ರಸ್ತೆ ಬದಿ ಪಾರ್ಕಿಂಗ್‌: ಮುಂದುವರಿದ ಗೊಂದಲ


Team Udayavani, Sep 2, 2018, 12:06 PM IST

2-september-11.jpg

ಪುತ್ತೂರು: ನಗರದ ಮುಖ್ಯ ರಸ್ತೆಯ ಗಾಂಧಿ ಕಟ್ಟೆಯ ಬಳಿಯಿಂದ ಬಸ್‌ ನಿಲ್ದಾಣದ ತನಕದ ಪಾರ್ಕಿಂಗ್‌ಗೆ ಸಂಬಂಧಪಟ್ಟಂತೆ ಪೊಲೀಸ್‌ ಇಲಾಖೆ ಹಾಗೂ ಆಟೋ ರಿಕ್ಷಾ ಚಾಲಕರ ಮಧ್ಯೆ ಶನಿವಾರವೂ ಗೊಂದಲ ಮುಂದುವರಿಯಿತು. ಶನಿವಾರ ಬೆಳಗ್ಗಿಯಿಂದ ಮಧ್ಯಾಹ್ನದ ತನಕ ಸಂಚಾರ ಪೊಲೀಸರು ಹಾಗೂ ಅಟೋ ರಿಕ್ಷಾ ಚಾಲಕರ ಮಧ್ಯೆ ಮಾತುಕತೆ ನಡೆಯಿತು. ಶಾಸಕರ ಪರವಾಗಿ ಮುಖಂಡರಾದ ಸಂತೋಷ್‌ ರೈ ಕೈಕಾರ ಹಾಗೂ ದಿನೇಶ್‌ ಜೈನ್‌ ರಿಕ್ಷಾ ಚಾಲಕರು ಹಾಗೂ ಪೊಲೀಸರ ಮಧ್ಯೆ ಸಮನ್ವಯಕ್ಕೆ ಪ್ರಯತ್ನ ನಡೆಸಿದರು.

ಪಾರ್ಕಿಂಗ್‌ನ ಮಧ್ಯ ಭಾಗದಲ್ಲಿ ಎ.ಎಂ. ಕಾಂಪ್ಲೆಕ್ಸ್‌ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಅನುವು ಮಾಡಿಕೊಡುವಂತೆ ಸಂಚಾರ ಠಾಣೆ ಪಿಎಸ್‌ಐ ನಾರಾಯಣ ರೈ ರಿಕ್ಷಾ ಚಾಲಕರ ಸಂಘದ ಮುಖಂಡರಲ್ಲಿ ಮನವಿ ಮಾಡಿದರು. ಅಷ್ಟು ವ್ಯಾಪ್ತಿಯಲ್ಲಿ ಮತ್ತು ತಡೆಬೇಲಿಯ ಒಳಭಾಗದಲ್ಲಿ ದ್ವಿಚಕ್ರ ಪಾರ್ಕಿಂಗ್‌ ಮಾಡುವುದಕ್ಕೆ ರಿಕ್ಷಾ ಚಾಲಕರು ಆಕ್ಷೇಪ ವ್ಯಕ್ತಪಡಿಸಿದರು. ಕಟ್ಟಡಕ್ಕೆ ಹೋಗುವ ದಾರಿ ಮತ್ತು ಮಧ್ಯ ಭಾಗದಲ್ಲಿ 10-15 ದ್ವಿಚಕ್ರಗಳನ್ನು ನಿಲ್ಲಿಸಲು ಅವಕಾಶ ನೀಡಲು ರಿಕ್ಷಾ ಚಾಲಕರು ಸಮ್ಮತಿಸಿದರು. ಆದರೆ ಅಂತಿಮವಾಗಿ ಪೊಲೀಸರು ಹಾಗೂ ರಿಕ್ಷಾ ಚಾಲಕರ ಮಧ್ಯೆ ಹೊಂದಾಣಿಕೆ ಸಾಧ್ಯವಾಗದೆ ಪೊಲೀಸರು ತೆರಳಿದರು.

ಮಂಗಳವಾರ ಚರ್ಚೆ
ಸೆ. 3ರಂದು ನಗರ ಸಭೆ ಚುನಾವಣೆ ಫಲಿತಾಂಶವೂ ಬರುವುದರಿಂದ ಮತ್ತು ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಸೆ. 4ರಂದು ಪಾರ್ಕಿಂಗ್‌ ಸಮಸ್ಯೆಯ ಕುರಿತು ಮಾತುಕತೆ ನಡೆಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸಂಧಾನಕಾರರು ಹಾಗೂ ರಿಕ್ಷಾ ಚಾಲಕರು ಒತ್ತಾಯಿಸಿದರು.

ಹಿಂದೂ ಸಂಘಟನೆಯ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಸ್ಥಳಕ್ಕೆ ಭೇಟಿ ನೀಡಿ ರಿಕ್ಷಾ ಚಾಲಕರ ಜತೆ ಚರ್ಚೆ ನಡೆಸಿದರು. ವಾಣಿಜ್ಯ ಕಟ್ಟಡದ ವರ್ತಕರ ಜತೆಯೂ ಪೊಲೀಸರು ಮಾತುಕತೆ ನಡೆಸಿದರು. ಮಧ್ಯಾಹ್ನ ಪೊಲೀಸರು ಸೂಚಿಸಿದ ಸ್ಥಳಗಳಲ್ಲೂ ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್‌ ಮಾಡಿರುವುದು ಕಂಡುಬಂದಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.