ಗ್ರಾಮೀಣ ಮಹಿಳೆಯರನ್ನು ಸದೃಢಗೊಳಿಸಿದ ಸಂಜೀವಿನಿ

ದ.ಕ. ಜಿಲ್ಲೆಯ ನೇತ್ರಾವತಿ ಒಕ್ಕೂಟಕ್ಕೆ 6.8 ಕೋ.ರೂ. ಅನುದಾನ

Team Udayavani, Jun 26, 2022, 4:04 PM IST

15

ಬೆಳ್ತಂಗಡಿ: ರಾಜ್ಯದ ಪ್ರತೀ ತಾಲೂಕಿನಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ಸಮುದಾಯ ಸಂಸ್ಥೆಗಳ ಮೂಲಕ ಸ್ವ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ರಾಜ್ಯ ಸರಕಾರವು ಸಂಜೀವಿನಿ ಎನ್ನುವ ಹೆಸರಿನಿಂದ ಅನುಷ್ಠಾನಗೊಳಿಸಿದ ಒಕ್ಕೂಟ ವ್ಯವಸ್ಥೆಯು ಇಂದು ಉಭಯ ಜಿಲ್ಲೆಯಲ್ಲಿ ಸದ್ದಿಲ್ಲದೆ ಕ್ರಾಂತಿಕಾರಿ ಹೆಜ್ಜೆಯನ್ನಿರಿಸಿದೆ.

ರಾಜ್ಯದಲ್ಲಿ ಈ ಅಭಿಯಾನವನ್ನು ಕಾರ್ಯಗತಗೊಳಿಸಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (ಕೆಎಸ್‌ಆರ್‌ ಎಲ್‌ಪಿಎಸ್‌)ಯನ್ನು ಸೊಸೈಟಿ ರಿಜಿಸ್ಟ್ರೇಷನ್‌ ಆ್ಯಕ್ಟ್- 1961ರಡಿ ನೋಂದಣಿ ಮಾಡಿದ್ದು, ಈ ಮೂಲಕ ಸಾಲ ಸೌಲಭ್ಯ ವಿತರಿಸಿ ಸ್ವ ಉದ್ಯೋಗ ಸೃಷ್ಟಿಸುವಲ್ಲಿ ಮಹತ್ತರ ಕೊಡುಗೆ ನೀಡಿದೆ. ಇದೀಗ ಬೆಳ್ತಂಗಡಿ ತಾಲೂಕಿನ ನೇತ್ರಾವತಿ ಒಕ್ಕೂಟಕ್ಕೆ 2016-17ರಿಂದ ಈವರೆಗೆ ಗರಿಷ್ಠ 6.80 ಕೋ.ರೂ. ಅನುದಾನ ಸರಕಾರದಿಂದ ಬಿಡುಗಡೆಯಾಗುವ ಮೂಲಕ ದಾಖಲೆ ಸೃಷ್ಟಿಸಿದೆ.

ಉಳಿದಂತೆ ಬಂಟ್ವಾಳ ತಾಲೂಕಿನ ಒಕ್ಕೂಟಕ್ಕೆ 5.69ಕೋ.ರೂ. ಬಿಡು ಗಡೆಯಾಗಿದ್ದು, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು 2.65 ಕೋ.ರೂ., ಕುಂದಾಪುರ 1.69 ಕೋ.ರೂ. ಪಡೆದಿದೆ. ಈಗಾಗಲೇ ಕೇರಳದಲ್ಲಿ ಕುಟುಂಬಶ್ರೀ, ಆಂಧ್ರಪ್ರದೇಶದಲ್ಲಿ ಸರ್ಫ್‌ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದು ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಸಂಜೀವಿನಿ ಒಕ್ಕೂಟವು ಮಹಿಳಾ ಜೀವನ ಭದ್ರತೆಗೊಂದು ಅಕ್ಷಯಪಾತ್ರೆಯಾಗಿದೆ.

1,167 ಸ್ವಸಹಾಯ ಸಂಘಗಳು

ಬೆಳ್ತಂಗಡಿ ತಾಲೂಕು ಮಟ್ಟದ 48 ಗ್ರಾಮ ಪಂಚಾಯತ್‌ಗಳಲ್ಲಿ 48 ಒಕ್ಕೂಟ ರಚನೆಯಾಗಿವೆ. ಇದರ ಕೆಳಗಡೆ 196 ವಾರ್ಡ್‌ ಒಕ್ಕೂಟಗಳಿವೆ. ತಾಲೂಕಿನಲ್ಲಿ 1,167 ಸ್ವಸಹಾಯ ಸಂಘಗಳು ಎನ್‌. ಆರ್‌.ಎಲ್‌. ಎಂ.ನಡಿ ನೋಂದಣಿಯಾಗಿವೆ. ಪ್ರತೀ ಒಕ್ಕೂಟಕ್ಕೆ ಸ್ವಸಹಾಯ ಸಂಘ ನೋಂದಣಿಯಾದ ಆಧಾರದಲ್ಲಿ ಸರಕಾರದಿಂದ ಸಮುದಾಯ ಬಂಡವಾಳ ನಿಧಿ ಬಿಡುಗಡೆಯಾಗುತ್ತದೆ. ಅತೀ ಹೆಚ್ಚು ಎಂದರೆ ಗರಿಷ್ಠ 100ರ ಆಸುಪಾಸು ಸಂಘ ರಚಿಸಿದ ಒಕ್ಕೂಟಕ್ಕೆ ಸರಕಾರದಿಂದ 30 ಲಕ್ಷ ರೂ. ಬಿಡುಗಡೆಯಾಗುತ್ತದೆ. ಚಾರ್ಮಾಡಿಯ ತ್ರಿವರ್ಣ ಸಂಜೀವಿನಿ ಮಹಿಳಾ ಸಂಘ ಈ ಸಾಧನೆ ಮಾಡಿದೆ. ಇದರಡಿ ಬರೋಬ್ಬರಿ 95 ಸ್ವಸಹಾಯ (ಪ್ರತೀ ಸಂಘದಲ್ಲಿ ಕನಿಷ್ಠ 10 ಮಂದಿ, ಗರಿಷ್ಠ 20 ಮಂದಿ ) ಸಂಘಗಳಿವೆ. ಇನ್ನುಳಿದಂತೆ ಉಜಿರೆ ಒಕ್ಕೂಟವೂ 95 ಸ್ವಸಹಾಯ ಸಂಘ ರಚಿಸಿರುವುದು ಈವರೆಗಿನ ಉಭಯ ಜಿಲ್ಲೆಯ ದಾಖಲೆಯಾಗಿದೆ.

ತಾಲೂಕಿನಾದ್ಯಂತ ಪ್ರತೀ ಒಕ್ಕೂಟಕ್ಕೆ ಬಿಡು ಗಡೆಯಾದ ಸಮುದಾಯ ಬಂಡವಾಳ ನಿಧಿಯಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಬೇರೆ ಬೇರೆ ಸ್ವ ಉದ್ಯೋಗ ನಡೆಸಲು ಸರಕಾರದ ನಿಯಮಾನುಸಾರವಾಗಿ ಸಾಲ ನೀಡಲಾಗುತ್ತದೆ. ಎಲ್ಲ ಸಂಘಕ್ಕೆ 1.50 ಲಕ್ಷ ರೂ. ಪ್ರಥಮ ಹಂತದಲ್ಲಿ ಸಾಲ ನೀಡಲು ಆದೇಶ ಸರಕಾರ ನೀಡಿದೆ.

ಸ್ವೋದ್ಯೋಗಕ್ಕೊಂದು ಶಕ್ತಿ

ತಣ್ಣೀರುಪಂಥದಲ್ಲಿ ಸುಗಮ ಸಂಜೀವಿನಿ ಒಕ್ಕೂಟದ ಲಕ್ಷ್ಮೀ ಸ್ವಸಹಾಯ ಸಂಘದಿಂದ ಹಡಿಲು ಗದ್ದೆಯಲ್ಲಿ ಭತ್ತದ ನಾಟಿ, ಬೆಳಾಲು ಕಸ್ತೂರಿ ಬಾೖ ಸ್ವಸಹಾಯ ಸಂಘದ ಸದಸ್ಯರಿಂದ ತರಕಾರಿ ಬೆಳೆ, ಉಜಿರೆಯ ಪ್ರೇರಣಾ ಸಂಜೀವಿನಿ ಒಕ್ಕೂಟದ ಮೂಲಕ ಉಜಿರೆ ಗ್ರಾ.ಪಂ. ಸಹಕಾರದೊಂದಿಗೆ ಗ್ರಾಮೀಣ ರೈತ ಸಂತೆ ಮಾರುಕಟ್ಟೆ, ಧರ್ಮಸ್ಥಳದ ಮಾನ್ವಿಶ್ರೀ ಮಹಿಳಾ ಒಕ್ಕೂಟ ಮುಖೇನ ವಾರದ ಮೂರುದಿನ ಹಳ್ಳಿ ಸಂತೆ, ಲಾೖಲ ಸಮಗ್ರ ಸಂಜೀವಿನಿ ಒಕ್ಕೂಟ ಮೂಲಕ ಸ್ನೇಹ ಶ್ರೀ ಸಂಜೀವಿನಿ ಗುಂಪಿನಿಂದ ಮೀನಿನಿಂದ ವಿವಿಧ ಬಗೆಯ ಆಹಾರ ಉತ್ಪನ್ನ ಮಾಡಿ ಮಾರಾಟ ಮಾಡುತ್ತಿರುವುದು ಮಾದರಿ ಎಂದು ತಾ.ಪಂ. ಇ.ಒ. ಕುಸುಮಾಧರ್‌ ಬಿ. ತಿಳಿಸಿದ್ದಾರೆ.

ಬಡ್ಡಿ ಇಲ್ಲದೆ ಸಾಲ: ಪ್ರತೀ ಗ್ರಾ.ಪಂ. ಮಟ್ಟದಲ್ಲಿ ಒಕ್ಕೂಟ ರಚಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಸಾಧನೆ ಉತ್ತಮವಾಗಿದೆ. ಸರಕಾರವು ಯಾವುದೇ ದಾಖಲೆಗಳಿಲ್ಲದೆ, ಒಕ್ಕೂಟಕ್ಕೆ ಶೇ. 9ರಡಿ ಸಾಲ ವಿತರಿಸುತ್ತಿದ್ದು, ಅದರಡಿ ವ್ಯವಹರಿಸುವ ಪ್ರತೀ ಸ್ವಸಹಾಯ ಸಂಘದ ಸದಸ್ಯರಿಗೆ ಶೇ. 12ರಲ್ಲಿ ಸ್ವ ಉದ್ಯೋಗಕ್ಕೆ ಸಾಲ ವಿತರಿಸಲಾಗಿದೆ. ಉಳಿಕೆ ಶೇ. 3 ಲಾಭಾಂಶ ಸಂಘಕ್ಕೆ ಸೇರಲಿದೆ. ಸರಕಾರ ಬಡ್ಡಿರಹಿತ ಸಾಲನೀಡುವ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕತೆಯನ್ನು ವೃದ್ಧಿಸುವಲ್ಲಿ ಮಹತ್ತರ ಕೊಡುಗೆ ನೀಡಿದೆ.-ಡಾ| ಕುಮಾರ್‌, ಮುಖ್ಯಕಾರ್ಯನಿರ್ವಹಣಾಧಿಕಾರಿ, ದ.ಕ.ಜಿ.ಪಂ.

„ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.