ಸಾಂದೀಪನಿ: ಸ್ವಚ್ಛತಾ ಮೇಳ, ಜಾಗೃತಿಗಾಗಿ ಮಕ್ಕಳ ಜಾಥಾ


Team Udayavani, Aug 3, 2018, 4:01 PM IST

3-agust-15.jpg

ನರಿಮೊಗರು: ಯುವ ಜನತೆ ಮುಂದೆ ಬಂದು ಸಮಾಜಮುಖಿ  ಕೆಲಸಗಳಲ್ಲಿ ತೊಡಗುವುದರಿಂದ ಭಾರತ ದೇಶದ ಚಿಂತನೆಗಳು ಸಾಕಾರಗೊಳ್ಳುತ್ತವೆ. ಇಂತಹ ಉತ್ತಮ ಕಾರ್ಯವನ್ನು ನಮ್ಮ ಶಾಲಾ ಹಿರಿಯ ವಿದ್ಯಾರ್ಥಿ ಗುರುಪ್ರಿಯ ನಾಯಕ್‌ ಅವರ ನೇತೃತ್ವದಲ್ಲಿ ಪ್ರಖ್ಯಾತಿ ಯುವತಿ ಮಂಡಲದ ಯುವತಿಯರಿಂದ ಆಗುತ್ತಿರುವುದು ಸಂತಸದ ವಿಚಾರ ಎಂದು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಮುಖ್ಯ ಗುರು ಜಯಮಾಲಾ ವಿ.ಎನ್‌. ಹೇಳಿದರು.

ನೆಹರೂ ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟದ ಸಹಯೋಗದೊಂದಿಗೆ ನಡೆಯುತ್ತಿರುವ ಸ್ವಚ್ಛ ಭಾರತ ಸಮ್ಮರ್‌ ಇಂಟರ್ನ್ಶಿಪ್‌ನ ಕಾರ್ಯಕ್ರಮದಡಿ ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ವತಿಯಿಂದ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ನಡೆದ ಸ್ವಚ್ಛತಾ ಮೇಳವನ್ನು ಅವರು ಉದ್ಘಾಟಿಸಿದರು.

ಜಾಗೃತಿ ಗೀತೆ
ಯುವತಿ ಮಂಡಲದ ಸದಸ್ಯರ ಜತೆಗೆ ಶಾಲಾ ವಿದ್ಯಾರ್ಥಿನಿಯರು ಜಾಗೃತಿ ಗೀತೆಯನ್ನು ಹಾಡಿದರು. ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯ ನಾಯಕ್‌ ಕಸ ವಿಂಗಡಣೆಯ ಪ್ರಾತ್ಯಕ್ಷಿಕೆ, ಸ್ವಚ್ಛತಾ ಮೇಳದಲ್ಲಿ ಪ್ರದರ್ಶಿಸಲಾದ ಚಿತ್ರಗಳ, ಕಾಂಪೋಸ್ಟ್‌ ಮತ್ತು ಪೈಪ್‌ ಬಿಟ್‌ಗಳನ್ನು ಮನೆಗಳಲ್ಲಿ ನಿರ್ಮಿಸಿ ಹಸಿ ತ್ಯಾಜ್ಯಗಳ ವಿಲೇವಾರಿಯನ್ನು ಮಾಡುವ ಬಗ್ಗೆ ವಿವರಣೆ ನೀಡಿದರು.

ಸದಸ್ಯೆ ಪವಿತ್ರಾ ಪುರುಷರಕಟ್ಟೆ ಪ್ಲಾಸ್ಟಿಕ್‌ ಬಾಟಲಿಗಳನ್ನು ಮರುಬಳಕೆ ಮಾಡುವ ವಿಧಾನಗಳ ಕುರಿತು ಮಾಹಿತಿ ನೀಡಿದರು. ಸದಸ್ಯೆ ಅಮೃತಾ ನಾಯಕ್‌ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿ ಸ್ವಚ್ಛ ಸಂಬಂಧಿ ಪ್ರಶ್ನೋತ್ತರ ನಡೆಸಿ. ಕೈ ತೊಳೆಯುವ 7 ವಿಧಾನಗಳ ಮಾಹಿತಿ ನೀಡಿದರು.

ಮಕ್ಕಳ ಜಾಥಾ
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಿಂದ ಆರಂಭವಾಗಿ ಪುರುಷರಕಟ್ಟೆಯ ಕಟ್ಟೆಯ ಬಳಿ ಸ್ವಚ್ಛತಾ ಜನಜಾಗೃತಿಗಾಗಿ ನಡೆಸಿದ ಜಾಥಾದಲ್ಲಿ ವಿದ್ಯಾರ್ಥಿಗಳು ಸ್ವಚ್ಛ ಭಾರತ ಪೂರಕವಾದ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಯುವತಿ ಮಂಡಲದ ಸದಸ್ಯರಾದ ಖುಷಿತಾ ನರಿಮೊಗರು, ಶ್ರಾವ್ಯಾ ಬಜಪ್ಪಾಳ, ತೃಪ್ತಿ ಹೆಗ್ಡೆ, ಉಜ್ವಲಾ ವಿ. ಸುವರ್ಣ, ತನ್ವಿ ವಿ., ಸ್ವಾತಿ ಹೆಗ್ಡೆ, ಅಚಿಂತ್ಯಾ, ವರ್ಷಿತಾ, ಅನುಷಾ ನರಿಮೊಗರು ಭಾಗವಹಿಸಿದ್ದರು.

ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು, ತಾ| ಯುವ ಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು, ತಾ.ಪಂ. ಸದಸ್ಯೆಯಶೋದಾ ಕೆ. ಗೌಡ, ಯುವತಿ ಮಂಡಲದ ಗೌರವ ಸಲಹೆಗಾರರಾದ ವಿದ್ಯಾ ನಾಯಕ್‌ ಉಪಸ್ಥಿತರಿದ್ದರು. ಆಡಳಿತ ಮಂಡಳಿ, ಶಾಲಾ ಶಿಕ್ಷಕ ವೃಂದ, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಸಹಕರಿಸಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.