ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ
Team Udayavani, Apr 10, 2022, 1:52 PM IST
ಬೆಳ್ತಂಗಡಿ: ದೇಶ ವಿದೇಶಗಳಲ್ಲಿ ಸಂಚಲನ ಮೂಡಿಸಿರುವ ಕೆ.ಜಿ.ಎಫ್. ಚಿತ್ರದ ನಾಯಕ ನಟ ರಾಕಿ ಬಾಯ್ ಯಶ್ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.
ಬಳಿಕ ಅನ್ನ ಪ್ರಸಾದ ಸ್ವೀಕರಿಸಿ, ಉಜಿರೆಯ ಮಣ್ಣಿನ ಹರಕೆಯ ಪ್ರಸಿದ್ಧ ಕ್ಷೇತ್ರ ಸುರ್ಯ ಶ್ರೀ ಸದಾಶಿರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಕ್ಷೇತ್ರದ ಆನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಶತೀಶ್ಚಂದ್ರ ಸುರ್ಯಗುತ್ತು ಬರಮಾಡಿಕೊಂಡರು.
ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಮಾಡಿ ದೇವರ ದರ್ಶನ ಪಡೆದರು. ಇನ್ನೇನು ಎ.14 ರಂದು ಕೆ.ಜಿ.ಎಫ್. 2 ಚಿತ್ರವು ದೇಶ ವಿದೇಶಗಲ್ಲಿ ತೆರೆ ಕಾಣಲಿದ್ದು ಚಿತ್ರದ ಯಶಸ್ಸಿಗಾಗಿ ನಾಡಿನ ಪವಿತ್ರ ತೀರ್ಥ ಕ್ಷೇತ್ರಗಳ ಸಂದರ್ಶನ ಮಾಡುವ ಸಲುವಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ, ಸುರ್ಯ ದೇವಸ್ಥಾನ ಭೇಟಿಮಾಡಿರುವುದಾಗಿ ಯಶ್ ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ