ಅಪಾಯಕಾರಿ ಹಂಪ್ಗೆ ಪರಿಹಾರ
Team Udayavani, Jun 27, 2019, 5:21 AM IST
ಕಡಬ: ಇಲ್ಲಿನ ಹೊಸಮಠ ನೂತನ ಸೇತುವೆಯ ಬಳಿ ಅವೈಜ್ಞಾನಿಕ ರೀತಿಯಲ್ಲಿ ಹಂಪ್ (ರಸ್ತೆ ಉಬ್ಬು) ನಿರ್ಮಿಸಲಾಗಿದ್ದು, ವಾಹನಗಳು ಅಪಘಾತಕ್ಕೀಡಾಗುತ್ತಿದೆ ಎನ್ನುವ ಸಾರ್ವಜನಿಕರ ದೂರಿಗೆ ಸ್ಪಂದಿಸಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್ಡಿಸಿಎಲ್) ಅಧಿಕಾರಿಗಳು ಹಂಪ್ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.
ಹೊಸಮಠ ಸೇತುವೆ ಬಳಿ ಎರಡೂ ಬದಿಯ ಸಂಪರ್ಕ ರಸ್ತೆಗಳಲ್ಲಿ ನಿರ್ಮಿಸಲಾಗಿದ್ದ ಹಂಪ್ (ರಸ್ತೆ ಉಬ್ಬು) ನಿಂದಾಗಿ ಹಲವು ವಾಹನಗಳು ಅಪಘಾತಕ್ಕೀಡಾಗಿದ್ದು ವಾಹನ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು. ಕಾರುಗಳ ಅಡಿಭಾಗ ಈ ಹಂಪ್ಗೆ ತಾಗಿ ಬಿಡಿ ಭಾಗಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿದ ಘಟನೆಗಳೂ ನಡೆದಿದ್ದವು.
ಹಂಪ್ನಿಂದಾಗಿ ಆಗುತ್ತಿರುವ ಸಮಸ್ಯೆಗಳ ಕುರಿತು ‘ಉದಯವಾಣಿ’ ಸುದಿನ ವರದಿಗೆ ಸ್ಪಂದಿಸಿರುವ ಕೆಆರ್ಡಿಸಿಎಲ್ ಎಂಜಿನಿಯರ್, ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೇತುವೆಯ ಎರಡೂ ತುದಿಗಳಲ್ಲಿನ ಸಂಪರ್ಕ ರಸ್ತೆಗೆ ನಿರ್ಮಿಸಲಾಗಿದ್ದ ಹಂಪ್ಗ್ಳಲ್ಲಿ ಸಲೀಸಾಗಿ ವಾಹನ ಚಲಿಸುವ ರೀತಿಯಲ್ಲಿ ಸ್ವಲ್ಪ ಮಟ್ಟಿನ ಮಾರ್ಪಾಟು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ