ಶಂಭೂರು ಸರಕಾರಿ ಪ್ರೌಢಶಾಲೆ ; ಸ್ಟೀಮ್‌ ವ್ಯವಸ್ಥೆಯ ಮೂಲಕ ಮಧ್ಯಾಹ್ನದ ಬಿಸಿಯೂಟ


Team Udayavani, Aug 12, 2022, 3:13 PM IST

11

ಬಂಟ್ವಾಳ: ಸಾಮಾನ್ಯವಾಗಿ ಸರಕಾರಿ ಶಾಲೆಗಳೆಂದರೆ ಅಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಗೆ ಸರಿಯಾದ ಕೊಠಡಿಗಳೇ ಇರುವುದಿಲ್ಲ, ಮಕ್ಕಳು ಜಗಲಿಯಲ್ಲೇ ಕುಳಿತು ಊಟ ಮಾಡಬೇಕಾದ ಸ್ಥಿತಿ ಇರುತ್ತದೆ. ಆದರೆ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯು ಇದಕ್ಕೆ ತದ್ವಿರುದ್ಧವಾಗಿದ್ದು, ಇಲ್ಲಿ ಸ್ಟೀಮ್‌ ವ್ಯವಸ್ಥೆಯ ಮೂಲಕ ಬಿಸಿಯೂಟ ಸಿದ್ಧಗೊಳ್ಳುತ್ತದೆ. ಜತೆಗೆ ಊಟ ಮಾಡುವುದಕ್ಕೆ ವಿಶಾಲ ಡೈನಿಂಗ್‌ ಹಾಲ್‌ ಕೂಡ ಇಲ್ಲಿದೆ.

ತೀರಾ ಗ್ರಾಮೀಣ ಭಾಗದಲ್ಲಿರುವ ಶಂಭೂರು ಪ್ರೌಢಶಾಲೆಯು ಗುಣಮಟ್ಟದ ಶಿಕ್ಷಣದ ಮೂಲಕ ಖಾಸಗಿ ಶಾಲೆಗಳಿಗೂ ಸ್ಪರ್ಧೆ ಒಡ್ಡುವ ರೀತಿ ಬೆಳೆದು ನಿಂತಿದೆ. ಶಾಲೆಯನ್ನು ಕಳೆದ 10 ವರ್ಷಗಳಿಂದ ಬೊಂಡಾಲ ಚಾರಿಟೆಬಲ್‌ ಟ್ರಸ್ಟ್‌ನವರು ದತ್ತು ಪಡೆದು ಮುನ್ನಡೆಸುತ್ತಿದ್ದಾರೆ. ದತ್ತು ಸಂಸ್ಥೆಯು ಜನಪ್ರತಿನಿಧಿಗಳು ಹಾಗೂ ತಮ್ಮ ದತ್ತು ನಿಧಿಯ ಮೂಲಕ ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಿಸಿದೆ.

2003ರಲ್ಲಿ ಸ್ಥಳೀಯ ನಿವಾಸಿ ಧರ್ಣಪ್ಪ ಪೂಜಾರಿ ಅವರ ಮನೆಯಲ್ಲಿ ಶಂಭೂರು ಪ್ರೌಢಶಾಲೆ ಆರಂಭಗೊಂಡಿದ್ದು, ಸರಕಾರಿ ಶಾಲೆಗಳ ದತ್ತು ಎನ್ನುವ ಕಲ್ಪನೆಯೇ ಇಲ್ಲದ ಕಾಲಘಟ್ಟದಲ್ಲಿ 2008ರಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ದತ್ತು ಪಡೆದು ಹಂತ ಹಂತವಾಗಿ ಅಭಿವೃದ್ಧಿಯತ್ತ ಮುನ್ನಡೆಸುತ್ತಿದ್ದರು. ಅವರು ಮೃತಪಟ್ಟ ಬಳಿಕ 2013ರಲ್ಲಿ ಸರಕಾರ ಅವರ ಹೆಸರನ್ನೇ ಶಾಲೆಗೆ ನಾಮಕರಣ ಮಾಡಿತು. ಅದಕ್ಕಿಂತ ಮುಂಚೆಯೇ ಅವರ ಸಹೋದರ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಅವರು ಬೊಂಡಾಲ ಚಾರಿಟೆಬಲ್‌ ಟ್ರಸ್ಟ್‌ ಮೂಲಕ ದತ್ತು ಪಡೆದಿದ್ದರು.

ಅವರು ದತ್ತು ಪಡೆದ ವರ್ಷವೇ ಶಾಲೆಯಲ್ಲಿ ವಿನೂತನ ಕಲ್ಪನೆಯ ಮೂಲಕ ಬಿಸಿಯೂಟ ಸ್ಟೀಮ್‌ ವ್ಯವಸ್ಥೆಯ ಮೂಲಕ ಸಿದ್ಧಗೊಳ್ಳುತ್ತಿದ್ದು, ಜತೆಗೆ ಸ್ವಚ್ಛತಾ ಕಾರ್ಯವೂ ಇಲ್ಲಿ ಯಂತ್ರೋಪಕರಣಗಳ ಮೂಲಕ ನಡೆಯುತ್ತಿರುವುದು ವಿಶೇಷವಾಗಿದೆ. ಪ್ರಸ್ತುತ ಶಾಲೆಯಲ್ಲಿ 263 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲ ವಿದ್ಯಾರ್ಥಿಗಳು ಏಕಕಾಲದಲ್ಲಿ ಕುಳಿತು ಊಟ ಮಾಡುವ ವಿಶಾಲವಾದ ಡೈನಿಂಗ್‌ ಹಾಲ್‌ ಶಾಲೆಯಲ್ಲಿದೆ.

ಆಟದ ಮೈದಾನದ ಕೊರತೆ

ಶಾಲೆಯು ಸಾಕಷ್ಟು ಸೌಲಭ್ಯ ಗಳೊಂದಿಗೆ ಅಭಿವೃದ್ಧಿ ಹೊಂದಿದ್ದರೂ, ಶಾಲೆಗೆ ಆಟದ ಮೈದಾನ ಕೊರತೆ ಇದೆ. ಅದಕ್ಕಾಗಿ ಈಗಾಗಲೇ ಜಾಗ ಕಾಯ್ದಿರಿಸುವ ದೃಷ್ಟಿಯಿಂದ ಸರಕಾರಿ ಜಾಗವೊಂದನ್ನು ಗುರುತಿಸಲಾಗಿದೆ. ಅದರ ಕಡತ ಮಂಗಳೂರು ಸಹಾಯಕ ಕಮಿಷನರ್‌ ಕಚೇರಿಯಲ್ಲಿದೆ. ಅದು ಅಂತಿಮಗೊಂಡರೆ ವಿಶಾಲವಾದ ಮೈದಾನವೂ ಶಾಲೆಗೆ ಲಭಿಸಲಿದೆ.

ಸೋಲಾರ್‌ನಿಂದ ಶಾಲೆಗೆ ಆದಾಯ

ವಿದ್ಯುತ್‌ ಶುಲ್ಕ ಪಾವತಿಸಲು ಪರದಾಡುವ ಈ ಸಂದರ್ಭದಲ್ಲಿ ಶಂಭೂರು ಪ್ರೌಢಶಾಲೆಯು ವಿದ್ಯುತ್‌ ಬಳಕೆಯಲ್ಲೂ ಸ್ವಾವಲಂಬಿತನವನ್ನು ಸಾಧಿಸಿದೆ. 2019ರಲ್ಲಿ ಶಂಭೂರು ಶಾಲೆಯಲ್ಲಿ ಎಂಆರ್‌ಪಿಎಲ್‌ ಸಿಎಸ್‌ಆರ್‌ 10 ಲಕ್ಷ ರೂ. ಅನುದಾನದ ಮೂಲಕ ಸೋಲಾರ್‌ ಘಟಕವನ್ನು ಅಳವಡಿಸಲಾಗಿದೆ. ಇದರ ಮೂಲಕ ಶಾಲೆಯ ವಿದ್ಯುತ್‌ ಶುಲ್ಕ ಕಳೆದು ತಿಂಗಳಿಗೆ ಸರಾಸರಿ 2,500 ರೂ.ಗಳಷ್ಟು ಆದಾಯ ಸಿಗುತ್ತಿದೆ.

ಎಲ್ಲ ರೀತಿಯ ಮೂಲಸೌಕರ್ಯ: ಶಾಲೆಗೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ನೀಡುವ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ವಿಶೇಷ ಗಮನಹರಿಸಲಾಗುತ್ತಿದೆ. ಪಠ್ಯೇತರ ಚಟುವಟಿಕೆಗಳಿಗೂ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲೂ ನಮ್ಮ ಶಾಲೆ ಬಹುಮಾನಗಳಿಸಿರುವುದು ಅದಕ್ಕೆ ಉತ್ತಮ ಉದಾಹರಣೆಯಾಗಿದೆ. ಕನ್ನಡ ಹಾಗೂ ಇಂಗ್ಲಿಷ್‌ ಎರಡೂ ಮಾಧ್ಯಮಗಳಲ್ಲೂ ಇಲ್ಲಿ ಶಿಕ್ಷಣ ನೀಡಲಾಗುತ್ತಿದೆ. –ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಅಧ್ಯಕ್ಷರು, ಬೊಂಡಾಲ ಚಾರಿಟೆಬಲ್‌ ಟ್ರಸ್ಟ್‌.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.