ಬೆಳ್ತಂಗಡಿ: ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ; ಹಲವರಿಗೆ ಗಾಯ
Team Udayavani, Dec 23, 2022, 8:31 AM IST
ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ. 23ರ ಬೆಳ್ಳಿಗ್ಗೆ ಸಂಭವಿಸಿದೆ.
ಕೂಡ್ಲಗಿ ತಾಲೂಕಿನ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ, ರಘು, ಬಸವರಾಜ್, ಲೋಕ ಎಂಬವರು ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ವಾಹನ ನುಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತ ತಪ್ಪಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಲಿದ್ದು, ಒಟ್ಟು 6 ಆಂಬ್ಯುಲೆನ್ಸ್ ನಲ್ಲಿ ಪ್ರಯಾಣಿಕರನ್ನು ತಾಲೂಕಿನ ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ