ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ
Team Udayavani, Nov 6, 2020, 8:39 AM IST
ಬಂಟ್ವಾಳ: ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ (51) ಅವರು ಕಲ್ಲಡ್ಕ ಸಮೀಪ ಅಮ್ಟೂರಿನ ಸ್ವಗೃಹದಲ್ಲಿ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.
ಸೂರ್ಯನಾರಾಯಣ ಪೂವಳ ಅವರು ಸುಮಾರು 25 ವರ್ಷಗಳ ಕಾಲ ವಿವಿಧ ಪತ್ರಿಕೆಗಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಅವರು ಪತ್ನಿ, ತಾಯಿ, ಸಹೋದರರು, ಸಹೋದರಿಯನ್ನು ಅವರು ಅಗಲಿದ್ದಾರೆ.