ಜ. 30: ಉಪ್ಪಿನಂಗಡಿಯಲ್ಲಿ ಮರಳಿಗಾಗಿ ಸತ್ಯಾಗ್ರಹ


Team Udayavani, Jan 19, 2019, 10:03 AM IST

19-january-14.jpg

ಉಪ್ಪಿನಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ತಲೆದೋರಿರುವ ಮರಳು ಸಮಸ್ಯೆಯನ್ನು ಸರಕಾರದ ಗಮನ ಸೆಳೆಯುವ ಮತ್ತು ಬಡವರಿಗೆ ಸುಲಭದಲ್ಲಿ ಮರಳು ದೊರಕುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀಜಿ ಪುಣ್ಯತಿಥಿಯಂದು (ಜ. 30) ಉಪ್ಪಿನಂಗಡಿಯಲ್ಲಿ ಮರಳು ಸತ್ಯಾಗ್ರಹ ನಡೆಸಲು ಮಾನವ ಬಂಧುತ್ವ ವೇದಿಕೆ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ವೇದಿಕೆ ರಾಜ್ಯ ಸಂಚಾಲಕ ವಿಲ್ಫ್ರೆಡ್‌ ಡಿ’ಸೋಜಾ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಸಂಘ – ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಸಭೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌ ವಿಷಯ ಪ್ರಸ್ತಾವಿಸಿ, ಮರಳು ಸಮಸ್ಯೆಯಿಂದಾಗಿ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ಅದರಲ್ಲೂ ಬಡವರಿಗೆ ಬಸವ ವಸತಿ ಯೋಜನೆಯಲ್ಲಿ ಮಂಜೂರಾಗಿರುವ ಮನೆಗಳನ್ನು ನಿರ್ಮಿಸಲು ಮರಳು ದೊರಕದಂತಾಗಿದೆ. ಬಡವರು ಮನೆ ನಿರ್ಮಾಣಕ್ಕೆ ಪಿಕ್‌ಅಪ್‌ ವಾಹನದಲ್ಲಿ ಮರಳು ತಂದರೂ ಅದನ್ನು ಪೊಲೀಸರು ಹಿಡಿದು ಕೇಸು ಹಾಕುತ್ತಾರೆ. ದೊಡ್ಡ ಕುಳಗಳು ಲಾರಿಯಲ್ಲಿ ಸಾಗಾಟ ಮಾಡುವುದಕ್ಕೆ ಯಾವುದೇ ಅಡೆತಡೆ ಇರುವುದಿಲ್ಲ, ಇದು ಸರಿ ಆಗಬೇಕಾಗಿದೆ. ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿ, ಆಧುನೀಕರಣದ ಹೆಸರಿನಲ್ಲಿ ಮರಳು ಕೇಂದ್ರೀಕರಣ ಮಾಡುವ ತಂತ್ರ ನಡೆಯುತ್ತಿದೆ. ಮರಳು ದೊರಕುವುದಿಲ್ಲ ಎನ್ನುವಂತಿಲ್ಲ. ಒಂದು ಲೋಡ್‌ ಮರಳು ಬೇಕಾದರೆ 18ರಿಂದ 20 ಸಾವಿರ ರೂ. ಕೊಡಬೇಕು. ಶಾಲಾ ಕಟ್ಟಡ ದುರಸ್ತಿ ಮಾಡಲು ಅನುದಾನ ಬಂದರೆ ಆ ಹಣ ಮರಳು ತರಿಸಲು ಸಾಕಾಗುವುದಿಲ್ಲ. ಇನ್ನು ಬಡವರು ಮನೆಯಲ್ಲಿ ಮದುವೆ ಕಾರ್ಯ ಇದ್ದು, ಮನೆ ರಿಪೇರಿ ಮಾಡೋಣ ಎಂದರೂ ಮರಳು ದೊರಕುತ್ತಿಲ್ಲ. ಪಂಚಾಯತ್‌ ಮೂಲಕ ಸುಲಭವಾಗಿ ಮರಳು ದೊರಕುವಂತೆ ಆಗಬೇಕು, ಈ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಆಗಬೇಕು ಎಂದರು.

ಹೋರಾಟ ಸಮಿತಿ ರಚನೆ
ಉಪ್ಪಿನಂಗಡಿ ಗ್ರಾ.ಪಂ. ಸದಸ್ಯರಾದ ಸುರೇಶ್‌ ಅತ್ರಮಜಲು, ಸುನೀಲ್‌ ಕುಮಾರ್‌, ಯು.ಕೆ. ಇಬ್ರಾಹಿಂ, ಚಂದ್ರಶೇಖರ ಮಡಿವಾಳ, ಇಳಂತಿಲ ಗ್ರಾ.ಪಂ. ಅಧ್ಯಕ್ಷ ಯೂಸುಫ್ ಪೆದಮಲೆ, ಬಜತ್ತೂರು ಗ್ರಾ.ಪಂ. ಅಧ್ಯಕ್ಷ ಸಂತೋಷ್‌ ಕುಮಾರ್‌, ಸದಸ್ಯರಾದ ಪ್ರಸಿಲ್ಲಾ ಪಿಂಟೋ, ತೇಜ ಕುಮಾರಿ, ತಣ್ಣೀರುಪಂಥ ಗ್ರಾ.ಪಂ. ಅಧ್ಯಕ್ಷ ಜಯವಿಕ್ರಂ, ನೆಕ್ಕಿಲಾಡಿ ನಮ್ಮೂರು ನಮ್ಮವರು ಸಂಘಟನೆಯ ಜತೀಂದ್ರ ಶೆಟ್ಟಿ, ಅಬ್ದುಲ್‌ ರಹಿಮಾನ್‌ ಯುನಿಕ್‌, ಆಟೋ ರಿಕ್ಷಾ ಚಾಲಕರ ಸಂಘದ ಖಲಂದರ್‌ ಶಾಫಿ, ಅಬ್ದುಲ್‌ ಲತೀಫ್, ರೋಟರಿ ಸಂಸ್ಥೆಯ ಇಸ್ಮಾಯಿಲ್‌ ಇಕ್ಬಾಲ್‌, ವಿವಿಧ ಸಂಘಟನೆ ಮುಖಂಡರಾದ ಅಶ್ರಫ್ ಬಸ್ತಿಕ್ಕಾರ್‌, ಮಂಜುನಾಥ ಬೆಳ್ತಂಗಡಿ, ರೂಪೇಶ್‌ ಅಲಿಮಾರ್‌, ಇಬ್ರಾಹಿಂ ಮೋನು ಪಿಲಿಗೂಡು, ಆದಂ ಕೊಪ್ಪಳ ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು.

ಗಾಂಧೀಜಿ ಮಾದರಿ ಸತ್ಯಾಗ್ರಹ
ಮಾನವ ಬಂಧುತ್ವ ವೇದಿಕೆಯ ಸಂಚಾಲಕ ವಿಲ್ಫ್ರೆಡ್‌ ಡಿ’ಸೋಜಾ ಮಾತನಾಡಿ, ಮರಳು ಸಮಸ್ಯೆ ಗಂಭೀರವಾಗಿದ್ದು, ಇದನ್ನು ಲಘುವಾಗಿ ಪರಿಗಣಿಸುವಂತಿಲ್ಲ. ನಾವು ಗಾಂಧೀಜಿ ಉಪ್ಪಿನ ಸತ್ಯಾಗ್ರಹ ಮಾಡಿದ ರೀತಿಯಲ್ಲಿ ಮರಳು ಸತ್ಯಾಗ್ರಹ ಮಾಡೋಣ. ಎರಡು ನದಿಗಳು ಹರಿಯುವ ಉಪ್ಪಿನಂಗಡಿ ಇದಕ್ಕೆ ಸೂಕ್ತ ಜಾಗವಾಗಿದ್ದು, ಈ ನಿಟ್ಟಿ ಸಂಘಟಿತರಾಗಿ ಹೋರಾಟ ಮಾಡೋಣ ಎಂದರು. ಅದರಂತೆ ಜ. 30ರಂದು ಗಾಂಧಿ ಪುಣ್ಯತಿಥಿಯಂದು ಮಹಾತ್ಮರು ದಂಡಿ ಯಾತ್ರೆ ಮಾಡಿದ ರೀತಿಯಲ್ಲಿ ಮರಳು ಸತ್ಯಾಗ್ರಹ ನಡೆಸೋಣ ಎಂದರು. ಅದರಂತೆ ನಿರ್ಣಯ ಅಂಗೀಕರಿಸಲಾಯಿತು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.