ಪುತ್ತೂರು: ವಾಹನ ನಕಲಿ ವಿಮೆ ಪ್ರಕರಣದ ಜಾಲ; ಸಮಗ್ರ ತನಿಖೆಗೆ ಶಾಸಕ ಮಠಂದೂರು ಸೂಚನೆ
Team Udayavani, Oct 17, 2020, 12:57 PM IST
ಪುತ್ತೂರು: ಅಧಿಕೃತ ಏಜೆನ್ಸಿಗಳ ಕೋಡ್ ಅನ್ನು ಬಳಸಿ ನಕಲಿ ವಾಹನ ವಿಮೆ ನೀಡುತ್ತಿರುವ ಪ್ರಕರಣ ಪುತ್ತೂರಿನಲ್ಲಿ ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರು ಅ.17 ರಂದು ಪುತ್ತೂರಿನ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿದ್ದು ಈ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.
“ಅಧಿಕೃತ ಏಜೆನ್ಸಿಗಳ ಕೋಡ್ ಬಳಸಿ ನಕಲಿ ವಾಹನ ವಿಮೆ” ಶೀರ್ಷಿಕೆಯಡಿ ಅ.15 ರಂದು ಉದಯವಾಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ನಕಲಿ ವಿಮೆ ತಯಾರಿಸಿದ ಓರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು, ಈ ಬಗ್ಗೆ ಶಾಸಕರ ಮಾಹಿತಿ ಕಲೆ ಹಾಕಿದರು.
ಇದನ್ನೂ ಓದಿ:ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳ: ಇಲ್ಲಿದೆ ಕಲಾವಿದರ ಸಂಪೂರ್ಣ ಪಟ್ಟಿ
ವಾಹನ ವಿಮೆಗೆ ಸಂಬಂಧಪಟ್ಟಂತೆ ಅಧಿಕಾರ ಹೊಂದಿರುವ ಆರ್ ಟಿಓ, ಯುನೈಟೆಡ್ ವಿಮಾ ಸಂಸ್ಥೆ, ಸಂಚಾರ ಪೊಲೀಸ್ ಹಾಗೂ ಇನ್ನಿತ್ತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ