ರಾಷ್ಟ್ರಧ್ವಜಕ್ಕೆ ಅಗೌರವ ತಡೆಗಟ್ಟಲು ಎಸಿಗೆ ಮನವಿ


Team Udayavani, Aug 5, 2018, 3:26 PM IST

5-agust-14.jpg

ನಗರ : ಉಚ್ಛ ನ್ಯಾಯಾಲಯದ ಆದೇಶದಂತೆ ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಹಾಗೂ ರಾಜ್ಯ ಸರಕಾರದಿಂದ ಪ್ಲಾಸ್ಟಿಕ್‌ ಮೇಲಿನ ನಿರ್ಬಂಧ ನಿರ್ಣಯದ ಕುರಿತು ಕ್ರಮಕೈಗೊಳ್ಳುವ ಕುರಿತು ಪುತ್ತೂರು ಸಹಾಯಕ ಕಮಿಷನರ್‌ ಕಚೇರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ರಾಷ್ಟ್ರಧ್ವಜವು ರಾಷ್ಟ್ರದ ಗೌರವವಾಗಿದೆ. ಆದರೆ ಆ. 15 ಮತ್ತು ಜ. 26ರಂದು ರಾಷ್ಟ್ರಧ್ವಜಕ್ಕೆ ಹಲವು ಕಡೆಗಳಲ್ಲಿ ಅಗೌರವ ತೋರಲಾಗುತ್ತದೆ. ಕಾಗದದಿಂದ/ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜವು ಸಂಜೆಯಾಗುತ್ತಿದ್ದಂತೆ ರಸ್ತೆಯ ಮೇಲೆ, ಕಸದ ಬುಟ್ಟಿಯಲ್ಲಿ, ಚರಂಡಿಯಲ್ಲಿ ಇತ್ಯಾದಿ ಸ್ಥಳದಲ್ಲಿ ಬಿದ್ದಿರುವುದನ್ನು ಕಾಣುತ್ತೇವೆ. ಪ್ಲಾಸ್ಟಿಕ್‌ನಿಂದ ತಯಾರಾದ ರಾಷ್ಟ್ರಧ್ವಜವಂತೂ ನಾಶವೂ ಆಗುವುದಿಲ್ಲ. ಇದರಿಂದ ಹಲವು ದಿನಗಳವರೆಗೆ ನಮಗೆ ಆ ರಾಷ್ಟ್ರಧ್ವಜದ ಅಗೌರವವನ್ನು ನೋಡಬೇಕಾಗುತ್ತದೆ.

ರಾಷ್ಟ್ರಧ್ವಜದ ಈ ರೀತಿಯಲ್ಲಾಗುವ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮುಂಬೈ ಉತ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿಯ ದಾವೆಯನ್ನು ಹೂಡಲಾಗಿದೆ. ನ್ಯಾಯಾಲಯವು ಪ್ಲಾಸ್ಟಿಕ್‌ ರಾಷ್ಟ್ರಧ್ವಜದ ಅಗೌರವವನ್ನು ತಡಗಟ್ಟಲು ಸರಕಾರಕ್ಕೆ ಆದೇಶವನ್ನು ಕೊಡಲಾಗಿತ್ತು. ಅದಕ್ಕನುಸಾರ ಕೇಂದ್ರೀಯ ಮತ್ತು ರಾಜ್ಯದ ಗೃಹ ವಿಭಾಗ ಮತ್ತು ಶಿಕ್ಷಣ ವಿಭಾಗದ ಮೂಲಕ ಈ ವಿಷಯ ಕುರಿತು ಒಂದು ಸುತ್ತೋಲೆಯನ್ನು ಹೊರಡಿಸಿದೆ. ಇತ್ತೀಚಿನ ದಿನದಲ್ಲಿ ಸರಕಾರವು ‘ಪ್ಲಾಸ್ಟಿಕ್‌ ನಿರ್ಬಂಧ’ದ ನಿರ್ಣಯವನ್ನೂ ತೆಗೆದುಕೊಂಡಿದೆ. ಇದರ ಪ್ರಕಾರ ಪ್ಲಾಸ್ಟಿಕ್‌ನ ರಾಷ್ಟ್ರಧ್ವಜದ ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಹಿಂದೂ ಜನಜಗೃತಿ ಸಮಿತಿಯ ಚಂದ್ರ ಮೊಗೇರ, ಸಾಂತಪ್ಪ ಗೌಡ, ಧರ್ಣಪ್ಪ ಗೌಡ, ಜನಾರ್ದನ ಗೌಡ, ರಮೇಶ, ಯೋಗೀಶ್‌, ಕೃಷ್ಣ ಕುಮಾರ್‌ ಶರ್ಮ, ಕೇಶವ ಗೌಡ, ಲೋಕೇಶ್‌, ಚಂದ್ರಶೇಖರ್‌, ಹರಿಪ್ರಸಾದ್‌ ಶೆಟ್ಟಿ, ಮಾಧವ ಎಸ್‌. ರೈ ಕುಂಬ್ರ ಮೊದಲಾದವರು ಉಪಸ್ಥಿತರಿದ್ದರು.

ಕಾನೂನು ಕ್ರಮ
ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಸಹಾಯಕ ಕಮಿಷನರ್‌ ಕಚೇರಿ ಮ್ಯಾನೇಜರ್‌, ರಾಷ್ಟ್ರ ಧ್ವಜದ ಅವಮಾನ ಆಗುತ್ತಿದ್ದಲ್ಲಿ ಸಾರ್ವಜನಿಕರು ನಮ್ಮನ್ನು ಸಂಪರ್ಕಿಸಬಹುದು. ನಾವು ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.