ತಾಯಿ ಮಡಿಲಿನಿಂದ ಶಾಲೆ ಮಡಿಲಿಗೆ ಸಾಗಿದ ಅಕ್ಷರ ಬಂಡಿ


Team Udayavani, May 31, 2019, 5:50 AM IST

v-39

ಸುಬ್ರಹ್ಮಣ್ಯ: ಮಾವಿನ ಎಲೆಯ ಹಸುರು ತೋರಣ, ಹೆತ್ತವರ ವಾಹನ ಗಳ ಮೇಲೆ ಅಕ್ಷರಗಳ ಬಣ್ಣದಾಕರ. ಅಲಂಕೃತ ಆಟೋ ರಿಕ್ಷಾ ಬಂಡಿ ಜಾಥಾ, ಬಾಳೆಗಿಡ ಗಳಿಂದ ಸಿಂಗರಿಸಿದ ಶಾಲೆ, ಆವರಣ ಮತ್ತು ವಿದ್ಯೆ ಕುರಿತಾದ ಧ್ಯೇಯ ವಾಕ್ಯಗಳ ಭಿತ್ತಿಪತ್ರ, ಘೋಷಣೆ, ತೊಟ್ಟಿಲಿನ ಸಿಂಗಾರ, ವೇದಿಕೆಯ ಅಲಂಕಾರ, ಘಮಘಮ ಪಾಯಸದ ಸುವಾಸನೆ. ಇವೆಲ್ಲವೂ ಕಂಡುಬಂದಿದ್ದು ಶಾಲಾ ಪ್ರಾರಂಭೋತ್ಸವದ ದಿನ ಬುಧವಾರ ಕೈಕಂಬ ದ.ಕ.ಜಿ.ಪಂ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಗೆ ಸೇರಿದ ಪುಟಾಣಿಗಳನ್ನು ಸ್ವಾಗತಿಸಲು ಮತ್ತೆ ರಜೆ ಮುಗಿಸಿ ಶಾಲೆಗೆ ಮರಳಿ ಬಂದ ಮಕ್ಕಳಲ್ಲಿ ಹೊಸ ಉತ್ಸಾಹ ತುಂಬಲು ಶಾಲೆ ಹಾಗೂ ಊರವರು ಸೇರಿ ನಡೆಸಿದ ವಿನೂತನ ಕಾರ್ಯಕ್ರಮ ಶಾಲಾ ಪರಿಸರದಲ್ಲಿ ಹಬ್ಬದ ವಾತಾವರಣವನ್ನೆ ಸೃಷ್ಟಿಸಿತ್ತು. ಶಾಲೆಯನ್ನು ಸ್ವಚ್ಛಗೊಳಿಸಿ ಪ್ರಾರಂಭೋ ತ್ಸವಕ್ಕೆ ಸಿದ್ಧತೆಗೊಳಿಸಲಾಗಿತ್ತು.

ಹಸುರು ಶಾಲೆ ಪ್ರಶಸ್ತಿ
1949ರಲ್ಲಿ ಸ್ಥಾಪನೆಯಾಗಿ ವಜ್ರ ಮಹೋತ್ಸವವನ್ನು ಆಚರಿಸಿಕೊಂಡು ಮೆಚ್ಚುಗೆಗೆ ಪಾತ್ರವಾಗಿರುವ ಕೈಕಂಬ ಶಾಲೆ ಪುತ್ತೂರು ತಾ|ನ ವಿಷನ್‌ ಪುತ್ತೂರು ಶಾಲೆ ಎನ್ನುವ ಹೆಗ್ಗಳಿಕೆ ಪಡೆದುಕೊಂಡಿದೆ. ಸುಂದರ ಹೂದೋಟ, ಮಧ್ಯಾಹ್ನದ ಅನ್ನ ದಾಸೋಹಕ್ಕೆ ಬಯೋಗ್ಯಾಸ್‌ ಹಾಗೂ ತರಕಾರಿ ತೋಟವಿದೆ. ಮಳೆ ನೀರನ್ನು ಇಂಗಿಸುವ ಮಳೆಕೊಯ್ಲು, ಜಲ ಮರುಪೂರಣವೂ ಇದೆ. ಗುರುಕುಲ ಶಿಕ್ಷಣ ಪದ್ಧತಿ ನೆನಪಿಸುವ ವರ್ಣ ಕುಟೀರ ಕಾಣಬಹುದು. ವರಾಂಡದಲ್ಲಿ ಹೂವಿನ ಮತ್ತು ಔಷಧೀಯ ಗಿಡಗಳನ್ನು ಬೆಳೆಯಲಾಗಿದೆ. ಸತತ ಮೂರು ವರ್ಷಗಳಿಂದ ಹಸುರು ಶಾಲಾ ಪ್ರಶಸ್ತಿ ಈ ಶಾಲೆಗೆ ಸಂದಿದೆ.

ಸ್ಮಾರ್ಟ್‌ ತರಗತಿ
ವಿದ್ಯಾರ್ಥಿಗಳ ಬುದ್ಧಿಮತ್ತೆ ಹೆಚ್ಚಿಸಲು ಸ್ಮಾರ್ಟ್‌ ತರಗತಿ ವ್ಯವಸ್ಥೆ ಇದೆ. ಪ್ರಸಕ್ತ ವರ್ಷದಲ್ಲಿ ಆನ್‌ಲೈನ್‌ ಲೈಬ್ರರಿ ತೆರೆಯಲಾಗುತ್ತಿದೆ. ವಿಜ್ಞಾನ ಗ್ರಂಥಾಲಯ, ಕಲಿಕೆ ಜತೆ ಕೃಷಿ ಪಾಠ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ, ದೇಶಭಕ್ತಿ, ಸಾಮಾಜಿಕ ಚಟುವಟಿಕೆ, ಪ್ರತಿಭಾ ಕಾರಂಜಿ ಮೊದಲಾದ ಕ್ಷೇತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಹೇಳಿಕೊಡಲಾಗುತ್ತದೆ.

ಪ್ರಾರಂಭೋತ್ಸವ ಉದ್ಘಾಟನೆ
ಬುಧವಾರ ನಡೆದ ಶಾಲಾ ಪ್ರಾರಂಭೋತ್ಸವವನ್ನು ಬಿಳಿನೆಲೆ ಗ್ರಾ.ಪಂ. ಸದಸ್ಯ ಶಿವಪ್ರಸಾದ್‌ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಮೋಹನ್‌ ಪಳ್ಳಿಗದ್ದೆ, ಮುಖ್ಯ ಶಿಕ್ಷಕಿ ಪುಷ್ಪಾವತಿ ಕೆ.ಬಿ. ಶಿಕ್ಷಕಿಯರಾದ ಪವಿತ್ರಾ, ಅಂಬಿಕಾ, ವನಿತಾ, ಸಿದ್ಧಲಿಂಗಸ್ವಾಮಿ, ಸಿಬಂದಿಗಳು, ವಿದ್ಯಾರ್ಥಿಗಳು, ನಾಗೇಶ್‌ ಕೋಟೆಬೈಲು, ಹೂವಪ್ಪ ಬ್ರಾಂತಿಕೊಚ್ಚಿ, ಮೋಹನ್‌ ಕಳಿಗೆ, ನೀಲಪ್ಪ ಗೌಡ ಕಳಿಗೆ, ಧರ್ಮಪಾಲ ಗೌಡ, ಕೇಶವ ಗೌಡ, ತಿಲೇಶ್‌, ಡೀಕಯ್ಯ ಗೌಡ, ಪುಷ್ಪಾವತಿ, ದಮಯಂತಿ, ಸುಕುಮಾರ ಗೌಡ ಚೇರು, ದೇವಪ್ಪ ಗೌಡ ಚೇರು, ದಿನೇಶ್‌ ಗುಂಡಿಗದ್ದೆ, ರೇಖಾ ಚಾವಡಿಬಾಗಿಲು, ಗಿರಿಧರ ಗೌಡ, ಆಶಾ ಕಾರ್ಯಕರ್ತೆ ಕುಸುಮಾವತಿ, ಊರ ಶಾಲಾಭಿಮಾನಿಗಳು ಉಪಸ್ಥಿತರಿದ್ದರು.

ಸ. ಶಾಲೆ ಎಲ್ಲರ ಸಹಕಾರದಿಂದ ಸಾಧ್ಯ
ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆ ಆಗದಂತೆ ಉತ್ತಮ ವಾತಾವರಣ ಸೃಷ್ಟಿಸಲಾಗುತ್ತಿದೆ. ಶಿಕ್ಷಣ ಇಲಾಖೆ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು, ಶಿಕ್ಷಣ ಪ್ರೇಮಿಗಳ ಜತೆಗೆ ದಾನಿಗಳ ಸಹಕಾರದಿಂದ ಇದೆಲ್ಲವನ್ನು ಅಳವಡಿಸಿಕೊಳ್ಳಲು ಸಾಧ್ಯವಾಗಿದೆ.
– ಪುಷ್ಪಾವತಿ ಕೆ.ಬಿ. ಮುಖ್ಯ ಶಿಕ್ಷಕಿ

ಆಟೋದಲ್ಲಿ ಸಂಚರಿಸಿದರು
ಮುಖ್ಯ ಶಿಕ್ಷಕಿ, ಸಹಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಹೆತ್ತವರು, ಊರವರು, ಶಿಕ್ಷಣ ಪ್ರೇಮಿ ಗಳು ಸಕಲ ತಯಾರಿಯೊಂದಿಗೆ ಅಕ್ಷರ ಬಂಡಿಯ ಜಾಥಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.