ರಬ್ಬರ್‌ ಧಾರಣೆ ನಿರಂತರ ಇಳಿಕೆ; ಬೆಳೆಗಾರ ಸಂಕಷ್ಟದಲ್ಲಿ


Team Udayavani, Dec 31, 2021, 6:25 AM IST

ರಬ್ಬರ್‌ ಧಾರಣೆ ನಿರಂತರ ಇಳಿಕೆ; ಬೆಳೆಗಾರ ಸಂಕಷ್ಟದಲ್ಲಿ

ಪುತ್ತೂರು: ನಾಲ್ಕು ವರ್ಷಗಳ ಬಳಿಕ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದು ಕೋವಿಡ್‌ ಸಂಕಷ್ಟ ಕಾಲದಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದ ರಬ್ಬರ್‌ ಧಾರಣೆ ಇದೀಗ ಮತ್ತೆ ಕುಸಿತದತ್ತ ಮುಖ ಮಾಡಿದ್ದು ಬೆಳೆಗಾರರನ್ನು ಸಂಕಷ್ಟಕ್ಕೆ ಈಡು ಮಾಡಿದೆ.

ತಿಂಗಳ ಹಿಂದೆ ಧಾರಣೆಯು ಕೆಜಿಗೆ ಗರಿಷ್ಠ 192 ರೂ.ಗೆ ತಲುಪಿತ್ತು. ಅನಂತರ ದಿನಂಪ್ರತಿ 2ರಿಂದ 5 ರೂ. ತನಕ ಇಳಿಯುತ್ತ ಕೆಜಿಗೆ 158 ರೂ. ತನಕ ತಲುಪಿದೆ.

ಇಳುವರಿ ಮೇಲೆ ಪರಿಣಾಮ :

ವರ್ಷವಿಡೀ ಮಳೆಯ ಕಾರಣ ರಬ್ಬರ್‌ ಇಳುವರಿಯಲ್ಲೂ ಕೊರತೆಯಾಗಿತ್ತು. ಜತೆಗೆ ಎಲೆ ಉದುರುವ ರೋಗ ಬಾಧೆ ತಟ್ಟಿತು. ಅತ್ಯಧಿಕ ಉತ್ಪಾದನೆಯ ದಕ್ಷಿಣ ರಾಜ್ಯ ಕೇರಳದಲ್ಲಿ ಟ್ಯಾಪಿಂಗ್‌ ಮೇಲೆ ಪರಿಣಾಮ ಬೀರಿತ್ತು. ಕಡಿಮೆ ಉತ್ಪಾದನೆಯ ಕಾರಣ ನೈಸರ್ಗಿಕ ರಬ್ಬರನ್ನು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಿಂದ ಸುಂಕ ರಹಿತವಾಗಿ ಆಮದು ಮಾಡುವಂತೆ ಟಯರ್‌ ಕಂಪೆನಿಗಳು ಆಗ್ರಹಿಸಿವೆ.  ಸದ್ಯ 7,90,000 ಟನ್‌ ಆಮದಿಗೆ ಬೇಡಿಕೆ ಇದೆ. ದೇಶೀಯ ರಬ್ಬರ್‌ ಧಾರಣೆ ಇಳಿಕೆಗೆ ಇದೇ ಕಾರಣ ಎನ್ನುವುದು ತಜ್ಞರ ಅಭಿಪ್ರಾಯ.

ಏರಿಕೆಯ ನಿರೀಕ್ಷೆ:

2021ರ ವರ್ಷದಲ್ಲಿ ವಿಶ್ವ ರಬ್ಬರ್‌ ಆರ್ಥಿಕತೆ ಸುಮಾರು 2 ಲಕ್ಷ ಟನ್‌ ಕೊರತೆ ಕಂಡುಬರಲಿದೆ. ವಿಶ್ವದ ರಬ್ಬರ್‌ ಪೂರೈಕೆ 13.882 ಮಿಲಿಯ ಟನ್‌ ಇದ್ದು ಬೇಡಿಕೆ 14,076 ಮಿಲಿಯ ಟನ್‌ ಇದೆ ಎನ್ನುವುದು ರಬ್ಬರ್‌ ಜರ್ನಲ್‌ ಅಂಕಿ ಅಂಶ. ಆದರೆ ಒಮಿಕ್ರಾನ್‌ ಹರಡುವಿಕೆ ಕಾರಣದಿಂದ ಯುರೋಪಿನಾದ್ಯಂತ ವಿಧಿಸಲಾದ ಹೊಸ ನಿರ್ಬಂಧಗಳು ಮತ್ತು ರಬ್ಬರ್‌ನ ಬೇಡಿಕೆಯ ಮೇಲೂ ಪರಿಣಾಮ ಬೀರಬಹುದು ಎನ್ನುವುದು ರಬ್ಬರ್‌ ಫ್ಯೂಚರ್ಸ್‌ ಮಾರುಕಟ್ಟೆಯ ಅಭಿಪ್ರಾಯ. ಮುಂದಿನ ತಿಂಗಳು ರಬ್ಬರ್‌ ಉತ್ಪಾದನೆ ಕಡಿಮೆಯಾಗುವುದರಿಂದ ಜನವರಿ ಮಧ್ಯದ ವೇಳೆಗೆ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ.

13 ಲಕ್ಷ ಬೆಳೆಗಾರರು :

ಧಾರಣೆ ಏರಿಳಿತದಿಂದ 12 ಲಕ್ಷ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ.  ಆಮದನ್ನು ಕನಿಷ್ಠ ಒಂದು ವರ್ಷ ನಿಷೇಧಿಸಬೇಕು. ಕಿಲೋಗೆ ಕನಿಷ್ಠ 180 ರೂ. ಬೆಂಬಲ ಬೆಲೆ ಘೋಷಿಸಬೇಕು. ರಬ್ಬರ್‌ ಬೋರ್ಡ್‌ ರೈತರಿಂದ ಕಿಲೋಗೆ 180 ರೂ.ಗಳಂತೆ ಕನಿಷ್ಠ ಒಂದು ಲಕ್ಷ ಟನ್‌ ಖರೀದಿಸಬೇಕು. ಆಮದು ಸುಂಕವನ್ನು ಆಮದು ಬೆಲೆಯ ಶೇ. 40ಕ್ಕೆ ಏರಿಸಬೇಕು ಎನ್ನುತ್ತಾರೆ ಬೆಳೆಗಾರ ನಾಗೇಶ್‌ ಪುತ್ತೂರು.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.