ಶಿಶಿಲ, ಶಿಬಾಜೆ: 4 ಸಾವಿರ ಹೆ. ಅರಣ್ಯ ಬೆಂಕಿಗೆ ಆಹುತಿ


Team Udayavani, Mar 10, 2023, 2:40 AM IST

ಶಿಶಿಲ, ಶಿಬಾಜೆ: 4 ಸಾವಿರ ಹೆ. ಅರಣ್ಯ ಬೆಂಕಿಗೆ ಆಹುತಿ

ಬೆಳ್ತಂಗಡಿ: ಭಾರೀ ತಾಪಮಾನದ ನಡುವೆ ಶಿಶಿಲ, ಶಿಬಾಜೆ ಪರಿಸರದ ಸುಮಾರು 4,800 ಹೆಕ್ಟೇರ್‌ ಪ್ರದೇಶದ ಅರಣ್ಯ ಬೆಂಕಿಯ ಕೆನ್ನಾಲಗೆ ಸುಟ್ಟು ಭಸ್ಮವಾಗಿದೆ. ಒಂದು ವಾರದಿಂದ ನಿರಂತರವಾಗಿ ಉಪ್ಪಿನಂಗಡಿ ಅರಣ್ಯ ಇಲಾಖೆ ಸಿಬಂದಿ ಸಹಿತ ಸ್ಥಳೀಯ 50 ಮಂದಿಯ ತಂಡ ಬೆಂಕಿ ಶಮನದಲ್ಲಿ ನಿರತರಾಗಿದ್ದಾರೆ.

ಶಿಶಿಲ ಬಾಳೂರು ಕಡೆ ಬೆಂಕಿ
ಉಪ್ಪಿನಂಗಡಿ ಅರಣ್ಯ ಇಲಾಖೆಗೆ ಒಳಪಟ್ಟಂತೆ ಶಿಶಿಲದ ಮಿಯಾರು ಮೀಸಲು ಅರಣ್ಯ ಪ್ರದೇಶ, ಶಿಬಾಜೆಯ ಶಿರಾಡಿ ರಕ್ಷಿತಾರಣ್ಯದಿಂದ ಆರಂಭಗೊಂಡು ಚಿಕ್ಕಮಗಳೂರಿನ ಬಾಳೂರು ಪ್ರದೇಶದವರೆಗೆ ಹಬ್ಬಿರುವ ಬೆಂಕಿ ರಾತ್ರಿ ಹೊತ್ತು ಬೆಟ್ಟವನ್ನೇ ನುಂಗಿದಂತೆ ಗೋಚರಿಸುತ್ತಿದೆ. ಅಪಾರ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಬಗ್ಗೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವ ಅವಿನಾಶ್‌ ಭಿಡೆ ಮಾಹಿತಿ ನೀಡಿದ್ದಾರೆ.

ಶಿಶಿಲ ವ್ಯಾಪ್ತಿಯ ಅಮೇದಿಕಲ್ಲು, ಸಿಂಗಾಣಿ ಗುಡ್ಡೆ, ಉದಯ ಪರ್ವತಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ. ಹತ್ಯಡ್ಕ ಗ್ರಾಮದ ಪೆರಡೇಲು ಬಳಿ ಗುರುವಾರವೂ ಅರಣ್ಯದಲ್ಲಿ ದಟ್ಟ ಹೊಗೆ ಆವರಿಸಿತ್ತು. ಹೊಸದಾಗಿ ಎಲ್ಲೂ ಬೆಂಕಿ ಬೀಳದಿದ್ದರೂ ಈಗಾಗಲೇ ಬಿದ್ದ ಬೆಂಕಿ ಶಮನವಾಗುತ್ತಿಲ್ಲ. ಅರಣ್ಯದಲ್ಲಿ ಬೃಹದಾಕಾರದ ಮರಗಳು ಬಿದ್ದು ಒಣಗಿ ಹೋಗಿದ್ದು, ಅವುಗಳಿಗೆ ಹತ್ತಿದ ಬೆಂಕಿ ಮತ್ತಷ್ಟು ವ್ಯಾಪಿಸಲು ಕಾರಣವಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾರಗಳ ಹಿಂದೆ ಕುದುರೆಮುಖ ಅರಣ್ಯ ಪ್ರದೇಶವಾದ ಚಾರ್ಮಾಡಿಯ ಆಲೆಖಾನ್‌ ಹೊರಟ್ಟಿ ಪ್ರದೇಶ, ಚಿಕ್ಕಮಗಳೂರು ವಿಭಾಗದ ಘಾಟಿ ಪರಿಸರದ ಅಲ್ಲಲ್ಲಿ ಲಘು ಪ್ರಮಾಣದಲ್ಲಿ ಬೆಂಕಿ ಉರಿಯುತ್ತಲೇ ಇತ್ತು. ಈಗ ಬಹುತೇಕ ಸುಟ್ಟು ಶಮನದ ಹಂತದಲ್ಲಿದೆ. ಬೆಳ್ತಂಗಡಿ ತಾಲೂಕಿನ ದಿಡುಪೆಯ ಮಲ್ಲ ಪ್ರದೇಶದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿರುವ ಕುರಿತು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ನೆರಿಯ ಗ್ರಾಮದ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯದಲ್ಲಿ ಪಟ್ಲ, ಕಾಟಜೆ ಮೊದಲಾದ ಕಡೆ ಬೆಂಕಿ ಕಂಡುಬಂದಿತ್ತು. ನೆರಿಯ ಪರಿಸರದ ಬಾಂಜಾರು ಮಲೆ ಹಾಗೂ ಇನ್ನಿತರ ಕೆಲವು ಖಾಸಗಿ ಸ್ಥಳಗಳಲ್ಲೂ ಬೆಂಕಿ ಪ್ರಕರಣಗಳು ಉಂಟಾಗಿವೆ. ಉಜಿರೆಯ ನಿನ್ನಿಗಲ್ಲು ಪಾಲೆಂಜ ಎಂಬಲ್ಲಿ ಕಿಡಿಗೇಡಿಗಳು ರಸ್ತೆ ಬದಿ ಒಣಹುಲ್ಲಿಗೆ ಬೆಂಕಿ ಹಚ್ಚಿದ ಪರಿಣಾಮ ಪರಿಸರದಲ್ಲಿ ಬೆಂಕಿ ಆವರಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿತ್ತು.

ಆನೆ ಓಡಿಸಲು ಬೆಂಕಿ ಹಚ್ಚಿದರೇ?
ಶಿಶಿಲ, ಶಿಬಾಜೆ ಭಾಗದಲ್ಲಿ ವ್ಯಾಪಕವಾಗಿ ಸಲಗದ ಉಪಟಳ ನಿರಂತರವಾಗಿ ಕೃಷಿಕರನ್ನು ಹೈರಾಣಾಗಿಸಿದೆ. ಅರಣ್ಯ ಇಲಾಖೆಗೆ ದೂರು ನೀಡಿ ನೀಡಿ ಬಸವಳಿದಿದ್ದಾರೆ. ಬೆಳೆದ ಕೃಷಿ ಕೈಗೆ ಸಿಗದಿದ್ದಾಗ ಆವೇಶದಿಂದ ಆನೆ ಓಡಿಸಲು ಆರಣ್ಯದಲ್ಲಿ ಬೆಂಕಿ ಹಚ್ಚಿರಬಹುದೇ? ಈ ಬೆಂಕಿ ಈಗ ಸಾವಿವಾರು ಎಕರೆ ಅರಣ್ಯಪ್ರದೇಶವನ್ನೇ ಆಹುತಿ ಪಡೆಯಿತೇ ಎಂಬ ಬಗ್ಗೆಯೂ ಮಾತುಗಳು ಕೇಳಿ ಬರುತ್ತಿವೆ.

ಮಂಗಳವಾರ ಶಿಶಿಲ ಕಾರೆಗುಡ್ಡೆ, ಬುಧವಾರ ಶಿಬಾಜೆ ಗ್ರಾಮದ ಬಂಡಿಹೊಳೆಯಲ್ಲಿ ಅಪಾರ ಪ್ರಮಾಣದಲ್ಲಿ ಕಾಡು ಬೆಂಕಿಗಾಹುತಿಯಾಗಿದೆ. ಪಟ್ಟ ಜಾಗದ ಕಾಡುಗಳಿಗೆ ಹಾನಿಯಾಗಿದೆ. ಪೆರ್ಲ ಸಮೀಪ ಮೊಬೈಲ್‌ ಟವರ್‌ಗೆ ಬೆಂಕಿ ಆವರಿಸುತ್ತಿದುದನ್ನು ಸ್ಥಳೀಯರ ಸಹಕಾರದಿಂದ ನಂದಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಸ್ಥಳೀಯರಾದ ವಿಶ್ವನಾಥ  ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.