ಸಂಪಾಜೆ : ಕೊರಗಜ್ಜನ ಪವಾಡ – 12 ದೈವ ಬದಲು ಕಾಣಿಸಿಕೊಂಡಿತು 13 ದೈವ


Team Udayavani, Mar 27, 2021, 6:47 PM IST

ಸಂಪಾಜೆ : ಕೊರಗಜ್ಜನ ಪವಾಡ – 12 ದೈವ  ಬದಲು ಕಾಣಿಸಿಕೊಂಡಿತು 13 ದೈವ

ಅರಂತೋಡು: ತುಳುನಾಡಿನಲ್ಲಿ ಅಲ್ಲಲ್ಲಿ ಆಗಾಗ ಒಂದಲ್ಲ ಒಂದು ರೀತಿಯಲ್ಲಿ ಕೊರಗಜ್ಜನ ಪವಾಡಗಳು ನಡೆಯುತ್ತಿರುತ್ತದೆ. ಇಂಥದೊಂದು ಪವಾಡ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸಾನಿಧ್ಯದಲ್ಲಿ ನಡೆದಿದೆ.

ಮಾ.20 ರಂದು ರಾತ್ರಿ ದೊಡ್ಡಡ್ಕ ರಾಜರಾಂಪುರ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ  ಆದಿಬ್ರಹ್ಮ ಮೊಗೇರ್ಕಳ 40 ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ  ದೈವದ ಕೋಲ ನಡೆಯಿತು. ಮಾ.21 ರಂದು ಬೆಳಿಗ್ಗೆ ಕೊರಗಜ್ಜನ ನೇಮೋತ್ಸವ ನಡೆಯಿತು. ಇಲ್ಲಿ 11 ಹರಕೆ ಕೋಲ ಹಾಗೂ ಒಂದು ಕಾಲಾವಧಿ ಕೋಲ ಇತ್ತು. ಅದರಂತೆ 12 ಅಗೇಲಿಗೆ ತಯಾರಿ ಮಾಡಿ 12 ದೈವದ ತಲೆಗೆ  ಇಡುವ ಮಡಪ್ಪಾಳೆ ಹಾಗೂ  ಇತರ ವಸ್ತುಗಳನ್ನು ಜೋಡನೆ ಮಾಡಲಾಗಿತ್ತು. ಹೀಗೆ 12 ಜನ ದೈವ ಕಟ್ಟಿದ್ದರೂ ನೇಮೋತ್ಸವ ಹೊರಟು ದೈವಗಳ ನರ್ತನ ಪ್ರಾರಂಭವಾಯಿತು. ಸ್ವಲ್ಪ ಹೊತ್ತಲ್ಲಿ 12 ಕೊರಗಜ್ಜ ದೈವಗಳ ಬದಲು ಕೆಲವರಿಗೆ 13 ಕಾಣಿಸಿಕೊಂಡವು. ಈ  ದೈವದ ತಲೆಗೆ  ಮಡಪ್ಪಾಳೆ (ಗೋಂಪಾರು) ಇರಲಿಲ್ಲ. ಮಡಪ್ಪಾಳೆಯನ್ನು ದೈವ ಕೇಳಿದ್ದರಿಂದ ಮತ್ತೆ ಮಡಪ್ಪಾಳೆ ತಯಾರಿ ಮಾಡಿ ಕೊಡಲಾಯಿತು. ಹೀಗೆ ಮಡಪ್ಪಾಳೆ ತಯಾರಿ ಮಾಡಿ ಕೊಟ್ಟ ನಂತರ ಆ ಕೊರಗಜ್ಜ ಕುಣಿದಿದೆ.

ಕೊನೆಗೆ ಅಗೆಲು ಬಳಸುವ ಸಂದರ್ಭದಲ್ಲಿ 13 ದೈವಗಳ ಬದಲು 12 ದೈವಳು ಮಾತ್ರ ಉಳಿದು  ಆ  ದೈವ ಕಾಣದಂತೆ ಮಾಯವಾಗಿದೆ ಎನ್ನಲಾಗಿದೆ. ಸಂದರ್ಭದಲ್ಲಿ ಭಕ್ತರು ಮತ್ತು ಸ್ಥಳೀಯ ಸಮಿತಿಯವರ ಮಧ್ಯೆ ದೈವಗಳ  ಸಂಖ್ಯೆಗಳ ಬಗ್ಗೆ ಚರ್ಚೆಯಾಗಿದೆ. ಕೆಲವರಿಗೆ 12 ದೈವಗಳು ಮಾತ್ರ ಕಾಣಿಸಿಕೊಂಡಿವೆ. ಇನ್ನೂ ಕೆಲವರಿಗೆ 13 ದೈವಗಳು ಕಾಣಿಸಿಕೊಂಡಿವೆ. ಇದು ಭಕ್ತರಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು ಇನ್ನಷ್ಟು ಭಯ ಭಕ್ತಿಯನ್ನು ಹೆಚ್ಚಿಸಿವೆ. ದೈವದ ಪವಾಡದಿಂದ ಭಯ ಭಕ್ತಿಯಿಂದ  ದೈವಸ್ಥಾನದ ಸಮಿತಿಯವರು ಜ್ಯೋತಿಸರ ಮೊರೆ ಹೋಗಿದ್ದು ಪ್ರಶ್ನೆ ಚಿಂತನೆ ನಡೆಸಿದ್ದಾಗ ಸಾನಿಧ್ಯದಲ್ಲಿ ಕಾರಣಿಕದ ಶಕ್ತಿ ಕಂಡು ಬರುತ್ತಿದ್ದು ಸ್ಥಳದಲ್ಲಿಯೇ ಸೂಕ್ಷ್ಮ  ಪ್ರಶ್ನೆ ಚಿಂತನೆ ನಡೆಸಲು ಸೂಚಿಸಿದ್ದಾರೆ. ಈ ಕಾರಣದಿಂದ   ಕಮಿಟಿಯವರು ಪ್ರಶ್ನೆ ಚಿಂತನೆಗೆ ದಿನ ನಿಗದಿಗೊಳಿಸಿದ್ದಾರೆ.

ಇಲ್ಲಿಯ  ಕೊರಗಜ್ಜನ ಕ್ಷೇತ್ರಕ್ಕೆ ಸುಮಾರು 40 ವರ್ಷಗಳ ಇತಿಹಾಸವಿದ್ದು ಇದು ಕಾರಣಿಕ ಕ್ಷೇತ್ರವಾಗಿದೆ. ಸುಳ್ಯ ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 15 ಕಿ.ಮೀ ಸಾಗಿದರೆ ರಾಜರಾಮ್‌ಪುರ ಕೊರಗಜ್ಜ ಕ್ಷೇತ್ರ ಬಲಭಾಗದಲ್ಲಿ ಕಾಣಸಿಗುತ್ತದೆ. ಇಲ್ಲಿಗೆ ವಿಶೇಷ ನೇಮೋತ್ಸವ ಇತರೆ ವಿಶೇಷ ಪರ್ವ ದಿನಗಳಲ್ಲಿ  ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೈವದ ದರ್ಶನ ಪಡೆದುಕೊಂಡು ಹೋಗುತ್ತಾರೆ. ಈ ಕಾರಣಿಕ ಕೊರಗಜ್ಜನ ಪವಾಡವನ್ನು ಸಾವಿರಾರು ಜನರಲ್ಲಿ ಭಯಭಕ್ತಿ ಮೂಡಿಸಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿಯೂ  ದೈವದ ನೇಮೋತ್ಸವದ ವಿಡಿಯೋ ವೈರಲ್ ಆಗಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.