ಪುತ್ತೂರಿನಲ್ಲಿ ಶೀಘ್ರ ಪೌರಬಂಧು ವಿಶ್ರಾಂತಿ ಗೃಹ

ಬಿಇಒ ಕಚೇರಿ ಸನಿಹದ ಸರಕಾರಿ ಜಾಗದಲ್ಲಿ ಅನುಷ್ಠಾನಕ್ಕೆ ನಿರ್ಧಾರ

Team Udayavani, May 7, 2022, 9:09 AM IST

rest-room

ಪುತ್ತೂರು: ಪೌರ ಕಾರ್ಮಿಕರ ವಿಶ್ರಾಂತಿಗಾಗಿ ಪುತ್ತೂರು ನಗರದಲ್ಲಿ ಪೌರಬಂಧು ವಿಶ್ರಾಂತಿ ಗೃಹ ರಚನೆ ಕಾರ್ಯ ಪೂರ್ಣಗೊಂಡಿದ್ದು ಸ್ಥಳ ಹಸ್ತಾಂತರ ಪ್ರಕ್ರಿಯೆ ಮುಗಿದ ಕೆಲವು ದಿನಗಳಲ್ಲಿ ಅನುಷ್ಠಾನ ನಡೆದು ಸೇವೆಗೆ ಸಿದ್ಧವಾಗಲಿದೆ.

ದ.ಕ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಪುತ್ತೂರು ನಗರಸಭೆಯು ಪೌರ ಕಾರ್ಮಿಕರಿಗಾಗಿ ಈ ನಿರ್ಮಾಣ ಯೋಜನೆ ಹಮ್ಮಿಕೊಂಡಿದ್ದು, ಅಗತ್ಯ ಬಿದ್ದಲ್ಲಿ ಬೇರೆ ಕಡೆಗೂ ಸ್ಥಳಾಂತರ ಮಾಡಬಹುದಾದ ಕಂಟೈನರ್‌ ಮಾದರಿಯ ಪೌರಬಂಧು ವಿಶ್ರಾಂತಿ ಗೃಹ ಇದಾಗಿದೆ.

ಅಮೃತ ನಿರ್ಮಲ ನಗರ ಯೋಜನೆ ಅಡಿಯಲ್ಲಿ ಪುತ್ತೂರು ನಗರಸಭೆಗೆ 1 ಕೋಟಿ ರೂ. ಮಂಜೂರಾಗಿದ್ದು, ಇದರಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಪೌರ ಬಂಧು ವಿಶ್ರಾಂತಿ ಗೃಹ ನಿರ್ಮಿಸಲು ನಿರ್ಧರಿಸಲಾಗಿತ್ತು. ಶ್ರೇಯಸ್‌ ಆಚಾರ್‌ ಎಸ್‌.ವಿ.ಗೆ ಟೆಂಡರ್‌ ನೀಡಲಾಗಿದ್ದು ಕಂಟೈನರ್‌ ಸಿದ್ಧಗೊಂಡಿದೆ.

ವಿಶ್ರಾಂತಿ ಗೃಹ ಹೇಗಿರಲಿದೆ?

ಪೌರ ಬಂಧು ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಪುತ್ತೂರು ನಗರಸಭೆಯಿಂದ ಈಗಾಗಲೇ ಸ್ಥಳ ಗುರುತಿಸಲಾಗಿದೆ. ಬಿಇಒ ಕಚೇರಿ ಪಕ್ಕದ ಖಾಲಿ ಸರಕಾರಿ ಜಾಗ ಹಸ್ತಾಂತರ ಆದ ತತ್‌ ಕ್ಷಣ ಕಂಟೈನರ್‌ ಮಾದರಿಯಲ್ಲಿ ಪೌರಬಂಧು ವಿಶ್ರಾಂತಿ ಗೃಹವನ್ನು ಅಲ್ಲಿ ಇಡಲಾಗುತ್ತದೆ. ಅಗತ್ಯ ಬಿದ್ದರೆ ಸ್ಥಳಾಂತರಿಸುವ ವ್ಯವಸ್ಥೆಯೂ ಇದರಲ್ಲಿದೆ.

ದಿನನಿತ್ಯ ನಗರದ ಸ್ವಚ್ಛತೆಗಾಗಿ ಕೆಲಸ ಮಾಡುವ ಪೌರ ಕಾರ್ಮಿಕರು ತಮ್ಮ ವೈಯಕ್ತಿಕ ಸ್ವಚ್ಛತೆ, ವಿಶ್ರಾಂತಿಗಾಗಿ ಪರದಾಡುವ ಸನ್ನಿವೇಶವಿದೆ. ಇದನ್ನು ನೀಗಿಸಲು ಈ ಕಂಟೈನರ್‌ ಸಹಕಾರಿಯಾಗಲಿದೆ. ಇದರಲ್ಲಿ ಕಾರ್ಮಿಕರು ವಿಶ್ರಾಂತಿ ಪಡೆಯುವ ವ್ಯವಸ್ಥೆಯಿದೆ. ಕುಡಿಯುವ ನೀರಿನ ಪೂರೈಕೆ ಇದೆ. ಇದಲ್ಲದೆ ಸ್ನಾನ ಗೃಹ, ಶೌಚಾಲಯ ಇತ್ಯಾದಿ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಪೌರಾಡಳಿತ ಸಂಸ್ಥೆಯಲ್ಲೂ ಈ ವ್ಯವಸ್ಥೆ ಇಲ್ಲ. ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಅನುಷ್ಠಾನವಾಗುತ್ತಿದೆ. ಪೌರ ಕಾರ್ಮಿಕರ 100 ಹುದ್ದೆಗಳು ಇಲ್ಲಿಗೆ ಮಂಜೂರಾಗಿದ್ದರೂ, ಪ್ರಸ್ತುತ ಕೇವಲ 11 ಹುದ್ದೆಗಳು ಭರ್ತಿಯಾಗಿ ನಗರ ಸ್ವಚ್ಛತೆ, ಗುಡಿಸುವಿಕೆ, ಗಿಡಗಳ ಕಟ್ಟಿಂಗ್‌ ಮುಂತಾದ ಕೆಲಸಗಳಿಗೆ ತಾತ್ಕಾಲಿಕ ನೆಲೆಯಲ್ಲಿ 44 ಕಾರ್ಮಿಕರು ಕಾರ್ಯನಿರ್ವಹಿಸುತ್ತಿ¨ªಾರೆ. ಈ ವರೆಗೆ ಪೌರಕಾರ್ಮಿಕರು ವಿಶ್ರಾಂತಿಗಾಗಿ ನಗರದೊಳಗಿನ ಮರದಡಿ, ಬಸ್‌ ನಿಲ್ದಾಣ, ರಸ್ತೆ ಬದಿಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಜಿಲ್ಲೆಯಲ್ಲೇ ಪ್ರಥಮ

ಅಮೃತ ನಿರ್ಮಲ ನಗರ ಯೋಜನೆಯಡಿ ಸರಕಾರದಿಂದ ಮಂಜೂರಾದ ಅನುದಾನದಲ್ಲಿ ದ.ಕ. ಜಿಲ್ಲೆಯಲ್ಲೇ ಪ್ರಥಮ ಯೋಜನೆಯಾಗಿ ಪೌರಬಂಧು ವಿಶ್ರಾಂತಿ ಗೃಹ ಅನುಷ್ಠಾನಗೊಳ್ಳುತ್ತಿದೆ. -ಜೀವಂಧರ್‌ ಜೈನ್‌, ಪುತ್ತೂರು ನಗರಸಭೆ ಅಧ್ಯಕ್ಷ.

ಪ್ರಕ್ರಿಯೆ ಪ್ರಗತಿಯಲ್ಲಿ

ಪೌರ ಕಾರ್ಮಿಕರ ವಿಶ್ರಾಂತಿಗಾಗಿ ಪೌರಬಂಧು ವಿಶ್ರಾಂತಿ ಗೃಹ ಎಂಬ ವಿಶಿಷ್ಟ ಕಂಟೈನರ್‌ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಾರದೊಳಗೆ ಬಿಇಒ ಕಚೇರಿ ಸನಿಹದ ಸರಕಾರಿ ಜಾಗದಲ್ಲಿ ಇರಿಸುವ ನಿಟ್ಟಿನಲ್ಲಿ ಪ್ರಯತ್ನ ಪ್ರಗತಿಯಲ್ಲಿದೆ. -ಮಧು ಎಸ್‌. ಮನೋಹರ್‌, ಪೌರಾಯುಕ್ತರು, ಪುತ್ತೂರು ನಗರಸಭೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.