ಸೆ. 16ರಿಂದ ಮಂಗಳೂರು ವಿ.ವಿ. ಪದವಿ ಪರೀಕ್ಷೆ: ಗಡಿ ವಿದ್ಯಾರ್ಥಿಗಳಿಗೆ ಹಾಜರಾಗಲು ಸಮಸ್ಯೆ


Team Udayavani, Sep 13, 2020, 5:59 AM IST

ಸೆ. 16ರಿಂದ ಮಂಗಳೂರು ವಿ.ವಿ. ಪದವಿ ಪರೀಕ್ಷೆ: ಗಡಿ ವಿದ್ಯಾರ್ಥಿಗಳಿಗೆ ಹಾಜರಾಗಲು ಸಮಸ್ಯೆ

ಸಾಂದರ್ಭಿಕ ಚಿತ್ರ

ಪುತ್ತೂರು: ಸೆ. 16ರಿಂದ ಪದವಿ ಪರೀಕ್ಷೆ ಆರಂಭಗೊಳ್ಳಲಿದ್ದು ಕೇರಳ-ಕರ್ನಾಟಕ ನಡುವೆ ಕೆಎಸ್‌ಆರ್‌ಟಿಸಿ ಬಸ್‌ ಓಡಾಟ ಪುನರಾರಂಭಗೊಳ್ಳದ ಕಾರಣ ಗಡಿ ವ್ಯಾಪ್ತಿಯೊಳಗಿನ ಮಂಗಳೂರು ವಿ.ವಿ.ಗೆ ಒಳಪಟ್ಟಿರುವ ವಿದ್ಯಾರ್ಥಿಗಳಿಗೆ ಪದವಿ ಪರೀಕ್ಷೆಗೆ ಹಾಜರಾಗಲು ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಇದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.

150 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು..!
ಪುತ್ತೂರು, ಸುಳ್ಯ ಸಹಿತ ದ.ಕ.ಜಿಲ್ಲೆಯ ವಿವಿಧೆಡೆ ವಿ.ವಿ. ವ್ಯಾಪ್ತಿಗೆ ಒಳಪಟ್ಟಿರುವ ಸರಕಾರಿ, ಖಾಸಗಿ ಪದವಿ ಕಾಲೇಜುಗಳಲ್ಲಿ 150ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಉಭಯ ಜಿಲ್ಲೆಗಳ ಸರಕಾರಿ, ಖಾಸಗಿ ಬಸ್‌ಗಳಲ್ಲಿ ಬಸ್‌ಪಾಸ್‌ ವ್ಯವಸ್ಥೆಯಡಿ ಪ್ರತಿನಿತ್ಯ ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಲಾಕ್‌ಡೌನ್‌ ಅನಂತರ ಬಸ್‌ ಓಡಾಟ ಸ್ಥಗಿತಗೊಂಡ ಬಳಿಕ ಗಡಿ ಬಿಕ್ಕಟ್ಟು ಇತ್ಯರ್ಥ ವಾಗದ ಕಾರಣ ಬಸ್‌ ಓಡಾಟಕ್ಕೆ ಇನ್ನೂ ಗ್ರೀನ್‌ ಸಿಗ್ನಲ್‌ ದೊರೆತಿಲ್ಲ.

ಸೆ.16ರಿಂದ ಪರೀಕ್ಷೆ ಆರಂಭ
ಮಂಗಳೂರು ವಿ.ವಿ.ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಸೆ. 16ರಿಂದ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಪರೀಕ್ಷೆ ಆರಂಭಗೊಳ್ಳಲಿದೆ. ಕೋವಿಡ್‌ ತಪಾಸಣೆ ಕಾರಣದಿಂದ ಬೆಳಗ್ಗೆ 9ಕ್ಕಿಂತ ಮೊದಲೇ ಪರೀಕ್ಷಾ ಕೇಂದ್ರಕ್ಕೆ ತಲಪಲು ಸೂಚನೆ ನೀಡಲಾಗಿದೆ. ಆದರೆ ಬಸ್‌ ಓಡಾಟಕ್ಕೆ ಕೇರಳ ಸರಕಾರ ಒಪ್ಪಿಗೆ ನೀಡದಿರುವ ಕಾರಣ ಗಡಿಭಾಗ ಸಹಿತ ಕಾಸರಗೋಡು ಕಡೆಯಿಂದ ದ.ಕ.ಜಿಲ್ಲೆಯ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ತಲುಪುವುದು ಹೇಗೆ ಎಂಬ ಪ್ರಶ್ನೆ ವಿದ್ಯಾರ್ಥಿಗಳಿಗೆ ಎದುರಾಗಿದೆ.

ಸೆ. 21ರ ಅನಂತರ ಒಪ್ಪಿಗೆ..?
ಮಾಹಿತಿ ಪ್ರಕಾರ ಕೇರಳ ಸರಕಾರ ಸೆ. 21ರ ಅನಂತರ ಬಸ್‌ ಓಡಾಟಕ್ಕೆ ಅನುಮತಿ ನೀಡಲಿರುವ ಸಾಧ್ಯತೆ ಇದೆ. ಆದರೆ
ಸೆ.16 ರಿಂದ ಪರೀಕ್ಷೆ ಆರಂಭಗೊಳ್ಳುವ ಕಾರಣ ಸೆ. 21 ರ ತನಕ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಏನು ಎನ್ನುವ ಬಗ್ಗೆ ಗೊಂದಲ ಮೂಡಿದೆ.

ಅನಾರೋಗ್ಯವಿದ್ದರೆ ವಿಶೇಷ ಅವಕಾಶ
ಕೋವಿಡ್ ಸೋಂಕಿನ ಸಮಸ್ಯೆ, ಅನಾರೋಗ್ಯದಿಂದ ಪರೀಕ್ಷೆ ಬರೆಯಲು ಸಾಧ್ಯವಿಲ್ಲದವರಿಗೆ ಮುಂದಿನ ದಿನಗಳಲ್ಲಿ ವಿಶೇಷ ಪರೀಕ್ಷೆ ನಡೆಸಲು ವಿ.ವಿ. ನಿರ್ಧರಿಸಿದೆ. ಆದರೆ ಗಡಿ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಸಂಬಂಧಿಸಿ ಯಾವುದೇ ಸೂಚನೆ ನಮಗೆ ಬಂದಿಲ್ಲ. ಹೊರ ರಾಜ್ಯದವರು ವಾಹನ ವ್ಯವಸ್ಥೆ ಇಲ್ಲದೇ ಗೈರುಹಾಜರಾದರೆ ವಿಶೇಷ ಪರೀಕ್ಷೆ ಅವರಿಗೆ ಅನ್ವಯವಾಗಲಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಎಸೆಸೆಲ್ಸಿ, ಪಿಯುಸಿ ಮಾದರಿಯಲ್ಲಿ ಗಡಿ ಭಾಗದ ವಿದ್ಯಾರ್ಥಿಗಳನ್ನು ಕರೆತರುವ ವ್ಯವಸ್ಥೆಯಾದರೆ ಉತ್ತಮ ಎಂದು ಸುಳ್ಯ ಕಾಲೇಜೊಂದರ ಪ್ರಾಂಶುಪಾಲರು ಅಭಿಪ್ರಾಯಪಟ್ಟಿದ್ದಾರೆ.

ಗಮನಕ್ಕೆ ಬಂದಿದೆ
ಸಂಚಾರ ಸಮಸ್ಯೆ ಗಮನಕ್ಕೆ ಬಂದಿದೆ. ಕೇರಳದ ಅನುಮತಿ ಸಿಗದೆ ನಾವು ಗಡಿ ದಾಟಿ ಬಸ್‌ ಓಡಿಸಲು ಸಾಧ್ಯವಿಲ್ಲ. ಕರ್ನಾಟಕದ ಗಡಿ ತನಕ ಸಂಚರಿಸಬಹುದಷ್ಟೇ. ಅಲ್ಲಿಗೆ ಬಂದು ವಿದ್ಯಾರ್ಥಿಗಳು ಬಸ್‌ ಮೂಲಕ ಪ್ರಯಾಣಿಸಬಹುದು. ಲಭ್ಯ ಮಾಹಿತಿ ಪ್ರಕಾರ ಸೆ. 21ರಿಂದ ಬಸ್‌ ಓಡಾಟಕ್ಕೆ ಅನುಮತಿ ಸಿಗಲಿದೆ.
-ನಾಗೇಂದ್ರ ವಿಭಾಗ ನಿಯಂತ್ರಣಾಧಿಕಾರಿ, ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ

ನಾನು ಕೇರಳ ವ್ಯಾಪ್ತಿಯ ದೇಲಂಪಾಡಿ ನಿವಾಸಿ. ಈ ಹಿಂದೆ ಬೆಳಗ್ಗೆ 7ಕ್ಕೆ ಪುತ್ತೂರಿಗೆ ಬಸ್‌ ಇತ್ತು. ಪುತ್ತೂರಿನ ಕಾಲೇಜಿಗೆ ಆ ಬಸ್‌ನಲ್ಲೇ ಬರುತ್ತಿದ್ದೆ. ಸೆ. 16ರಿಂದ ಪರೀಕ್ಷೆ ಆರಂಭಗೊಳ್ಳಲಿದೆ. ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ಸಂಚಾರ ಹೇಗೆ ಅನ್ನುವುದೇ ಆತಂಕ.
ಪೂಜಾಶ್ರೀ ಅಂತಿಮ ಪದವಿ ವಿದ್ಯಾರ್ಥಿನಿ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.