ರಸ್ತೆ ಅಪಘಾತ ಪ್ರಕರಣ: 10 ತಿಂಗಳುಗಳಲ್ಲಿ 43 ಸಾವು

ಸುಳ್ಯ-ಪುತ್ತೂರು: ಕೋವಿಡ್‌ಗಿಂತ ಅಪಘಾತದ ಸಾವಿನ ಸಂಖ್ಯೆ ಹೆಚ್ಚಳ

Team Udayavani, Feb 10, 2021, 12:33 PM IST

ರಸ್ತೆ ಅಪಘಾತ ಪ್ರಕರಣ: 10 ತಿಂಗಳುಗಳಲ್ಲಿ 43 ಸಾವು

ಪುತ್ತೂರು: ಸುಳ್ಯ-ಪುತ್ತೂರು ತಾಲೂಕಿನಲ್ಲಿ 10 ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ 43 ಮಂದಿ ಜೀವ ತೆತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘನೆಯಿಂದಲೇ ಈ ಸಾವು ಸಂಭವಿಸಿದೆ. ಆತಂಕದ ಸಂಗತಿ ಅಂದರೆ, ಮಹಾಮಾರಿ ಕೋವಿಡ್‌ ಸಾವಿನ ಪ್ರಮಾಣಕ್ಕಿಂತಲೂ ಅಪಘಾತದಿಂದ ಉಂಟಾದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಯುವಕರೇ ಅಧಿಕ :

ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ ನೀಡಿದ ಅಂಕಿ-ಅಂಶದ ಪ್ರಕಾರ ಹತ್ತು ತಿಂಗಳುಗಳಲ್ಲಿ ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ 238 ಅಪಘಾತ ಪ್ರಕರಣ ಸಂಭವಿಸಿದೆ. ಇದರಲ್ಲಿ 43 ಮಂದಿ ಜೀವ ಕಳೆದುಕೊಂಡಿದ್ದಾರೆ. ಮೃತರ ಪೈಕಿ 32 ಮಂದಿ 30 ವರ್ಷ ಒಳಗಿನ ಯುವಕರು. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶೇ. 60ರಷ್ಟು ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದು, ಚೇತರಿಸಿಕೊಳ್ಳಲು ಹಲವು ತಿಂಗಳುಗಳೇ ಬೇಕು ಅನ್ನುತ್ತಿದೆ ಚಿತ್ರಣ.

ಅತೀ ವೇಗ ಕಾರಣ ;

ಅಪಘಾತಕ್ಕೆ ಮುಖ್ಯವಾಗಿ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಕಾರಣ. ತಿರುವು ರಸ್ತೆಯಲ್ಲಿ ಓವರ್‌ಟೇಕ್‌, ರಸ್ತೆ ನಡು ಭಾಗದಲ್ಲಿ ಸಂಚಾರ, ಹೆಲ್ಮೆಟ್‌-ಸೀಟ್‌ ಬೆಲ್ಟ್ ರಹಿತ ಸಂಚಾರ, ಮೊಬೈಲ್‌ ಬಳಕೆ ಮಾಡುತ್ತಲೇ ಚಾಲನೆ, ಮದ್ಯಪಾನ ಸೇವಿಸಿ ಚಾಲನೆ, ಸಿಂಗಲ್‌ ಹೆಡ್‌ಲೈಟ್‌ ಬಳಕೆ, ಓವರ್‌ ಲೋಡ್‌ ಹೀಗೆ ಹಲವು ಕಾರಣಗಳಿಂದ ಅಪಘಾತ ಸಂಭವಿಸಿ ಜೀವ ಹಾನಿಯಾಗುತ್ತಿದೆ ಎನ್ನುತ್ತಿದೆ ವರದಿ. ಶೇ. 2ರಿಂದ 5ರಷ್ಟು ರಸ್ತೆ ವಿನ್ಯಾಸದಿಂದ ಅಪಘಾತ ಉಂಟಾದ ಬಗ್ಗೆ ಉಲ್ಲೇಖೀಸಲಾಗಿದೆ.

ನಿಯಂತ್ರಣ ಸಾಧನಗಳಿಗೆ ಢಿಕ್ಕಿ :

ಅಪಘಾತ ಸಂಭವಿಸಿದ ಸ್ಥಳದಲ್ಲಿ ಬ್ಯಾರಿಕೇಡ್‌ ಅಳವಡಿಸಿ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಂಡರೂ ಬ್ಯಾರಿಕೇಡ್‌ಗಳಿಗೆ ಢಿಕ್ಕಿ ಹೊಡೆದ ಘಟನೆಗಳಿವೆ. ಅತಿ ವೇಗವಾಗಿ ವಾಹನ ಚಲಾಯಿಸುವವರಿಗೆ ನಿಯಂತ್ರಣ ಸಾಧನದ ಬಗ್ಗೆ ಅರಿವಿರುವುದಿಲ್ಲ. ವಾಹನ ಅಪಘಾತಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ರಾತ್ರಿ ವೇಳೆ ಬ್ಯಾರಿಕೇಡ್‌ ತೆರವು ಮಾಡುತ್ತಿದೆ. ಹಲವೆಡೆ ಹಂಪ್‌ ಹಾಕಿದ್ದರೂ, ವೇಗಕ್ಕೆ ಮಿತಿವೊಡ್ಡಲು ಶಕ್ತವಾಗಿಲ್ಲ.

18 ಲಕ್ಷ ರೂ.ದಂಡ ಸಂಗ್ರಹ :

ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಹೆಲ್ಮೆಟ್‌-ಸೀಟ್‌ ಬೆಲ್ಟ್ ರಹಿತ ಸಂಚಾರ, ಮೊಬೈಲ್‌ ಬಳಕೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರ್‌ಟಿಒ ಒಂದು ವರ್ಷದಲ್ಲಿ 1, 700 ಪ್ರಕರಣ ದಾಖಲಿಸಿಕೊಂಡಿದೆ. 18 ಲಕ್ಷ ರೂ. ದಂಡ ಮೊತ್ತ ಸಂಗ್ರಹಿಸಿದೆ. ಕೋವಿಡ್‌ ಲಾಕ್‌ಡೌನ್‌ ಮುಕ್ತಾಯಗೊಂಡ ಅನಂತರ ವಾಹನ ಓಡಾಟ ಹೆಚ್ಚಾಗಿ ಅಪಘಾತ ಪ್ರಮಾಣ ಏರಿಕೆಯತ್ತಲೇ ಸಾಗಿದೆ.

ಸಂಚಾರ ಠಾಣೆ ಇಲ್ಲ : ಸಂಪಾಜೆ-ಮಾಣಿ ತನಕದ ವ್ಯಾಪ್ತಿಯಲ್ಲಿ ಪುತ್ತೂರು ನಗರದಲ್ಲಿ ಮಾತ್ರ ಸಂಚಾರ ಠಾಣೆ ಇದೆ. ಸುಳ್ಯ ತಾಲೂಕಿನಲ್ಲಿ ಸಂಚಾರ ಠಾಣೆ ಇಲ್ಲ. ಹೀಗಾಗಿ ಅಪಘಾತ ಸಂದರ್ಭ ತತ್‌ಕ್ಷಣ ಕಾರ್ಯನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ. ಹಲವು ವರ್ಷಗಳ ಹಿಂದೆಯೇ ಸುಳ್ಯಕ್ಕೆ ಸಂಚಾರ ಠಾಣೆಗೆ ಬೇಡಿಕೆ ಸಲ್ಲಿಸಿದ್ದರೂ ಅದು ಈ ತನಕ ಈಡೇರಿಲ್ಲ. ಕಳೆದ ವರ್ಷ ಕೇವಲ ಮೂರು ತಿಂಗಳಲ್ಲಿ ಸುಳ್ಯ ವ್ಯಾಪ್ತಿಯಲ್ಲಿ 12ಕ್ಕೂ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಜೀವ ತೆತ್ತಿದ್ದಾರೆ. ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಒಂದು ತಿಂಗಳಲ್ಲಿ ನಾಲ್ಕು ಅಪಘಾತ ಸಂಭವಿಸಿ ಒಟ್ಟು 7 ಮಂದಿ ಮೃತಪಟ್ಟ ಘಟನೆ ನಡೆದಿತ್ತು.

ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವ ಕಾರಣ ರಸ್ತೆ ಅಪಘಾತ ಸಂಭವಿಸುತ್ತಿದೆ. ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ. ಇದು ಆತಂಕಕಾರಿ ಸಂಗತಿ. ಹೀಗಾಗಿ ಪ್ರತಿ ಶಾಲಾ, ಕಾಲೇಜುಗಳಿಗೆ ತೆರಳಿ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ.  -ಸಂಜೀವ ಮಠಂದೂರು, ಶಾಸಕರು

ಶೇ. 95ಕ್ಕೂ ಅಧಿಕ ಅಪಘಾತ ಪ್ರಕರಣಕ್ಕೆ ಅಜಾಗರೂಕತೆಯ ಚಾಲನೆ ಕಾರಣ. ಹತ್ತು ತಿಂಗಳಲ್ಲಿ ಉಭಯ ತಾಲೂಕಿನಲ್ಲಿ 43 ಮಂದಿ ಸಾವನ್ನಪ್ಪಿದ್ದು, ಅತಿ ವೇಗ, ಹೆಲ್ಮೆಟ್‌-ಸೀಟ್‌ ಬೆಲ್ಟ್ ರಹಿತ ಚಾಲನೆ ಇದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಆಚರಿಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. -ಆನಂದ ಗೌಡ,  ಪ್ರಾದೇಶಿಕ ಸಾರಿಗೆ ಅಧಿಕಾರಿ, ಪುತ್ತೂರು

 

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.