ತಾಯಿ ಮಡಿಲಿನಿಂದ ಶಾಲೆ ಮಡಿಲಿಗೆ ಸಾಗಿದ ಅಕ್ಷರ ಬಂಡಿ


Team Udayavani, May 31, 2019, 5:50 AM IST

v-39

ಸುಬ್ರಹ್ಮಣ್ಯ: ಮಾವಿನ ಎಲೆಯ ಹಸುರು ತೋರಣ, ಹೆತ್ತವರ ವಾಹನ ಗಳ ಮೇಲೆ ಅಕ್ಷರಗಳ ಬಣ್ಣದಾಕರ. ಅಲಂಕೃತ ಆಟೋ ರಿಕ್ಷಾ ಬಂಡಿ ಜಾಥಾ, ಬಾಳೆಗಿಡ ಗಳಿಂದ ಸಿಂಗರಿಸಿದ ಶಾಲೆ, ಆವರಣ ಮತ್ತು ವಿದ್ಯೆ ಕುರಿತಾದ ಧ್ಯೇಯ ವಾಕ್ಯಗಳ ಭಿತ್ತಿಪತ್ರ, ಘೋಷಣೆ, ತೊಟ್ಟಿಲಿನ ಸಿಂಗಾರ, ವೇದಿಕೆಯ ಅಲಂಕಾರ, ಘಮಘಮ ಪಾಯಸದ ಸುವಾಸನೆ. ಇವೆಲ್ಲವೂ ಕಂಡುಬಂದಿದ್ದು ಶಾಲಾ ಪ್ರಾರಂಭೋತ್ಸವದ ದಿನ ಬುಧವಾರ ಕೈಕಂಬ ದ.ಕ.ಜಿ.ಪಂ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಗೆ ಸೇರಿದ ಪುಟಾಣಿಗಳನ್ನು ಸ್ವಾಗತಿಸಲು ಮತ್ತೆ ರಜೆ ಮುಗಿಸಿ ಶಾಲೆಗೆ ಮರಳಿ ಬಂದ ಮಕ್ಕಳಲ್ಲಿ ಹೊಸ ಉತ್ಸಾಹ ತುಂಬಲು ಶಾಲೆ ಹಾಗೂ ಊರವರು ಸೇರಿ ನಡೆಸಿದ ವಿನೂತನ ಕಾರ್ಯಕ್ರಮ ಶಾಲಾ ಪರಿಸರದಲ್ಲಿ ಹಬ್ಬದ ವಾತಾವರಣವನ್ನೆ ಸೃಷ್ಟಿಸಿತ್ತು. ಶಾಲೆಯನ್ನು ಸ್ವಚ್ಛಗೊಳಿಸಿ ಪ್ರಾರಂಭೋ ತ್ಸವಕ್ಕೆ ಸಿದ್ಧತೆಗೊಳಿಸಲಾಗಿತ್ತು.

ಹಸುರು ಶಾಲೆ ಪ್ರಶಸ್ತಿ
1949ರಲ್ಲಿ ಸ್ಥಾಪನೆಯಾಗಿ ವಜ್ರ ಮಹೋತ್ಸವವನ್ನು ಆಚರಿಸಿಕೊಂಡು ಮೆಚ್ಚುಗೆಗೆ ಪಾತ್ರವಾಗಿರುವ ಕೈಕಂಬ ಶಾಲೆ ಪುತ್ತೂರು ತಾ|ನ ವಿಷನ್‌ ಪುತ್ತೂರು ಶಾಲೆ ಎನ್ನುವ ಹೆಗ್ಗಳಿಕೆ ಪಡೆದುಕೊಂಡಿದೆ. ಸುಂದರ ಹೂದೋಟ, ಮಧ್ಯಾಹ್ನದ ಅನ್ನ ದಾಸೋಹಕ್ಕೆ ಬಯೋಗ್ಯಾಸ್‌ ಹಾಗೂ ತರಕಾರಿ ತೋಟವಿದೆ. ಮಳೆ ನೀರನ್ನು ಇಂಗಿಸುವ ಮಳೆಕೊಯ್ಲು, ಜಲ ಮರುಪೂರಣವೂ ಇದೆ. ಗುರುಕುಲ ಶಿಕ್ಷಣ ಪದ್ಧತಿ ನೆನಪಿಸುವ ವರ್ಣ ಕುಟೀರ ಕಾಣಬಹುದು. ವರಾಂಡದಲ್ಲಿ ಹೂವಿನ ಮತ್ತು ಔಷಧೀಯ ಗಿಡಗಳನ್ನು ಬೆಳೆಯಲಾಗಿದೆ. ಸತತ ಮೂರು ವರ್ಷಗಳಿಂದ ಹಸುರು ಶಾಲಾ ಪ್ರಶಸ್ತಿ ಈ ಶಾಲೆಗೆ ಸಂದಿದೆ.

ಸ್ಮಾರ್ಟ್‌ ತರಗತಿ
ವಿದ್ಯಾರ್ಥಿಗಳ ಬುದ್ಧಿಮತ್ತೆ ಹೆಚ್ಚಿಸಲು ಸ್ಮಾರ್ಟ್‌ ತರಗತಿ ವ್ಯವಸ್ಥೆ ಇದೆ. ಪ್ರಸಕ್ತ ವರ್ಷದಲ್ಲಿ ಆನ್‌ಲೈನ್‌ ಲೈಬ್ರರಿ ತೆರೆಯಲಾಗುತ್ತಿದೆ. ವಿಜ್ಞಾನ ಗ್ರಂಥಾಲಯ, ಕಲಿಕೆ ಜತೆ ಕೃಷಿ ಪಾಠ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ, ದೇಶಭಕ್ತಿ, ಸಾಮಾಜಿಕ ಚಟುವಟಿಕೆ, ಪ್ರತಿಭಾ ಕಾರಂಜಿ ಮೊದಲಾದ ಕ್ಷೇತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಹೇಳಿಕೊಡಲಾಗುತ್ತದೆ.

ಪ್ರಾರಂಭೋತ್ಸವ ಉದ್ಘಾಟನೆ
ಬುಧವಾರ ನಡೆದ ಶಾಲಾ ಪ್ರಾರಂಭೋತ್ಸವವನ್ನು ಬಿಳಿನೆಲೆ ಗ್ರಾ.ಪಂ. ಸದಸ್ಯ ಶಿವಪ್ರಸಾದ್‌ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಮೋಹನ್‌ ಪಳ್ಳಿಗದ್ದೆ, ಮುಖ್ಯ ಶಿಕ್ಷಕಿ ಪುಷ್ಪಾವತಿ ಕೆ.ಬಿ. ಶಿಕ್ಷಕಿಯರಾದ ಪವಿತ್ರಾ, ಅಂಬಿಕಾ, ವನಿತಾ, ಸಿದ್ಧಲಿಂಗಸ್ವಾಮಿ, ಸಿಬಂದಿಗಳು, ವಿದ್ಯಾರ್ಥಿಗಳು, ನಾಗೇಶ್‌ ಕೋಟೆಬೈಲು, ಹೂವಪ್ಪ ಬ್ರಾಂತಿಕೊಚ್ಚಿ, ಮೋಹನ್‌ ಕಳಿಗೆ, ನೀಲಪ್ಪ ಗೌಡ ಕಳಿಗೆ, ಧರ್ಮಪಾಲ ಗೌಡ, ಕೇಶವ ಗೌಡ, ತಿಲೇಶ್‌, ಡೀಕಯ್ಯ ಗೌಡ, ಪುಷ್ಪಾವತಿ, ದಮಯಂತಿ, ಸುಕುಮಾರ ಗೌಡ ಚೇರು, ದೇವಪ್ಪ ಗೌಡ ಚೇರು, ದಿನೇಶ್‌ ಗುಂಡಿಗದ್ದೆ, ರೇಖಾ ಚಾವಡಿಬಾಗಿಲು, ಗಿರಿಧರ ಗೌಡ, ಆಶಾ ಕಾರ್ಯಕರ್ತೆ ಕುಸುಮಾವತಿ, ಊರ ಶಾಲಾಭಿಮಾನಿಗಳು ಉಪಸ್ಥಿತರಿದ್ದರು.

ಸ. ಶಾಲೆ ಎಲ್ಲರ ಸಹಕಾರದಿಂದ ಸಾಧ್ಯ
ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆ ಆಗದಂತೆ ಉತ್ತಮ ವಾತಾವರಣ ಸೃಷ್ಟಿಸಲಾಗುತ್ತಿದೆ. ಶಿಕ್ಷಣ ಇಲಾಖೆ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು, ಶಿಕ್ಷಣ ಪ್ರೇಮಿಗಳ ಜತೆಗೆ ದಾನಿಗಳ ಸಹಕಾರದಿಂದ ಇದೆಲ್ಲವನ್ನು ಅಳವಡಿಸಿಕೊಳ್ಳಲು ಸಾಧ್ಯವಾಗಿದೆ.
– ಪುಷ್ಪಾವತಿ ಕೆ.ಬಿ. ಮುಖ್ಯ ಶಿಕ್ಷಕಿ

ಆಟೋದಲ್ಲಿ ಸಂಚರಿಸಿದರು
ಮುಖ್ಯ ಶಿಕ್ಷಕಿ, ಸಹಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಹೆತ್ತವರು, ಊರವರು, ಶಿಕ್ಷಣ ಪ್ರೇಮಿ ಗಳು ಸಕಲ ತಯಾರಿಯೊಂದಿಗೆ ಅಕ್ಷರ ಬಂಡಿಯ ಜಾಥಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.