಳೂರಿನಿಂದ ಹಾಸನಕ್ಕೆ ತೆರಳುವ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ತೆಂಗಿನೆಣ್ಣೆ ತುಂಬಿದ ಕ್ಯಾನ್‌ಗಳ ಜತೆ ಪ್ರಯಾಣಿಸುತ್ತಿದ್ದಾರೆ ಎಂದು ನಿರ್ವಾಹಕ ಇಳಿಸಿ ವಾಗ್ವಾದ ನಡೆಸಿದ್ದು, ಬಳಿಕ ಪೊಲೀಸರ ಮಾತುಕತೆಯಿಂದ ಮಹಿಳೆ ಅದೇ ಬಸ್ಸಿನಲ್ಲಿ ಪ್ರಯಾಣಿಸಿದರು.

ಅ.15ರಂದು ಪ್ರಯಾಣಿಕರೊಬ್ಬರು 1 ಕೆಜಿ ಕೋಳಿ ಮಾಂಸ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ ಎಂದು ಚಾಲಕ ಬಸ್‌ ಅನ್ನು ನೇರವಾಗಿ ನಗರ ಠಾಣೆಗೆ ಕೊಂಡು ಹೋದ ಘಟನೆ ವರದಿಯಾಗಿತ್ತು.

ರವಿವಾರ ಹಾಸನಕ್ಕೆ ತೆರಳುವ ಬಸ್ಸಿಗೆ ಮಂಗಳೂರಿನಲ್ಲಿ ಚೀಲವೊಂದನ್ನು ಹಿಡಿದು ಮಹಿಳೆ ಹತ್ತಿದ್ದರು. ನಿರ್ವಾಹಕ ಟಿಕೆಟ್‌ ನೀಡುವ ವೇಳೆ ಚೀಲದಲ್ಲೇನು ಎಂದು ಪ್ರಶ್ನಿಸಿದಾಗ ಮಹಿಳೆ ವ್ಯಂಗ್ಯವಾಗಿ ಬಾಂಬ್‌ ಎಂದು ಉತ್ತರಿಸಿದ್ದಾರೆ.

ನಿರ್ವಾಹಕ ಚೀಲವನ್ನು ಪರಿಶೀಲಿಸಿದಾಗ ಮೂರು ಕ್ಯಾನ್‌ ತೆಂಗಿನೆಣ್ಣೆ ಕಂಡುಬಂದಿದೆ. ಈ ವೇಳೆ ಯಾವುದೇ ರೀತಿಯ ಎಣ್ಣೆಯನ್ನು ಬಸ್ಸಿನಲ್ಲಿ ಸಾಗಿಸುವಂತಿಲ್ಲ ಎಂದು ತಗಾದೆ ತೆಗೆದಿದ್ದು, ಈ ವೇಳೆ ನಿರ್ವಾಹಕ-ಮಹಿಳೆಗೆ ಬಿ.ಸಿ.ರೋಡಿನವರೆಗೂ ವಾಗ್ವಾದ ನಡೆದಿದೆ.

ಬಿ.ಸಿ.ರೋಡು ನಿಲ್ದಾಣದಲ್ಲಿ ಮಹಿಳೆ ಟ್ರಾಫಿಕ್‌ ಪೊಲೀಸ್‌ ಸಿಬಂದಿ ಬಳಿ ಘಟನೆಯನ್ನು ವಿವರಿಸಿದ ಬಳಕ ಅವರು ಈ ವಿಚಾರವನ್ನು ನಗರ ಠಾಣಾ ಪಿಎಸ್‌ಐ ಗಮನಕ್ಕೆ ತಂದರು. ನಾವು ಸಂಸ್ಥೆಯ ನಿಯಮ ಪಾಲಿಸುತ್ತಿದ್ದು, ನಿಯಮ ದ ಪ್ರಕಾರ ಎಣ್ಣೆ ಸಾಗಿಸುವಂತಿಲ್ಲ, ಜತೆಗೆ ಮಹಿಳೆ ಕೇಳಿದಾಗ ಬಾಂಬ್‌ ಎಂಬ ಉತ್ತರ ನೀಡಿದ್ದಾರೆ ಎಂದು ನಿರ್ವಾಹಕ ವಿವರಿಸಿದ್ದಾರೆ.

ನಿರ್ವಾಹಕ ಎಣ್ಣೆ ಎಂದು ಗೊತ್ತಿದ್ದರೂ, ಮತ್ತೆ ಅದನ್ನು ಏನು ಎಂದು ಪ್ರಶ್ನಿಸಿರುವುದಕ್ಕೆ ಬಾಂಬ್‌ ಎಂಬ ಉತ್ತರ ನೀಡಿದ್ದೇನೆ ಎಂದು ಮಹಿಳೆ ಸ್ಪಷ್ಟನೆ ನೀಡಿದರು. ಬಳಿಕ ಪಿಎಸ್‌ಐಯವರು ನಿರ್ವಾಹಕರ ಮನವೊಲಿಸಿ ಮಹಿಳೆಯು ಅದೇ ಬಸ್ಸಿನಲ್ಲಿ ಪ್ರಯಾಣಿಸುವ ವ್ಯವಸ್ಥೆ ಕಲ್ಪಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.