ಪುಣ್ಚಪ್ಪಾಡಿ ಶಾಲೆ: ಭರಪೂರ ಬೆಣ್ಣೆ ಹಣ್ಣಿನ ಫಸಲು

ಈ ಶಾಲೆಯಲ್ಲಿವೆ ತೆಂಗು, ಕಂಗು, ಸಂಪಿಗೆ, ನೆಲ್ಲಿ, ಗೇರು, ಹಲಸಿನ ಮರಗಳು

Team Udayavani, Sep 18, 2019, 5:08 AM IST

e-34

ಬೆಣ್ಣೆ ಹಣ್ಣಿನ ಫಸಲೊಂದಿಗೆ ಮಕ್ಕಳು.

ಸವಣೂರು: ಶಾಲೆಯಂಗಳದಲ್ಲಿ ಹಣ್ಣಿನ ಗಿಡ, ತರಕಾರಿ ಗಿಡ ಬೆಳೆಯಬೇಕು ಎನ್ನುವ ಒತ್ತಾಯ ಕೇಳಿಬರುತ್ತಿದೆ. ಅನೇಕರಿಗೆ ಇದೊಂದು ಸಿಲ್ಲಿ ವಿಷಯ, ಆಗದ ಕೆಲಸ ಅಂತ ಅನಿಸಿಬಿಡುತ್ತದೆ. ಬಿಹಾರದಂತಹ ರಾಜ್ಯದಲ್ಲಿ ಮಕ್ಕಳಿಗೆ ಶಾಲೆಯಲ್ಲಿಯೇ ಸಾವಯವ ತರಕಾರಿ, ಹಣ್ಣುಗಳನ್ನು ಬೆಳೆದು ನೀಡಬೇಕು ಎನ್ನುವ ಪ್ರಾಜೆಕ್ಟ್ ಸಿದ್ಧವಾಗುತ್ತಿದೆ. ಇದು ಬಿಹಾರದ ಕತೆಯಾದರೆ, ನಮ್ಮ ಗ್ರಾಮೀಣ ಭಾಗದ ಪುಣ್ಚಪ್ಪಾಡಿ ಶಾಲೆಯಲ್ಲಿ ಬೆಣ್ಣೆ ಹಣ್ಣು ಗಿಡ ಬೆಳೆಸಿ ಈಗ ಹಣ್ಣಾಗುವ ಹೊತ್ತಿಗೆ ಮಕ್ಕಳು ಖುಷಿಯಿಂದ ಶಾಲೆಯಲ್ಲೇ ತಿಂದು ಖುಷಿ ಪಟ್ಟರೆ ಪೌಷ್ಟಿಕ ಆಹಾರವೂ ಮಕ್ಕಳ ಪಾಲಿಗೆ ದಕ್ಕಿತು. ಇದು ಇನ್ನೊಂದಷ್ಟು ಶಾಲೆಗೆ ಪ್ರೇರಣೆಯಾಗಬೇಕು.

ಬಿಹಾರದ 20,000 ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಶೀಘ್ರದಲ್ಲೇ ಸಾವಯವ ತರಕಾರಿಗಳು ಮತ್ತು ಹಣ್ಣುಗಳನ್ನು ಮಧ್ಯಾಹ್ನದ ಊಟಕ್ಕೆ ಬೆಳೆಯಲಿದ್ದಾರೆ. ಬಿಹಾರದ ಪೂರ್ಣಿಯಾ ಜಿಲ್ಲೆಯ 100 ಶಾಲೆಗಳಲ್ಲಿ ಯಶಸ್ವಿ ಪ್ರಾಯೋಗಿಕ ಯೋಜನೆಯ ಅನಂತರ ರಾಜ್ಯವು ಅನೌಪಚಾರಿಕವಾಗಿ ಯೋಜನೆಯನ್ನು 4,000 ಶಾಲೆಗಳಿಗೆ ವಿಸ್ತರಿಸಿದೆ. ಈ ಯೋಜನೆಗೆ ಧನಸಹಾಯ ನೀಡಲು ಕೇಂದ್ರ ಸರಕಾರವೂ ಒಪ್ಪಿಗೆ ನೀಡಿದೆ. 75 ಶಾಲೆಗಳಲ್ಲಿ ತರಕಾರಿಗಳು ಮತ್ತು ಹಣ್ಣುಗಳನ್ನು ಬೆಳೆಯಲು ಉಪಕರಣಗಳು, ಬೀಜಗಳು ಮತ್ತು ಸಸಿಗಳನ್ನು ಖರೀದಿಸಲು ಪ್ರತಿ ಶಾಲೆಗೆ 5,000 ರೂ. ನೀಡಲಾಗುತ್ತಿದೆ. ಈ ಯೋಜನೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಕಡಬ ತಾಲೂಕಿನ ಗ್ರಾಮೀಣ ಭಾಗವಾದ ಪುಣcಪ್ಪಾಡಿ ಶಾಲೆಯಿಂದ ಅಂತಹದ್ದೇ ಸುದ್ದಿಯೊಂದು ಬಂದಿದೆ. ಇದು ಶಾಲೆಯವರೇ ಮಾಡಿರುವ ಪ್ರಯತ್ನ.

ಪುಣ್ಚಪ್ಪಾಡಿ ಶಾಲೆಯಂಗಳಕ್ಕೆ ಕಾಲಿಡುತ್ತಿದ್ದಂತೆ ಎದುರಾಗುವುದು ತೆಂಗು, ಕಂಗು, ಸಂಪಿಗೆ, ನೆಲ್ಲಿ, ಗೇರು, ಹಲಸಿನ ಮರಗಳು ಜತೆಗೆ ವಿಶಿಷ್ಟ ಬೆಣ್ಣೆ ಹಣ್ಣಿನ ಮರವೊಂದು ತನ್ನತ್ತ ನಮ್ಮನ್ನು ಸೆಳೆಯುತ್ತದೆ. ಮರದ ತುಂಬಾ ಬೆಣ್ಣೆ ಹಣ್ಣಾಗಿದೆ. ಹೀಗಾಗಿ ಮಕ್ಕಳಿಗೆ ಖುಷಿಯೋ ಖುಷಿ.

ಕೈಗೆಟಕುತ್ತಿವೆ ಹಣ್ಣುಗಳು
ಪುಣcಪ್ಪಾಡಿ ಶಾಲೆಯ ಪ್ರೀತಿಯ ಬೆಣ್ಣೆ ಹಣ್ಣಿನ ಮರ ತನ್ನ ಮೈತುಂಬಾ ಕಾಯಿಗಳನ್ನು ಬಿಟ್ಟು ತೂಗಿದೆ. ಜೂನ್‌ ತಿಂಗಳ ಆರಂಭದಿಂದಲೂ ನಮ್ಮ ಮಕ್ಕಳಿಗೆ ಈ ಬೆಣ್ಣೆ ಹಣ್ಣುಗಳ ಮೇಲೆಯೇ ಆಕರ್ಷಣೆ. ಮರದಡಿಗೆ ಹೋಗಿ ಹಣ್ಣುಗಳನ್ನು ಮುಟ್ಟಿ ಲೆಕ್ಕ ಮಾಡದಿದ್ದರೆ ಆ ದಿನ ಮಕ್ಕಳಿಗೆ ಪೂರ್ಣವಾಗುವುದಿಲ್ಲ. ಬೆಳೆಯುವ ಪ್ರತೀ ಹಂತವನ್ನು ಮಕ್ಕಳು ಸಂಭ್ರಮಿಸಿದರು.

1 ಕ್ವಿಂಟಾಲ್‌ ಹಣ್ಣು
ಅಂತೂ ಕಾಯಿಗಳೂ ಬಲಿತು ಅವುಗಳನ್ನು ಕೊಯ್ದದ್ದೂ ಆಯಿತು. ಬುಟ್ಟಿ ತುಂಬಿದ ಕಾಯಿಗಳು ಇದ್ದುದು 1 ಕ್ವಿಂಟಾಲ್‌ ನಷ್ಟು. ಎಲ್ಲ ಮಕ್ಕಳಿಗೆ, ಮಕ್ಕಳ ಮನೆಗೂ ಹಂಚಿ ಉಳಿದುದನ್ನು ಶಾಲಾಭಿವೃದ್ಧಿಯ ಸಲುವಾಗಿ ಮಾರಾಟ ಮಾಡಲಾಯಿತು. ಶಾಲೆಗೆ ಕೊಂಚ ಆದಾಯವೂ ಆಯಿತು.

 ಪೌಷ್ಟಿಕ ಆಹಾರ
ಕಳೆದ ವರ್ಷವೂ ಬೆಣ್ಣೆ ಹಣ್ಣು ಮಕ್ಕಳಿಗೆ ಇಷ್ಟವಾಗಿತ್ತು. ಹಣ್ಣಾದಾಗ ಅದನ್ನು ಮಕ್ಕಳು ತಿನ್ನುವ ಸಂಭ್ರಮ ನೋಡುವುದೇ ಆನಂದ. ಈ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವೂ ಲಭ್ಯವಾದಂತಾಗುತ್ತದೆ
– ರಶ್ಮಿತಾ ನರಿಮೊಗರು,  ಶಾಲೆಯ ಮುಖ್ಯ ಶಿಕ್ಷಕಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.