ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆಯ ಹೆಗ್ಗಳಿಕೆ

 ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ನಲ್ಲಿ ಸೋಲಾರ್‌ ಘಟಕ ,ಮೆಸ್ಕಾಂನಿಂದ ಹೆಚ್ಚುವರಿ ವಿದ್ಯುತ್‌ ಖರೀದಿ

Team Udayavani, Jan 28, 2021, 2:20 AM IST

Untitled-1

ಬಂಟ್ವಾಳ: ಸರಕಾರವು ತನ್ನ ಅಧೀನ ಸಂಸ್ಥೆಗಳ ನಿರ್ವಹಣೆಗಾಗಿ ಪ್ರತೀ ತಿಂಗಳು ಲಕ್ಷಾಂತರ ರೂಪಾಯಿ ವ್ಯಯಿಸುತ್ತಿದ್ದು, ಅದರಲ್ಲಿ ವಿದ್ಯುತ್‌ ಶುಲ್ಕ ಮುಖ್ಯವಾಗಿರುತ್ತದೆ. ಆದರೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದು, ಸೋಲಾರ್‌ ಘಟಕದ ಮೂಲಕ ಮೆಸ್ಕಾಂನ ಗ್ರಿಡ್‌ಗೆ ಹೆಚ್ಚುವರಿ ವಿದ್ಯುತ್‌ ಪೂರೈಕೆ ಮಾಡುತ್ತಿದೆ !

ಬಂಟ್ವಾಳ ಪುರಸಭೆ ವ್ಯಾಪ್ತಿಯ ಎತ್ತರದ ಪ್ರದೇಶವಾದ ಅರ್ಬಿಗುಡ್ಡೆ ಭಾಗದಲ್ಲಿ ಸರ ಕಾರಿ ಪಾಲಿಟೆಕ್ನಿಕ್‌ ಕಾರ್ಯಾಚರಿಸುತ್ತಿದ್ದು, ಪಾಲಿಟೆಕ್ನಿಕ್‌ ಕಟ್ಟಡದ ಮೇಲ್ಛಾವಣಿಯಲ್ಲಿ 33 ಕಿಲೋವ್ಯಾಟ್‌(ಕೆವಿ) ಸಾಮರ್ಥ್ಯದ ಸೋಲಾರ್‌ ಘಟಕ ಅಳವಡಿಸಲಾಗಿದೆ. ಇದು ಬಹಳ ಎತ್ತರದ ಪ್ರದೇಶವಾದ ಕಾರಣದಿಂದ ಬಿಸಿಲಿನ ತೀವ್ರತೆಯು ಹೆಚ್ಚಿದ್ದು, ವಿದ್ಯುತ್‌ ಉತ್ಪಾದನೆಗೆ ಪೂರಕ ವಾತಾವರಣವಿದೆ.

ತಿಂಗಳ ಮೊತ್ತ 40 ಸಾವಿರ ರೂ. :

ಪಾಲಿಟೆಕ್ನಿಕ್‌ನ ವಿವಿಧ ವಿಭಾಗಗಳ ಪ್ರಯೋಗಾಲಯಗಳಲ್ಲಿ ಕಂಪ್ಯೂಟರ್‌ ಹಾಗೂ ಮೆಷಿನರಿಗಳು ಕಾರ್ಯಾಚರಿಸುವುದರಿಂದ ವಿದ್ಯುತ್‌ ಶುಲ್ಕ ಸರಾಸರಿ ಸುಮಾರು 40 ಸಾವಿರ ರೂ. ಬರುತ್ತದೆ. ಈ ಮೊತ್ತ ಕಳೆದು ಸೋಲಾರ್‌ ಘಟಕದಿಂದ ಹೆಚ್ಚುವರಿ ವಿದ್ಯುತ್‌ ಅನ್ನು ಮೆಸ್ಕಾಂಗೆ ನೀಡುವುದರಿಂದ ತಿಂಗಳಿಗೆ ಸುಮಾರು 3ರಿಂದ 4 ಸಾವಿರ ರೂ. ಮೆಸ್ಕಾಂ ನೀಡುತ್ತಿದ್ದು, ಕಳೆದ ವರ್ಷ 31 ಸಾವಿರ ರೂ. ಪಾಲಿಟೆಕ್ನಿಕ್‌ಗೆ ಹೆಚ್ಚುವರಿ ವಿದ್ಯುತ್‌ ಮಾರಾಟದ ಆದಾಯ ಬಂದಿತ್ತು.

ಸರಕಾರಿ 40 ಸಾವಿರ ರೂ. ವಿದ್ಯುತ್‌ ಶುಲ್ಕದಂತೆ ವಾರ್ಷಿಕವಾಗಿ 4.80 ಲಕ್ಷ ರೂ. ಉಳಿಕೆ ಮಾಡಲಾಗುತ್ತಿದ್ದು, ಜತೆಗೆ ಹೆಚ್ಚುವರಿ ವಿದ್ಯುತ್‌ ಮಾರಾಟದ ಮೊತ್ತ ಸೇರಿ ವಾರ್ಷಿಕ ಉಳಿಕೆ 5 ಲಕ್ಷ ರೂ. ದಾಟುತ್ತದೆ. ಆದರೆ ಮಳೆಗಾಲದಲ್ಲಿ ಕೆಲ ತಿಂಗಳು ಸ್ವಲ್ಪ ಮೊತ್ತವನ್ನು ಮೆಸ್ಕಾಂಗೆ ಪಾವತಿಸಲು ಸಿಗುತ್ತದೆ. ರಜಾ ಸಮಯದಲ್ಲಿ ಇಲ್ಲಿ ಬಳಕೆಯಾಗದೇ ಇದ್ದಾಗ ನೇರವಾಗಿ ವಿದ್ಯುತ್‌ ಗ್ರಿಡ್‌ಗೆ ಪೂರೈಕೆಯಾಗುತ್ತದೆ.

20 ಲಕ್ಷ ರೂ.ಅನುಷ್ಠಾನ ವೆಚ್ಚ :

ಪಾಲಿಟೆಕ್ನಿಕ್‌ ಕೆಲವೊಂದು ಸೇವೆಗಳ ಮೂಲಕ ಆದಾಯ ಗಳಿಕೆ (ರೆವೆನ್ಯೂ ಜನರೇಶನ್‌)ಮಾಡುತ್ತಿದ್ದು, ಅದರ ಮೊತ್ತದಲ್ಲಿ ಸೋಲಾರ್‌ ಘಟಕ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದೆ. 2015ರಲ್ಲಿ ಈ ಸೋಲಾರ್‌ ಘಟಕವನ್ನು ಅಳವಡಿಸಿದ್ದು,  20 ಲಕ್ಷ ರೂ. ವೆಚ್ಚ ತಗಲಿತ್ತು.  ಅನುಷ್ಠಾನ ವೆಚ್ಚ ಹಾಗೂ ವಾರ್ಷಿಕ ಆದಾಯವನ್ನು ಲೆಕ್ಕ ಹಾಕಿದರೆ, ಅನುಷ್ಠಾನದ ಮೊತ್ತ ಈಗಾಗಲೇ ಬಂದಿರುವ ಸಾಧ್ಯತೆ ಇದೆ. ಸುಮಾರು 25 ವರ್ಷಗಳ ಇದರ ನಿರ್ವಹಣೆ ಉಚಿತವಾಗಿದ್ದು, ಯಾವುದೇ ಖರ್ಚುಗಳಿರುವುದಿಲ್ಲ. ಅಂದಿನ ಪ್ರಾಂಶುಪಾಲ ಡಾ| ಚೆನ್ನಗಿರಿ ಗೌಡ ನೇತೃತ್ವದಲ್ಲಿ ಈ ಕಾರ್ಯ ನಡೆದಿದ್ದು, ಪ್ರಸ್ತುತ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ದೇವರಾಜ್‌ ನಾಯಕ್‌ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಟಾಪ್‌-10 ಕಾಲೇಜು ಗೌರವ :

ಪ್ರಸ್ತುತ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ನಲ್ಲಿ ಸುಮಾರು 580 ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ರಾಜ್ಯದ ಟಾಪ್‌-10 ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಇದೂ ಒಂದಾಗಿದೆ. ಮಂಗಳೂರು ಕೆಪಿಟಿಯನ್ನು ಹೊರತು ಪಡಿಸಿದರೆ ಜಿಲ್ಲೆಯ 2ನೇ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಎಂಬ ಗೌರವವಿದೆ. ಇದರ ಜತೆಗೆ ವಿದ್ಯುತ್‌ ಬಳಿಕೆಯಲ್ಲೂ ಸ್ವಾವಲಂಬನೆ ಸಾಧಿಸಿರುವುದು ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಸಂಸ್ಥೆಯಲ್ಲಿ ಸೋಲಾರ್‌ ಘಟಕ ಅಳವಡಿಸಿರುವ ಕಾರಣ ನಮಗೆ ವಿದ್ಯುತ್‌ ಶುಲ್ಕ ಪಾವತಿಗೆ ಸಿಗುವುದಿಲ್ಲ. ಹೆಚ್ಚುವರಿ ವಿದ್ಯುತ್‌ ಗ್ರಿಡ್‌ಗೆ ಪೂರೈಕೆ ಮಾಡಲಾಗುತ್ತಿದ್ದು, ಅದರ ಮೊತ್ತವನ್ನು ಮೆಸ್ಕಾಂನವರು ನೀಡುತ್ತಿದ್ದಾರೆ. ಹೀಗಾಗಿ ಸಂಸ್ಥೆಯು ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. -ಸಿ.ಜೆ. ಪ್ರಕಾಶ್‌,  ಪ್ರಾಂಶುಪಾಲರು, ಸರಕಾರಿ ಪಾಲಿಟೆಕ್ನಿಕ್‌, ಬಂಟ್ವಾಳ

 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.