ಗೈರಾದ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌


Team Udayavani, Aug 23, 2018, 11:37 AM IST

23-agust-9.jpg

ಸುಳ್ಯ : ಬಾಳಿಲ ಗಾ.ಪಂ. ಪ್ರಥಮ ಹಂತದ ಗ್ರಾಮಸಭೆಯು ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗಿರಿಜನ ಆಶ್ರಮ ಶಾಲೆಯಲ್ಲಿ ನಡೆಯಿತು. ಇಲಾಖಾಧಿಕಾರಿಗಳು ಯಾರೆಲ್ಲ ಬಂದಿದ್ದಾರೆ ಎಂದು ಗ್ರಾಮಸ್ಥರಾದ ದಯಾನಂದ ಪಂಜಿಗಾರು, ಕೌಶಿಕ್‌ ಪ್ರಶ್ನಿಸಿದರು. ಇಲಾಖಾಧಿಕಾರಿಗಳು ಬಂದ ಬಳಿಕವೇ ಗ್ರಾಮಸಭೆ ಪ್ರಾರಂಭ ಮಾಡೋಣ ಎಂದು ಉಮೇಶ್‌ ರೈ ಮರುವಂಜ ಹೇಳಿದರು.

ಪಿಡಿಒ ಚಂದ್ರಾವತಿ ಮಾತನಾಡಿ, ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು. ನೋಡಲ್‌ ಅಧಿಕಾರಿ ಪಾಲಿಚಂದ್ರ ಮಾತನಾಡಿ, ಇಲಾಖೆಯಲ್ಲಿ ಸಿಬಂದಿ ಕೊರತೆ ಇದೆ. ಹಾಗಾಗಿ ಗೈರು ಆಗಿರಬಹುದು ಎಂದರು. ಅಧಿಕಾರಿಗಳು ಗೈರಾಗಿದ್ದಕ್ಕೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾ.ಪಂ. ಸದಸ್ಯ ರಾಧಾಕೃಷ್ಣ ರಾವ್‌, ಒಂದಿಬ್ಬರು ಇಲಾಖಾಧಿಕಾರಿಗಳು ಬರಲಿಲ್ಲ ಎಂದು ನಾವು ಗ್ರಾಮಸಭೆಯನ್ನು ಮುಂದೂಡುವುದು ಬೇಡ. ಸಮಸ್ಯೆ ಅಥವಾ ಮಾಹಿತಿ ಇದ್ದರೆ ಪಟ್ಟಿ ಮಾಡಿ, ಅವರಿಗೆ ತಿಳಿಸೋಣ. ಗ್ರಾಮಸಭೆಗೆ ಬಾರದ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ಕಳುಹಿಸೋಣ ಎಂದರು. ಅದೇ ರೀತಿ ನಿರ್ಣಯ ಕೈಗೊಳ್ಳಲಾಯಿತು.

ಶೇ. 90 ತೆರಿಗೆ ಸಂಗ್ರಹ
ಪಿ.ಜಿ.ಎಸ್‌.ಎನ್‌. ಪ್ರಸಾದ್‌ ಮಾತನಾಡಿ, ಕಟ್ಟಡ ತೆರಿಗೆ ಎಷ್ಟು ಬಾಕಿ ಇದೆ? ಎಷ್ಟು ವಸೂಲಿ ಆಗಿದೆ ಎನ್ನುವುದನ್ನು ವರದಿಯಲ್ಲಿ ತೋರಿಸಬೇಕಿತ್ತು ಎಂದರು. ಕಳೆದ ವರ್ಷ ಶೇ. 90ರಷ್ಟು ತೆರಿಗೆ ಸಂಗ್ರಹವಾಗಿದೆ. ಕಟ್ಟದೇ ಬಾಕಿ ಇರುವವರಿಗೆ ನೋಟಿಸ್‌ ನೀಡಲಾಗಿದೆ ಎಂದು ಪಿಡಿಒ ಹೇಳಿದರು. ಕೂಸಪ್ಪ ಗೌಡ ಮಾತನಾಡಿ, ಕಲ್ಮಡ್ಕ ರಸ್ತೆ ಬದಿಯ ಚರಂಡಿಯಲ್ಲಿ ಮಳೆ ನೀರು ಹೋಗದ ಸ್ಥಿತಿ ಇದೆ. ರಸ್ತೆ ಅವ್ಯವಸ್ಥೆಯಾಗಿದೆ. ಇದನ್ನು ಸರಿ ಮಾಡುವವರು ಯಾರು? ಇಲಾಖಾಧಿಕಾರಿಗಳು ಪರಿಶೀಲಿಸಿದರೆ ಗೊತ್ತಾಗುತ್ತದೆ ಎಂದರು. ಜಿ.ಪಂ. ಎಂಜಿನಿಯರ್‌ ಮಣಿಕಂಠನ್‌ ಮಾಹಿತಿ ನೀಡಿ, ರಸ್ತೆಯಿಂದ ಮನೆಗೆ ದಾರಿ ಬಳಸುವವರು ಮೋರಿ ಹಾಕಿ ಸಂಪರ್ಕ ತೆಗೆದುಕೊಳ್ಳಬೇಕು. ಆಗ ಚರಂಡಿ ಸರಿ ಆಗುತ್ತದೆ ಎಂದರು.

ಬೆಳೆ ವಿಮೆ ಮಾಹಿತಿ
ಸುಧಾಕರ ರೈ, ವಸಂತ ಕಾಯಾರ ಮಾತನಾಡಿ, ಬೆಳೆ ವಿಮೆಯ ಬಗ್ಗೆ ಇಲಾಖೆಯಿಂದ ಮಾಹಿತಿ ನೀಡಿಲ್ಲ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಉತ್ತರಿಸಿದ ಅಧಿಕಾರಿ, ಬೆಳೆ ವಿಮೆಯ ಬಗ್ಗೆ ನಾವು ಪಂಚಾಯತ್‌ಗೆ ಈ-ಮೇಲ್‌ ಮೂಲಕ ತಿಳಿಸಿದ್ದೇವೆ ಎಂದರು. ನೀವು ಪಂಚಾಯತ್‌ಗೆ ತಿಳಿಸಿದರೆ ರೈತರಿಗೆ ಹೇಗೆ ಗೊತ್ತಾಗುತ್ತದೆ? ರೈತರು ಎಲ್ಲರೂ ಪಂಚಾಯತ್‌ಗೆ ಬರುತ್ತಾರೆಯೇ? ರೈತರಿಗೆ ಇರುವ ಸವಲತ್ತುಗಳ ಬಗ್ಗೆ ನೀವು ಸರಿಯಾಗಿ ಮಾಹಿತಿ ನೀಡಿದರೆ ಮಾತ್ರ ಪ್ರಯೋಜನ ಸಿಗಲು ಸಾಧ್ಯ. ಸಹಕಾರಿ ಸಂಘಗಳಿಗೂ ತಿಳಿಸಬೇಕು ಎಂದು ಸುಧಾಕರ ರೈ ಹೇಳಿದರು. ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾಗಿ ಅಧಿಕಾರಿ ಉತ್ತರಿಸಿದಾದರೂ, ಇಲಾಖೆ ಸಹಕಾರಿ ಸಂಘಕ್ಕೆ ಯಾವುದೇ ಮಾಹಿತಿ ನೀಡಿಲ್ಲ. ಅವಧಿಗೆ ಮೊದಲ ದಿನ ಮಾಹಿತಿ ತಿಳಿದು, ಶೇ. 75ರಷ್ಟು ಜನರಿಗೆ ಸಹಕಾರಿ ಸಂಘದಲ್ಲಿ ವಿಮೆ ಮಾಡಿಸಿದ್ದೇವೆ. ಮೊದಲೇ ತಿಳಿದಿದ್ದರೆ ಎಲ್ಲರಿಗೂ ವಿಮೆ ಸೌಲಭ್ಯ ಸಿಗುತಿತ್ತು ಎಂದರು.

ತಾ.ಪಂ. ಸದಸ್ಯೆ ಜಾಹ್ನವಿ ಕಾಂಚೋಡು, ಗ್ರಾ.ಪಂ. ಸದಸ್ಯರಾದ ರವೀಂದ್ರ ರೈ ಟಪ್ಪಾಲುಕಟ್ಟೆ, ಶೀನಪ್ಪ ಮರುವಂಜ, ಜಯಕುಮಾರಿ ದೇವಸ್ಯ, ಸರಸ್ವತಿ ಪೊಸೋಡು, ರಮೇಶ್‌ ರೈ ಅಗಲ್ಪಾಡಿ, ಯಮುನಾ ಅಯ್ಯನಕಟ್ಟೆ ಉಪಸ್ಥಿತರಿದ್ದರು. ಸಿಬಂದಿ ಜಯಂತಿ ವರದಿ ಮಂಡಿಸಿದರು. ರವೀಂದ್ರ ರೈ ವಂದಿಸಿದರು.

ಮರ ಕಡಿಯಲು ಬಿಡೋಲ್ಲ
ಬೆಳ್ಳಾರೆ ಕಡೆಯಿಂದ ಗುತ್ತಿಗಾರು ಕಡೆಗೆ 33 ಕೆ.ವಿ. ವಿದ್ಯುತ್‌ ಲೈನ್‌ ಬಾಳಿಲದ ಮೂಲಕ ಹಾದು ಹೋಗುತ್ತದೆ. ಇದಕ್ಕೆ ರಸ್ತೆ ಬದಿಯಲ್ಲಿರುವ ಮರಗಳನ್ನು ಕಡಿಯುವ ಯೋಜನೆ ಇದೆ. ಆದರೆ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಲು ನಾವು ಬಿಡುವುದಿಲ್ಲ. ಬೆಳ್ಳಾರೆಯಲ್ಲಿ ಮಣ್ಣಿನ ಒಳಗೆ ಕೇಬಲ್‌ ಹಾಕಿ ವಿದ್ಯುತ್‌ ಲೈನ್‌ ಎಳೆದ ಹಾಗೆಯೇ ಮಾಡಿಕೊಂಡು ಹೋಗಲಿ ಎಂದು ವಸಂತ ಕಾಯಾರ, ಕೌಶಿಕ್‌ ಮತ್ತು ಸುಧಾಕರ ರೈ ಹೇಳಿದರು. ಇದನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಮೆಸ್ಕಾಂ ಅಧಿಕಾರಿ ಪ್ರತ್ಯುತ್ತರಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.