ತೆರವುಗೊಳ್ಳದ ಪಾಳು ಬಿದ್ದ ಕಟ್ಟಡ


Team Udayavani, Jan 20, 2021, 2:00 AM IST

ತೆರವುಗೊಳ್ಳದ ಪಾಳು ಬಿದ್ದ ಕಟ್ಟಡ

ಬಂಟ್ವಾಳ: ಸರಕಾರವು ವಿವಿಧ ಇಲಾಖೆಗಳಿಗೆ ಹೊಸ ಕಟ್ಟಡಕ್ಕೆ ಅನುದಾನ ನೀಡಿ ಕಟ್ಟಡ ನಿರ್ಮಾಣ ಮಾಡುತ್ತಿದೆ. ಆದರೆ ಹಳೆ ಕಟ್ಟಡವನ್ನು ಹಾಗೇ ಬಿಟ್ಟು ಪಾಳು ಬೀಳುವಂತೆ ಮಾಡುತ್ತಿದೆ. ಇಂತದ್ದೇ ಕಟ್ಟಡ ಪಾಣೆಮಂಗಳೂರಿನ ಗೂಡಿನ ಬಳಿಯಲ್ಲೊಂದಿದೆ. ಪಶು ಪಾಲನಾ ಇಲಾಖೆಯ ಹಳೆ ಕಟ್ಟಡ ಇದಾಗಿದ್ದು, ಜಾಗ ಪೊಲೀಸ್‌ ಇಲಾಖೆಗೆ ಹಸ್ತಾಂತ ರವಾದರೂ ಹಳೆ ಕಟ್ಟಡ ಹಾಗೇ ಇದೆ.

ಗೂಡಿನಬಳಿಯಲ್ಲಿ ಪಾಣೆ ಮಂಗಳೂರು ಹಳೆ ಸೇತುವೆಯ ಪಕ್ಕದಲ್ಲಿ ಈ ಕಟ್ಟಡವಿದ್ದು, ಗೋಡೆಗಳು ಸುಸ್ಥಿತಿಯಲ್ಲಿದ್ದರೂ, ಅರ್ಧಂಬರ್ಧ ಮೇಲ್ಛಾವಣಿ ಇದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಬಂಟ್ವಾಳದ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಗೂಡಿನಬಳಿಯ ಇನ್ನೊಂದು ಭಾಗದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡ ಬಳಿಕ ಕಚೇರಿ ಅಲ್ಲಿಗೆ ಸ್ಥಳಾಂತರಗೊಂಡಿತ್ತು.

ಬಂಟ್ವಾಳ  ಸಂಚಾರ   ಪೊಲೀಸ್‌ ಠಾಣೆಗೆ ಸ್ವಂತ ಕಟ್ಟಡ ಇಲ್ಲದೇ ಇರುವು ದರಿಂದ ಪಶುಪಾಲನ ಇಲಾಖೆಯ ಈ ನಿವೇಶನವನ್ನು ಸಂಚಾರ ಠಾಣಾ ಕಟ್ಟಡ ನಿರ್ಮಾಣಕ್ಕಾಗಿ ಪೊಲೀಸ್‌ ಇಲಾಖೆಗೆ ನೀಡಲಾಗಿದೆ. ಆದರೆ ಈ ನಿವೇಶನದಲ್ಲಿ ಠಾಣೆಗೆ ಬೇಕಾದಷ್ಟು ಸ್ಥಳಾವಕಾಶ ಇಲ್ಲದೇ ಇರುವುದರಿಂದ ಠಾಣಾ ಕಟ್ಟಡ ನಿರ್ಮಾಣವಾಗಿಲ್ಲ.

ಜತೆಗೆ ಬೇರೆ ಕಡೆಯೂ ಠಾಣೆಗೆ ಸೂಕ್ತ ಸ್ಥಳಾವಕಾಶ ಸಿಗದೇ ಇರುವುದರಿಂದ ಹುಡುಕಾಟ ಇನ್ನೂ ಮುಂದುವರಿದಿದೆ.

ಪಾಳು ಬಿದ್ದಿದೆ ಕಟ್ಟಡ :

ಪಶುಪಾಲನ ಇಲಾಖೆಯ ಹಳೆ ಕಟ್ಟಡವು ಪಾಳು ಬಿದ್ದುಕೊಂಡಿದ್ದು, ಮೇಲ್ಛಾವಣಿಯ ಮರಮಟ್ಟು ಸಂಪೂರ್ಣ ಅವ್ಯಸ್ಥೆಯಲ್ಲಿದೆ. ಹೀಗಾಗಿ ಹಂಚು ಉದುರುತ್ತಿದ್ದು, ಸುತ್ತಮುತ್ತಲೂ ಮನೆಗಳಿರುವುದರಿಂದ ಯಾರಾದರೂ ಕಟ್ಟಡದ ಒಳಗೆ ಹೋಗಿ ಅಪಾಯ ಸಂಭವಿಸಿದಲ್ಲಿ ಯಾರು ಹೊಣೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ಈ ರೀತಿ ಕಟ್ಟಡಗಳು ಪಾಳು ಬಿದ್ದಾಗ ಅಪಾಯಕಾರಿಯಾಗುವ ಜತೆಗೆ ಅನ್ಯ ಕಾರ್ಯಗಳಿಗೂ ಬಳಕೆಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆ ಕಟ್ಟಡ ವನ್ನು ತೆರವುಗೊಳಿಸಿದರೆ ಉತ್ತಮ.

ಮತ್ತೂಂದೆಡೆ ಕಟ್ಟಡವಿರುವ ನಿವೇಶನಕ್ಕೆ ಯಾವುದೇ ತಡೆಬೇಲಿ ಇಲ್ಲದೇ ಇರುವುದರಿಂದ ಯಾರಿಗೂ ಪ್ರವೇಶಕ್ಕೆ ಅವಕಾಶವಿದೆ. ಈ ನಿವೇಶನದ ಒಂದಷ್ಟು ಜಾಗ ಈಗಾಗಲೇ ಒತ್ತುವರಿಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಹೀಗಾಗಿ ಸಂಬಂಧಪಟ್ಟ ಜಾಗವನ್ನು ಅಳತೆ ಮಾಡಿ ಸೂಕ್ತ ತಡೆಬೇಲಿ ಹಾಕುವಂತೆ ಆಗ್ರಹಗಳು ಕೇಳಿಬರುತ್ತಿದೆ. ಸಂಬಂಧಪಟ್ಟ ಅಧಿಕಾರಿ ಈ ಕುರಿತು ಯೋಚಿಸಿ ಕ್ರಮ ತೆಗೆದುಕೊಳ್ಳಬೇಕಿದೆ. ಸಂಚಾರ ಪೊಲೀಸ್‌ ಠಾಣೆ ನಿರ್ಮಾಣಕ್ಕೆ ಇಲ್ಲಿ ಸ್ಥಳಾವಕಾಶದ ಕೊರತೆ ಇದ್ದರೆ ಬೇರೆ ಯಾವುದಾದರೂ ಉದ್ದೇಶಗಳಿಗೆ ಬಳಕೆ ಮಾಡುವ ಕುರಿತು ಸರಕಾರಿ ವ್ಯವಸ್ಥೆ ಚಿಂತಿಸಬೇಕಿದೆ.

ಇಲಾಖೆಗೆ ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಹಳೆ ಕಟ್ಟಡದ ನಿವೇಶನವನ್ನು ಕಾನೂನು ಪ್ರಕಾರ ಬಂಟ್ವಾಳ ಸಂಚಾರ ಠಾಣೆಗೆ ಹಸ್ತಾಂತರಿಸಲಾಗಿದೆ. ಹೀಗಾಗಿ ಪ್ರಸ್ತುತ ಆ ನಿವೇಶನವು ನಮ್ಮ ಇಲಾಖೆಯಲ್ಲಿಲ್ಲ.-ಡಾ| ಅವಿನಾಶ್‌,ಮುಖ್ಯ ಪಶುವೈದ್ಯಾಧಿಕಾರಿ, ಬಂಟ್ವಾಳ ಪಶು ಇಲಾಖೆ.

ಗೂಡಿನಬಳಿಯಲ್ಲಿ ಸಂಚಾರ ಠಾಣೆಗೆ ನಿವೇಶನ ಹಂಚಿಕೆಯಾದರೂ, ಅಲ್ಲಿ ಠಾಣೆಗೆ ಬೇಕಾದಷ್ಟು ಸ್ಥಳಾವಕಾಶವಿಲ್ಲ. ಹೀಗಾಗಿ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ಹುಡುಕಲಾಗುತ್ತಿದೆ.-ರಾಜೇಶ್‌ ಕೆ.ವಿ.ಪಿಎಸ್‌ಐ, ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.