ಡಾ| ಶ್ರೀಧರ ಭಂಡಾರಿ ಯಕ್ಷದೇಗುಲ ಪ್ರಶಸ್ತಿ ಪ್ರದಾನ
Team Udayavani, Feb 20, 2023, 6:45 AM IST
ಪುತ್ತೂರು: ಯಕ್ಷಗಾನದ ಸಿಡಿಲಮರಿ, ಶತ ಧಿಗಿಣಗಳ ಸರದಾರ ಖ್ಯಾತಿಯ ಪುತ್ತೂರು ಡಾ| ಶ್ರೀಧರ ಭಂಡಾರಿ ಅವರ ಸಂಸ್ಮರಣೆ ಹಾಗೂ “ಡಾ| ಶ್ರೀಧರ ಭಂಡಾರಿ ಯಕ್ಷದೇಗುಲ ಪ್ರಶಸ್ತಿ’ ಪ್ರದಾನ ಸಮಾರಂಭವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರವಿವಾರ ನಡೆಯಿತು.
ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ಯಕ್ಷಗಾನ ರಂಗದಲ್ಲಿ ತನ್ನದೇ ಆದ ಶೈಲಿಯನ್ನು ತೋರಿಸಿಕೊಟ್ಟು ಕಲೆಯನ್ನು ಇನ್ನೊಂದು ಪೀಳಿಗೆಗೆ ವರ್ಗಾಯಿಸಿ ಅವರಲ್ಲಿ ಅಭಿರುಚಿ ಮೂಡಿಸಿದ ಮಹಾನ್ ಕಲಾವಿದ ಡಾ| ಶ್ರೀಧರ ಭಂಡಾರಿ ಎಂದು ಸ್ಮರಿಸಿದರು.
ವ್ಯಕ್ತಿಯ ಕಾಲಾನಂತರ ವರ್ಷ ದಿಂದ ವರ್ಷಕ್ಕೆ ನೆನಪು ಮಾಸುತ್ತದೆ. ಆದರೆ ಶ್ರೀಧರ ಭಂಡಾರಿ ಅವರ ನೆನಪು ವರ್ಷದಿಂದ ವರ್ಷಕ್ಕೆ ಹೆಚುತ್ತಿರುವುದು ಅವರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಸೇವೆಯ ಫಲ ಎಂದರು.
ಶಾಸಕ ಸಂಜೀವ ಮಠಂದೂರು ಮತ್ತು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಕಲಾವಿದನ ಬದುಕು ಸಮೃದ್ಧ ಬದುಕು ಎಂಬು ದನ್ನು ತೋರಿಸಿಕೊಟ್ಟಿರುವ ಶ್ರೀಧರ ಭಂಡಾರಿ ಅವರು ಹಳ್ಳಿಯ ಮೂಲೆ ಯಿಂದ ವಿಶ್ವಕ್ಕೆ ಯಕ್ಷಗಾನದ ಸೊಬ ಗನ್ನು ಪಸರಿಸಿದವರು ಎಂದರು.
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಜಕ್ಕೂರು ಯಕ್ಷ ಸಿಂಚನ ಕಲಾವೃಂದದ ಸಂಸ್ಥಾಪಕ ಚೇವಾರು ಚಿದಾನಂದ ಕಾಮತ್, ನ್ಯಾಯವಾದಿ ಮಹೇಶ್ ಕಜೆ, ಉಷಾ ಶ್ರೀಧರ ಭಂಡಾರಿ, ಉದ್ಯಮಿ ಸಚ್ಚಿದಾನಂದ ಶೆಟ್ಟಿ, ಶ್ರೀದೇವಿ ಪ್ರಕಾಶ್ ಭಂಡಾರಿ, ಕೋಕಿಲ ಜಯವರ್ಧನ, ಶಾಂತಲಾ ಸಚ್ಚಿದಾನಂದ ಶೆಟ್ಟಿ ಮೊದಲಾದವರಿದ್ದರು.
ಅನಿಲಾ ದೀಪಕ್ ಶೆಟ್ಟಿ ಪ್ರಸ್ತಾ ವನೆಗೈದರು. ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ನಿರೂಪಿಸಿ ವಂದಿ ಸಿದರು. ಹನುಮಗಿರಿಯ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ರಿಂದ “ಶ್ರೀದೇವಿ ಮಹಾತ್ಮೆ’ ಪ್ರದರ್ಶಿಸಲ್ಪಟ್ಟಿತು.
ಕುರಿಯ ಅವರಿಗೆ ಪ್ರಶಸ್ತಿ
ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರೀ ಅವರಿಗೆ ಡಾ| ಶ್ರೀಧರ ಭಂಡಾರಿ ಯಕ್ಷ ದೇಗುಲ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದು ಎಲ್ಲ ಯಕ್ಷಗಾನ ಕಲಾವಿದರಿಗೆ ಸಂದ ಗೌರವ ಎಂದು ಗಣಪತಿ ಶಾಸ್ತ್ರೀ ಕೃತಜ್ಞತೆ ಸಲ್ಲಿಸಿದರು.
ಯಕ್ಷರಕ್ಷ ನಿಧಿ ಸಮರ್ಪಣೆ
ವೇಣೂರು ಆಶಾ ವಾಮನ ಕುಮಾರ್ ಅವರಿಗೆ ಯಕ್ಷರಕ್ಷ ನಿಧಿಯನ್ನು ಸಮರ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್