ಬೆಳ್ತಂಗಡಿ ವಾರದ ಸಂತೆ ಎಪಿಎಂಸಿಗೆ ಸ್ಥಳಾಂತರ

ಎರಡು ದಶಕಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತ

Team Udayavani, Jun 20, 2020, 5:15 AM IST

ಬೆಳ್ತಂಗಡಿ ವಾರದ ಸಂತೆ ಎಪಿಎಂಸಿಗೆ ಸ್ಥಳಾಂತರ

ವಿಶೇಷ ವರದಿಬೆಳ್ತ‌ಂಗಡಿ: ಇಲ್ಲಿನ ವಾರದ ಸಂತೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಬೇಕೆಂಬ 2 ದಶಕಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

ಬೆಳ್ತಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆಸುತ್ತಿದ್ದ ವಾರದ ಸಂತೆಯನ್ನು ಕೊವಿಡ್‌-19 ಮುಂಜಾಗೃತ ಕ್ರಮವಾಗಿ ಹಳೆಕೋಟೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಶಾಸಕ ಹರೀಶ್‌ ಪೂಂಜ ಅವರ ಮುತು ವರ್ಜಿಯಿಂದ ಸ್ಥಳಾಂತರಿಸಲಾಗಿತ್ತು. ಕೃಷಿಕರು ಮತ್ತು ಖರೀದಿದಾರರ ಪೂರ್ಣ ಬೆಂಬಲ ದೊರೆತಿತ್ತು. ಕಳೆದ ಎರಡು ದಶಕ ಗಳಿಂದಲೂ ಸಂತೆ ಮಾರುಕಟ್ಟೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವ ಕುರಿತು ಸಾರ್ವಜನಿಕರಿಂದ ಒತ್ತಾಸೆ ಕೇಳಿಬಂದಿತ್ತು. ಆದರೆ ಯಾವುದೇ ಪ್ರಯತ್ನ ಫಲಪ್ರದವಾಗಿರಲಿಲ್ಲ.

ಶಾಸಕ ಹರೀಶ್‌ ಪೂಂಜ ಅವರು ಶಾಶ್ವತ ವಾಗಿ ಎಪಿಎಂಸಿ ಪ್ರಾಂಗಣದಲ್ಲೇ ವಾರದ ಮಾರುಕಟ್ಟೆಯನ್ನು ಮುಂದುವರಿಸುವ ಕುರಿತು ನಿರ್ಧಾರಕ್ಕೆ ಬಂದಿದ್ದರು.

ಇದೇ ಸಂದರ್ಭ ಗ್ರಾಹಕರು, ಖರೀದಿ ದಾರರು ಎಪಿಎಂಸಿ ಆಡಳಿತ ಮಂಡಳಿ, ಅಧಿಕಾರಿಗಳು, ನ.ಪಂ. ಸಹಿತ ಎಲ್ಲರೂ ಸ್ಥಳಾಂತರಿಸಲು ಸಮ್ಮತಿ ಸೂಚಿಸಿದ್ದರು. ಇದರ ಫಲವಾಗಿ ಸೂಕ್ತ ದಿನಾಂಕ ನಿಗದಿಪಡಿಸಿ ಸ್ಥಳಾಂತರಿಸುವ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿತ್ತು.

ಹಳೆಕೋಟೆ ಸಮೀಪದ 11.8 ಎಕ್ರೆ ವಿಸ್ತೀರ್ಣದ ಎಪಿಎಂಸಿಯಲ್ಲಿ 40 ಮೆಟ್ರಿಕ್‌ ಟನ್‌ನ 2 ಗೋದಾಮು, 250 ಮೆಟ್ರಿಕ್‌ ಟನ್‌ನ 1 ಗೊದಾಮು, ರೈತ ಭವನ, ಪೋಸ್ಟ್‌ ಕಚೇರಿಗೆ ಕಟ್ಟಡ, ಬ್ಯಾಂಕ್‌ ವ್ಯವಸ್ಥೆಗೆ ಕಟ್ಟಡ, ವ್ಯಾಪಾರ, ವ್ಯವಹಾರಕ್ಕೆ 4 ಸಭಾಂಗಣ, ಹರಾಜು ಕೊಠಡಿ, ವಸತಿಗೃಹ, ಆಡಳಿತ ಕಚೇರಿ, ಪಾರ್ಕಿಂಗ್‌ ಸಹಿತ ಇತರ ವ್ಯವಸ್ಥೆ ಒಂದೇ ಪ್ರಾಂಗಣದೊಳಗಿದೆ. ಕ್ಯಾಂಪ್ಕೋ ಖರೀದಿ ಕೇಂದ್ರವೂ ಇದೇ ಆವರಣದಲ್ಲಿದೆ.

ಜೂ. 29ರಂದು ವಾರದ ಸಂತೆ ಸ್ಥಳಾಂತರ
ಜೂ. 29ರಂದು ಬೆಳ್ತಂಗಡಿ ವಾರದ ಸೋಮವಾರ ಸಂತೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರವಾಗಲಿದೆ. ಪ್ರಾಂಗಣದಲ್ಲಿ ಮಾರಾಟಕ್ಕೆ ಯೋಗ್ಯ ಮೂಲ ಸೌಕರ್ಯಕ್ಕೆ ಶಾಸಕರು ಅನುದಾನ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ. ಇಲ್ಲಿ ಇನ್ನಿತರ ದಿನಬಳಕೆ ವಸ್ತುಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ಪ್ರಾಂಗಣದ ಗೇಟ್‌ ಮುಂಭಾಗ 100 ಮೀ. ರಸ್ತೆ ಇಕ್ಕೆಲಗಳಲ್ಲಿ ಬಟ್ಟೆ, ಪಾತ್ರೆ ಸಹಿತ ಅಗತ್ಯ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

2 ದಿನ ಸಂತೆ ಚಿಂತನೆ
ರೈತರ ಹಿತದೃಷ್ಟಿಯಿಂದ ಎಪಿಎಂಸಿ ಆವರಣಕ್ಕೆ ವಾರದ ಸಂತೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಅದರಂತೆ ದಿನಾಂಕವನ್ನು ನಿಗದಿ ಪಡಿಸ ಲಾಗಿದ್ದು, ಮುಂದಿನ ದಿನಗಳಲ್ಲಿ ವಾರಕ್ಕೆ 2 ದಿನ ಸಂತೆ ನಡೆಸಲು ಚಿಂತಿಸಲಾಗಿದೆ.
-ಹರೀಶ್‌ ಪೂಂಜ , ಶಾಸಕರು

ಸಂಪೂರ್ಣ ಸಹಕಾರ
ಎಪಿಎಂಸಿಯಲ್ಲಿ ವಾರದ ಸಂತೆ ನಡೆಸಲು ಮೂಲ ಸೌಕರ್ಯ ಇದೆ. ಜೂ. 29ರಂದು ಅಧಿಕೃತವಾಗಿ ಸ್ಥಳಾಂತ ರಿಸುವ ಕುರಿತು ಶಾಸಕರೊಂದಿಗೆ ಚರ್ಚಿಸಲಾಗಿದೆ. ಈ ಮೂಲಕ ವ್ಯಾಪಾರಿಗಳು, ರೈತರಿಗೆ ಎಪಿಎಂಸಿ ಸಂಪೂರ್ಣ ಸಹಕಾರ ಒದಗಿಸಲಿದೆ.
-ಕೇಶವ ಬೆಳಾಲು, ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.