ಜಾಂಬ್ರಿ ಗುಹೆ ಸಂಪರ್ಕ ರಸ್ತೆಯ ದುಃಸ್ಥಿತಿ: ಪಂ. ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ


Team Udayavani, Sep 22, 2020, 3:19 PM IST

ಜಾಂಬ್ರಿ ಗುಹೆ ಸಂಪರ್ಕ ರಸ್ತೆಯ ದುಃಸ್ಥಿತಿ: ಪಂ. ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಪಾಣಾಜೆ: ಐತಿಹಾಸಿಕ ಸ್ಥಳ ಜಾಂಬ್ರಿ ಗುಹೆಯನ್ನು ಸಂಪರ್ಕಿಸಿ ಅನಂತರ ಕೇರಳವನ್ನು ಸೇರುವ ಆರ್ಲಪದವು-ಕಡಂದೇಲು ರಸ್ತೆ ಸ್ಥಿತಿ ತೀರಾ ಶೋಚನೀಯವಾಗಿದೆ. ರಸ್ತೆ ಅಭಿವೃದ್ಧಿ ಮಾಡದಿದ್ದರೆ ಮುಂದಿನ ಪಂ.ಹಾಗೂ ಇತರ ಚುನಾವಣೆ ಬಹಿಷ್ಕಾರ ಮಾಡಲು ಇಲ್ಲಿನ ನಾಗರಿಕರು ತೀರ್ಮಾನಿಸಿ ಪಾಣಾಜೆ ಗ್ರಾಮದ ಮುಖ್ಯ ಪೇಟೆ ಆರ್ಲಪದವಿನಲ್ಲಿ ಬ್ಯಾನರ್‌ ಅಳವಡಿಸಿದ್ದಾರೆ.

ಪಾಣಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಆರ್ಲಪದವು-ಕಡಂದೇಲು ಮೂಲಕ ಕೇರಳವನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಕಳೆದ 25 ವರ್ಷಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಲವು ಮನವಿಗಳನ್ನು ನೀಡಿದ್ದಾರೆ. ವಿವಿಧ ಪಕ್ಷಗಳ ಶಾಸಕರು ಆಯ್ಕೆಯಾದರೂ ಈ ರಸ್ತೆ ಮಾತ್ರ ಅಭಿವೃದ್ಧಿಗೊಂಡಿಲ್ಲ. ಇದರಿಂದ ನೆರೆಯ ಕೇರಳ ರಾಜ್ಯದವರೂ ತೊಂದರೆ ಅನುಭವಿಸುತ್ತಿದ್ದಾರೆ.

ಗ್ರಾಮಸಭೆ, ಸಾಮಾನ್ಯ ಸಭೆ, ಪ್ರತಿಭಟನೆಗೆ ಬೆಲೆ ಇಲ್ಲ
ರಸ್ತೆಯನ್ನು ಅಭಿವೃದ್ಧಿಗೊಳಿಸುವಂತೆ ಇಲ್ಲಿನ ನಾಗರಿಕರು ಗ್ರಾಮಸಭೆಯಲ್ಲಿ ಮನವಿ ಮಾಡಿದರೂ ನಿರ್ಣಯ ಕೈಗೊಂಡರೂ ಪಂ. ಸದಸ್ಯರು ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿದರೂ ಪ್ರತಿಭಟನೆ ಮಾಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಇದಕ್ಕೆ ಗಮನವೇ ಹರಿಸಿಲ್ಲ.

ರಸ್ತೆ ಅಭಿವೃದ್ಧಿ ಕಿಚ್ಚು
ಬಹುತೇಕ ಎಲ್ಲ ರಸ್ತೆಗಳು ಅಭಿವೃದ್ಧಿ ಗೊಳ್ಳುತ್ತಿವೆ. ಈ ರಸ್ತೆ ಮಾತ್ರ ಕಚ್ಚಾ ರಸ್ತೆಯಾಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಕೇರಳದ ಮುಳ್ಳೇರಿಯವನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ಚುನಾವಣೆ ಸಂದರ್ಭ ವಿವಿಧ ಪಕ್ಷಗಳ ನಾಯಕರು ಭರವಸೆ ನೀಡಿದ್ದರೂ ರಸ್ತೆ ಅಭಿವೃದ್ಧಿಗೊಳಿಸಿಲ್ಲ ಎಂಬ ಆರೋಪ ನಾಗರಿಕರಿಂದ ಕೇಳಿಬರುತ್ತಿದೆ. ಮತದಾನ ಮಾಡಬೇಕಾದರೆ ರಸ್ತೆ ಅಭಿವೃದ್ಧಿ ಮಾಡಿಸಬೇಕು. ಅಲ್ಲಿಯವರೆಗೆ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಆರ್ಲಪದವು-ಕಡಂದೇಲು ನಾಗರಿಕರು ಹಾಕಿದ ಬ್ಯಾನರ್‌ ಪಾಣಾಜೆ ಗ್ರಾಮದ ಕಡಂದೇಲು ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ರಾರಾಜಿಸುತ್ತಿದೆ.

ಊಹಾಪೋಹಗಳು
ಆರ್ಲಪದವಿನಿಂದ ಸುಮಾರು 1.50 ಕಿ. ಮೀ. ಅನಂತರ ಅರಣ್ಯ ಪ್ರದೇಶ ಬರುತ್ತದೆ. ಅರಣ್ಯ ಇಲಾಖೆಯವರು ರಸ್ತೆ ಅಭಿವೃದ್ಧಿಗೆ ಸಹಕರಿಸುತ್ತಿಲ್ಲ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ರಾಜಕಾರಣ ಮತ್ತು ಅಧಿಕಾರಿಗಳಲ್ಲಿ ಅರಣ್ಯ ಇಲಾಖೆಯ ಅಭ್ಯಂತರ ಇದ್ದರೆ ಆರ್ಲಪದವುನಿಂದ 1 ಕಿ.ಮೀ.ರಸ್ತೆಯನ್ನು ಅಭಿವೃದ್ಧಿ ಗೊಳಿಸಬಹುದಿತ್ತಲ್ಲ ಎಂಬ ಮಾತುಗಳೂ ಇವೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಸಮಸ್ಯೆ ಪರಿಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶುಕ್ರವಾರ ನನ್ನ ಗಮನಕ್ಕೆ ಬಂದಿದೆ. ಬ್ಯಾನರ್‌ ಅನ್ನು ಅನುಮತಿ ಇಲ್ಲದೆ ಹಾಕಲಾಗಿದೆ. ಚುನಾವಣೆ ಘೋಷಣೆ ಆದ ಕೂಡಲೇ ಬ್ಯಾನರ್‌ ತೆಗೆಯುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.
ಯಶಸ್‌ ಮಂಜುನಾಥ, ಆಡಳಿತಾಧಿಕಾರಿ, ಪಾಣಾಜೆ ಗ್ರಾ.ಪಂ

ಸುಮಾರು 1 ಕಿ.ಮೀ. ರಸ್ತೆ ಬಂಟಾಜೆ ರಕ್ಷಿತಾರಣ್ಯದ ಮೂಲಕ ಹಾದು ಹೋಗುತ್ತದೆ. ಅರಣ್ಯ ಕಾಯ್ದೆ ಪ್ರಕಾರ ನಿಯಮಾನುಸಾರ ರಸ್ತೆ ಅಭಿವೃದ್ಧಿ ಗೊಳಿಸಲು ಸಾಧ್ಯವಿದೆ. ಅರಣ್ಯ ಇಲಾಖೆಯಿಂದ ಯಾವುದೇ ಅಭ್ಯಂತರವಿಲ್ಲ. ಸಾರ್ವಜನಿಕರು ಅರಣ್ಯ ಇಲಾಖೆಯ ಮೇಲೆ ಅಪವಾದ ಮಾಡುವುದು ಸರಿಯಲ್ಲ.

-ಮೋಹನ, ಅರಣ್ಯ ಅಧಿಕಾರಿ, ಪಾಣಾಜೆ

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.