ಗ್ರಾಮಸಭೆಗೆ ಬನ್ನಿ: ಮನೆ-ಮನೆ ಭೇಟಿ ಅಭಿಯಾನ

ಸಾರ್ವಜನಿಕರಿಗೆ ಮಾಹಿತಿ; ಪಾಲ್ಗೊಳ್ಳುವಿಕೆ ಹೆಚ್ಚಿಸಲು ತಂಡದ ಪ್ರಯತ್ನ

Team Udayavani, Aug 2, 2019, 11:26 AM IST

2-Agust-12

ವಿಶೇಷ ವರದಿ
ಸವಣೂರು:
ಅಧಿಕಾರ ವಿಕೇಂದ್ರೀಕ ರಣದ ಪ್ರಕ್ರಿಯೆಯಲ್ಲಿ ಸ್ಥಳಿಯಾಡಳಿತ ಗ್ರಾ.ಪಂ. ಹೆಚ್ಚು ಮಹತ್ವ ಪಡೆದಿದೆ. ಗ್ರಾಮಾಭಿವೃದ್ಧಿಯ ಯೋಜನೆಗಳು ಯಶಸ್ವಿಯಾಗಿ ನಡೆಯಲು ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಆದರೆ ಹೆಚ್ಚಿನ ಕಡೆಗಳಲ್ಲಿ ಗ್ರಾಮಸಭೆಗಳಿಗೆ ಗ್ರಾಮಸ್ಥರ ಹಾಜರಾತಿ ಕಡಿಮೆ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ವಿನೂತನ ಅಭಿಯಾನದ ಮೂಲಕ ಗ್ರಾಮಸಭೆಯ ಕರಪತ್ರ ಮನೆ-ಮನೆಗೆ ತಲುಪಿಸುವ ಕೆಲಸವನ್ನು ಸವಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಪ್ರಮುಖರು ಮಾಡುತ್ತಿರುವುದು ವಿಶೇಷವಾಗಿದೆ.

ಪ್ರತೀ ಆರು ತಿಂಗಳಿಗೊಮ್ಮೆ ಗ್ರಾಮಸಭೆ ನಡೆಯುತ್ತದೆ. ಈ ಸಭೆಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಆಗಬೇಕಾದ ಕಾಮಗಾರಿ, ಅಭಿವೃದ್ಧಿ ಕಾರ್ಯಗಳ ಕುರಿತು ಗ್ರಾಮಸ್ಥರ ಸಮ್ಮುಖದಲ್ಲಿ ಚರ್ಚಿಸಿ ಕ್ರಿಯಾಯೋ ಜನೆ ತಯಾರಿಸಲಾಗುತ್ತದೆ. ಗ್ರಾಮಸ್ಥರ ಅನಾಸಕ್ತಿಯಿಂದ ಗ್ರಾಮಸಭೆಗಳಲ್ಲಿ ಪ್ರಸ್ತಾವ ಗೊಂಡ ವಿಷಯಗಳ ಕುರಿತು ಕ್ರಿಯಾ ಯೋಜನೆ ತಯಾರಿಸುವುದು ಅಪರೂಪ. ತಮ್ಮ ಗ್ರಾಮದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿ ಗ್ರಾಮಸ್ಥರಿಗೂ ಸರಿಯಾಗಿ ತಲುಪುತ್ತಿಲ್ಲ. ಮಾತ್ರವಲ್ಲ ಮಾಹಿತಿ ಪಡೆದುಕೊಳ್ಳಲೂ ಗ್ರಾಮಸ್ಥರು ಮುಂದಾಗುತ್ತಿಲ್ಲ. ಇದರಿಂದ ಗ್ರಾಮಸಭೆಗೆ ಹೋಗಿ ಏನು ಪ್ರಯೋಜನವಿಲ್ಲ ಎನ್ನುವುದು ಹೆಚ್ಚಿನ ಗ್ರಾಮಸ್ಥರ ಅಭಿಪ್ರಾಯ.

ಈ ಕಾರಣದಿಂದ ಗ್ರಾಮಸಭೆಗಳಿಗೆ ಗ್ರಾಮ ಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳು ವಂತೆ ಪ್ರೇರೇಪಿಸುವುದಕ್ಕಾಗಿ, ಮಹತ್ವದ ಕುರಿತು ಪ್ರತಿಯೊಬ್ಬರಿಗೂ ಮನವರಿಕೆ ಮಾಡುವುದಕ್ಕಾಗಿ ಮತ್ತು ಗ್ರಾಮಸಭೆಯ ಕರಪತ್ರವನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಸವಣೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಗ್ರಾ.ಪಂ. ಸದಸ್ಯರು ಹಾಗೂ ಪ್ರಮುಖರು ಮಾಡುತ್ತಿದ್ದಾರೆ.

ತಂಡವಾಗಿ ಕಾರ್ಯ
ಸವಣೂರು ಗ್ರಾ.ಪಂ.ನ ವಾರ್ಡ್‌ 1ರಲ್ಲಿ ಗ್ರಾ.ಪಂ. ಸದಸ್ಯರಾದ ಸತೀಶ್‌ ಬಲ್ಯಾಯ, ಗಾಯತ್ರಿ ಬರೆಮೇಲು, ಸತೀಶ್‌ ಅಂಗಡಿಮೂಲೆ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ. ಸುಪ್ರಿತ್‌ ರೈ ಖಂಡಿಗ, ನಿರ್ದೇಶಕ ಪ್ರಜ್ವಲ ಕೆ.ಆರ್‌.,

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚೇತನ್‌ ಕುಮಾರ್‌ ಕೋಡಿಬೈಲು, ಪ್ರಮುಖರಾದ ಪ್ರದೀಪ್‌ ಕೆ.ಆರ್‌. ಕೋಡಿಬೈಲ್, ಅನಿತಾ ಲಕ್ಷ್ಮಣ್‌ ಕೆಡೆಂಜಿ, ವೇದಾ ದಯಾನಂದ ಬೇರಿಕೆ, ಜಯಶ್ರೀ ಬಾರಿಕೆ ಅವರನ್ನೊಳಗೊಂಡ ತಂಡ ಈ ಕಾರ್ಯ ನಡೆಸುತ್ತಿದ್ದಾರೆ. ಇದನ್ನು 2013ರಲ್ಲಿ ಗ್ರಾ.ಪಂ.ಸದಸ್ಯರಾಗಿದ್ದ ರಾಕೇಶ್‌ ರೈ ಕೆಡೆಂಜಿ ಅವರು ಕೂಡ ಮಾಡಿದ್ದರು. ಅನಂತರದ ಗ್ರಾಮಸಭೆಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಹೆಚ್ಚಾಗಿತ್ತು.

ಅಭಿವೃದ್ಧಿಯ ಭಾಗ
ಗ್ರಾಮಸಭೆ ಆಯಾ ಊರಿನ ಸಹಕಾರಿ ಸಂಘಗಳ ಮಹಾಸಭೆಯಷ್ಟೇ ಪ್ರಾಮುಖ್ಯತೆ ಯನ್ನು ಪಡೆದಿರುವ ಅಭಿವೃದ್ಧಿಯ ಒಂದು ಭಾಗ. ವಸತಿರಹಿತರಿಗೆ ನಿವೇಶನ ನೀಡಲು, ವಿವಿಧ ಸರಕಾರಿ ಯೋಜನೆಗಳ ಫಲಾನು ಭವಿಗಳನ್ನು ಆಯ್ಕೆ ಮಾಡಲು ಇದು ನೆರವಾಗುತ್ತದೆ. ಒಂದು ಭಾಗದಲ್ಲಿ ನಡೆದ ಪ್ರಯತ್ನ ಅಲ್ಲಿಗೆ ಸೀಮಿತವಾಗಬಾರದು. ಈ ಪ್ರಯೋಗ ಎಲ್ಲೆಡೆ ನಡೆಯಬೇಕು. ಹಾಗಾದಾಗ ಮಾತ್ರ ಗ್ರಾಮ ಸರಕಾರ ಅಂದರೆ ಗ್ರಾ.ಪಂ.ಗಳು ಕೂಡಾ ಮಾದರಿ ಆಡಳಿತ ನಡೆಸಲು ಸಾಧ್ಯ.

ಒಳ್ಳೆಯ ಬೆಳವಣಿಗೆ
ನಮ್ಮ ಗ್ರಾ.ಪಂ. ಸದಸ್ಯರು ಗ್ರಾಮಸಭೆಯ ಕುರಿತು ಮನೆ-ಮನೆಗೆ ಕರಪತ್ರ ಹಂಚಿ ಗ್ರಾಮಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಳ್ಳುವಂತೆ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಗ್ರಾ.ಪಂ.ನಲ್ಲಿ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ಮಂಡಳಿ, ಅಧಿಕಾರಿ ವರ್ಗ ಇರುವುದರಿಂದ ಯೋಜನೆ, ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನವಾಗುತ್ತಿದೆ.
ಇಂದಿರಾ ಬಿ.ಕೆ.,
  ಅಧ್ಯಕ್ಷರು, ಸವಣೂರು ಗ್ರಾ.ಪಂ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.