Road works: ಅರಂತೋಡು-ಎಲಿಮಲೆ ರಸ್ತೆ ಕಾಮಗಾರಿ ಅಪೂರ್ಣ 

ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹ

Team Udayavani, May 17, 2023, 3:29 PM IST

Road works: ಅರಂತೋಡು-ಎಲಿಮಲೆ ರಸ್ತೆ ಕಾಮಗಾರಿ ಅಪೂರ್ಣ 

ಅರಂತೋಡು: ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿಯ ಮೊದಲ ಹಂತ 1 ಕೋಟಿ ರೂ. ವೆಚ್ಚದಲ್ಲಿ ಪೂರ್ತಿಗೊಂಡಿದ್ದು, 2ನೇ ಹಂತಕ್ಕೆ 2 ಕೋಟಿ ರೂ. ಅನುದಾನ ಇಟ್ಟಿದ್ದು, ಕಾಮಗಾರಿ ಅರ್ಧಕ್ಕೆ ನಿಂತಿದೆ. ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಡ್ತಲೆಯ ನಾಗರಿಕ ಹಿತರಕ್ಷಣ ವೇದಿಕೆಯು ಪಟ್ಟು ಹಿಡಿದ ಪರಿಣಾಮ ವಾಗಿ 1 ಕೋಟಿ ರೂ. ಅನುದಾನದಲ್ಲಿ ಅರಂತೋಡಿನಿಂದ ಕಾಮಗಾರಿ ಆರಂಭವಾಗಿ 1,357 ಮೀ. ರಸ್ತೆ ಅಭಿವೃದ್ಧಿ ಆಗಿದೆ. ಬಳಿಕ ಒತ್ತಡದ ಪರಿಣಾಮ 2 ಕೋಟಿ ರೂ. ಅನುದಾನ ಇಡಲಾಗಿತ್ತು. ಆ ಕಾಮಗಾರಿ ಆರಂಭವಾಗಿ ಇದೀಗ ಒಂದು ಕೋಟ್‌ ಡಾಮರು ಹಾಕಲಾಗಿದೆ.

ಅರಂತೋಡಿನಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಆಗಿದೆ. ಆದರೆ ಈ ರಸ್ತೆ ಬದಿ ಅರ್ಧ ಅಡಿ ಜಾಗವೂ ಇಲ್ಲ ಮತ್ತು ವಿದ್ಯುತ್‌ ಕಂಬಗಳು ರಸ್ತೆಗೆ ತಾಗಿಕೊಂಡಿದೆ. ರಸ್ತೆ ಬದಿಯೇ ಚರಂಡಿ, ವಿದ್ಯುತ್‌ ಕಂಬಗಳು ಹಾಗೂ ಮರಗಳು ಇರುವುದರಿಂದ ಮುಂದೆ ಸಮಸ್ಯೆಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಜಂಟಿಯಾಗಿ ಅಪಾಯ ಸಂಭವಿಸುವ ಮೊದಲು ಎಚ್ಚೆತ್ತು ಈ ಬಗ್ಗೆ ಮಳೆಗಾಲ ಆರಂಭಕ್ಕೆ ಪೂರ್ವ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ. ಈ ರಸ್ತೆಯ ದುಸ್ಥಿತಿಯಿಂದ ಮೇ 14ರಂದು ಟಿಪ್ಪರ್‌ ರಸ್ತೆ ಬದಿಗೆ ಹೋಗಿ ಬಳಿಕ ಅದನ್ನು ಜೆಸಿಬಿ ಮೂಲಕ ಮೇಲೆತ್ತಲಾಗಿತ್ತು. ಎರಡು ದಿನ ಅಂತರದಲ್ಲಿ ಕಾರ್‌ ಮತ್ತು ಪಿಕಪ್‌ ವಾಹನ ಚರಂಡಿಗೆ ಬಿದ್ದಿರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಶೀಘ್ರ ಅಭಿವೃದ್ಧಿಗೆ ಆಗ್ರಹ
1 ಕೋಟಿ ರೂ. ಅನುದಾನದ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಎರಡನೇ ಹಂತದಲ್ಲಿ ಸುಮಾರು 2.5 ಕಿ.ಮೀ. ರಸ್ತೆಗೆ ಕೇವಲ ಒಂದು ಕೋಟ್‌ ಡಾಮರು ಕಾಮಗಾರಿ ಆಗಿದ್ದು ಇನ್ನೊಂದು ಕೋಟ್‌ ಬಾಕಿ ಇದೆ. ಲೋಕೋಪಯೋಗಿ ಇಲಾಖೆಯಲ್ಲಿ ವಿಚಾರಿಸಿದಾಗ, ಕೆಲವು ತಾಂತ್ರಿಕ ಸಮಸ್ಯೆಗಳು ಇರುತ್ತದೆ ಎಂದು ತಿಳಿಸಿದ್ದಾರೆ. ಶೀಘ್ರವಾಗಿ ಎರಡನೇ ಕೋಟ್‌ ಡಾಮರು ಕಾಮಗಾರಿ ಮುಗಿಸಬೇಕು. ಅಲ್ಲದೆ ವೇದಿಕೆಯ ಬೇಡಿಕೆಯಂತೆ ಅಡ್ತಲೆ ತನಕ ರಸ್ತೆ ಅಭಿವೃದ್ಧಿಗೆ ಇನ್ನೂ 1 ಕಿ.ಮೀ.ಕ್ಕಿಂತ ಅಧಿಕ ಬಾಕಿ ಆಗಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಅರಂತೋಡು -ಎಲಿಮಲೆ ರಸ್ತೆ ಶೀಘ್ರವಾಗಿ ಅಭಿವೃದ್ಧಿಯಾಗಬೇಕು ಎಂದು ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ಅಧ್ಯಕ್ಷ ಹರಿಪ್ರಸಾದ್‌ ಅಡ್ತಲೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.