Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ
Team Udayavani, May 10, 2024, 10:48 PM IST
ಬಂಟ್ವಾಳ: ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿ ಹೆದ್ದಾರಿಯಲ್ಲಿ ಎರಡು ಕಾರುಗಳು ಢಿಕ್ಕಿ ಹೊಡೆದಿದ್ದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಎರಡು ಕಾರುಗಳ ಪ್ರಯಾಣಿಕರಾದ ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ಪಾದೆ ನಿವಾಸಿ ನವವಿವಾಹಿತ ಸುನೀಲ್ ಗಾಯಗೊಂಡಿದ್ದಾರೆ.
ಪಂಜಿಕಲ್ಲುನಿಂದ ನರಿಕೊಂಬು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬಿ.ಸಿ.ರೋಡು ಕಡೆಯಿಂದ ತೆರಳುತ್ತಿದ್ದ ಕಾರು ಮುಖಾಮುಖೀ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದ್ದು, ಅಪಘಾತದಿಂದ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಬಳಿಕ ಕ್ರೇನ್ ಮೂಲಕ ಕಾರುಗಳನ್ನು ಹೆದ್ದಾರಿಯಿಂದ ಬದಿಗೆ ಸರಿಸಲಾಯಿತು. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.