ಪೊದೆ, ಮಣ್ಣು ತುಂಬಿ ಅಪಾಯಕ್ಕೆ ಆಹ್ವಾನ

ನಿರ್ವಹಣೆಯಿಲ್ಲದ ರಾಜ್ಯ, ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿ ಚರಂಡಿ

Team Udayavani, May 11, 2022, 9:44 AM IST

drainage

ಬೆಳ್ತಂಗಡಿ: ಕರಾವಳಿಯಲ್ಲಿ ಈ ಬಾರಿ ಆಗಾಗ ಮಳೆ ಸುರಿಯುತ್ತಿದೆ. ಸಣ್ಣಪುಟ್ಟ ಮಳೆಗೆ ಹೆದ್ದಾರಿ ಚರಂಡಿಗಳು ತುಂಬಿ ರಸ್ತೆಯಲ್ಲೇ ನೀರು ಹರಿಯುತ್ತಿದೆ. ಮಳೆಗಾಲ ಬೇಗನೆ ಆರಂಭವಾಗುವ ಲಕ್ಷಣ ಕಂಡು ಬರುತ್ತಿದೆ. ಮಳೆಗಾಲ ಕಾಲಿಡುವ ಮೊದಲು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯ ರಸ್ತೆಗಳ ಚರಂಡಿ ದುರಸ್ತಿ ಕಾಮಗಾರಿ ನಡೆಯಬೇಕಾದುದು ಅನಿವಾರ್ಯವಾಗಿದೆ.

ಅತೀ ಹೆಚ್ಚು ವಾಹನ ದಟ್ಟಣೆ ಇರುವ ಅಗಲ ಕಿರಿದಾದ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಚರಂಡಿಗಳಲ್ಲಿ ಮಳೆ ನೀರು ಹರಿಯಲು ಸಾಧ್ಯವಾಗದೆ ರಸ್ತೆಗಳಲ್ಲೆ ನೀರು ಹರಿಯುತ್ತಿದೆ. ಜತೆಗೆ ರಸ್ತೆ ಅಂಚಿನಲ್ಲಿ ಪೊದೆಗಳು ಬೆಳೆದಿವೆ. ಉಜಿರೆ ಸೇರಿದಂತೆ ಕೆಲವು ಪೇಟೆಗಳಲ್ಲಿ ಕೊಳಚೆ ನೀರು ಚರಂಡಿಯಲ್ಲೇ ಹರಿಯುವಂತಾಗಿದೆ. ಕಳೆದ ವರ್ಷವೂ ಈ ಭಾಗದಲ್ಲಿ ಸರಿಯಾದ ಚರಂಡಿ ನಿರ್ವಹಣೆಯಾಗದೆ ಸಂಚಾರ ಸಮಸ್ಯೆಗಳು ಎದುರಾಗಿದ್ದವು.

ವಾಹನ ಸವಾರರಿಗೆ ತೊಂದರೆ

ರಾಜ್ಯ ಹೆದ್ದಾರಿ ಗುರುವಾಯನಕೆರೆ- ಉಪ್ಪಿ ನಂಗಡಿ ರಸ್ತೆಯೂ ಇದೇ ಸ್ಥಿತಿಯಲ್ಲಿದೆ. ಬೆಳ್ತಂಗಡಿ ನಾರಾವಿ ರಸ್ತೆ ಬದಿಯ ಚರಂಡಿ ಅವ್ಯವಸ್ಥೆಯಿಂದ ಕೂಡಿದೆ. ಪ್ರಸಕ್ತ ಅಗಲೀಕರಣ ನಡೆಯುತ್ತಿದ್ದು, ಮುಂದಿನ ವರ್ಷ ಸುಸಜ್ಜಿತ ರಸ್ತೆ ನಿರೀಕ್ಷೆಯಿದೆ. ಕೊಕ್ಕಡ ಹೆದ್ದಾರಿ, ಗುರುವಾಯನಕೆರೆಯಿಂದ ಪೂಂಜಾಲಕಟ್ಟೆ ಸಾಗುವ ರಸ್ತೆ ಚರಂಡಿಗಳಲ್ಲೂ ಇದೇ ಸ್ಥಿತಿ. ಪ್ರಸಕ್ತ ಪೂಂಜಾಲಕಟ್ಟೆ-ಚಾರ್ಮಾಡಿ ದ್ವಿಪಥ ರಸ್ತೆಗೆ ಅನುದಾನ ಲಭಿಸಿದ್ದರೂ ಶಿಲಾನ್ಯಾಸ ನವೆಂಬರ್‌ನಲ್ಲಿ ಈಡೇರುವ ಸಾಧ್ಯತೆ ಇದೆ. ಅದಕ್ಕಿಂತ ಮುನ್ನ ಜೂನ್‌ ಅವಧಿಯಲ್ಲೆ ಮಳೆ ಆರಂಭವಾಗುವುದರಿಂದ ಸವಾರರಿಗೆ ಗಂಡಾಂತರ ಎದುರಾಗಲಿದೆ.

ಕೆಲವೆಡೆ ಚರಂಡಿಯೇ ಇಲ್ಲ

ರಾಷ್ಟ್ರೀಯ ಹೆದ್ದಾರಿಯ ಹಲವು ಅಗತ್ಯ ಸ್ಥಳಗಳಲ್ಲಿ ಚರಂಡಿಗಳನ್ನೆ ನಿರ್ಮಿಸಲಾಗಿಲ್ಲ. ಇನ್ನು ಕೆಲವೆಡೆ ರಸ್ತೆಯ ಒಂದು ಭಾಗದಲ್ಲಿ ಮಾತ್ರ ಚರಂಡಿ ಇದೆ ಇದರಿಂದ ಮಳೆನೀರು ರಸ್ತೆಯ ಮೂಲಕವೇ ಹರಿದು ಹೋಗುತ್ತಿದೆ. ಚರಂಡಿ ಇಲ್ಲದ ಕಾರಣ ರಸ್ತೆಬದಿ ನಿಲ್ಲುವ ನೀರು ಪಾದಚಾರಿ ಹಾಗೂ ವಾಹನ ಸವಾರರಿಗೆ ಕೆಸರಿನ ಸಿಂಚನವನ್ನು ಉಂಟು ಮಾಡುತ್ತಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಸಂಪರ್ಕ ರಸ್ತೆಯನ್ನು ನಿರ್ಮಿಸುವ ಭರದಲ್ಲಿ ಚರಂಡಿಗಳನ್ನು ಸಂಪೂರ್ಣ ಮುಚ್ಚಲಾಗಿದೆ. ಚರಂಡಿಗಳಿಗೆ ಹಾಕಿರುವ ಮೋರಿಗಳಲ್ಲಿ ಹೂಳು ತುಂಬಿ ನೀರು ಹರಿಯಲು ಜಾಗ ವಿಲ್ಲದಾಗಿದೆ. ಹೆದ್ದಾರಿ ವ್ಯಾಪ್ತಿಯ ಮುಖ್ಯಪೇಟೆಯಲ್ಲಿ ಚರಂಡಿಗಳೇ ಮಾಯವಾಗಿವೆ.

ನಿರ್ವಹಣೆ ಅಗತ್ಯ

ಸಮಸ್ಯೆ ನೀಡುವ ಚರಂಡಿಗಳ ದುರಸ್ತಿಯನ್ನು ಮಳೆಗಾಲ ಆರಂಭವಾಗುವುದರೊಳಗೆ ನಿರ್ವಹಿಸಿದರೆ ಪ್ರಯೋಜನವಾದೀತು. ಮಳೆ ನೀರು ಸರಿಯಾಗಿ ಹರಿಯದಿದ್ದರೆ ರಸ್ತೆ ಹೊಂಡಗಳು ನಿರ್ಮಾಣವಾಗಿ ಸಮಸ್ಯೆ ಉಂಟಾಗುವುದು ಖಚಿತ.

ಉಜಿರೆ ಪೇಟೆಯ ವ್ಯಥೆ

ಉಜಿರೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗಳು ಸರಿಯಾಗಿ ದುರಸ್ತಿಯಾಗದ ಕಾರಣ ಕಳೆದ ಮಳೆಗಾಲದಲ್ಲಿ ಹಲವಾರು ಸಂಕಟಗಳು ಉಂಟಾಗಿದ್ದವು. ಸ್ಥಿತಿ ಇದೇ ರೀತಿ ಉಳಿದರೆ ಈ ಬಾರಿಯೂ ಅಪಾಯ ತಪ್ಪಿದ್ದಲ್ಲ.

 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.