ಪುತ್ತೂರು, ಸುಳ್ಯ, ಕಡಬ: 72ನೇ ಗಣರಾಜ್ಯೋತ್ಸವ ಆಚರಣೆ


Team Udayavani, Jan 27, 2021, 3:50 AM IST

ಪುತ್ತೂರು, ಸುಳ್ಯ, ಕಡಬ: 72ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು: ಭಾರತದ ಸಂವಿ ಧಾನವು ಹಲವು ದೇಶಗಳ ಸಂವಿಧಾನಗಳ ಅಧ್ಯಯನದ ಬಳಿಕ ಸಿದ್ಧಗೊಂಡ ಕಾರಣ ದಿಂದ ಪರಮಶ್ರೇಷ್ಠವಾಗಿ ಗುರುತಿಸಿ ಕೊಂಡಿದೆ. ಜನರಿಂದಲೇ ಆಯ್ಕೆಯಾದ ಸರಕಾರ ನಮ್ಮನ್ನು ಆಳುತ್ತಿದ್ದು, ಸಂವಿಧಾನ ನೀಡಿದ ಎಲ್ಲ ಸವಲತ್ತು ಹಾಗೂ ಜವಾಬ್ದಾರಿಗಳನ್ನು ನಾವು ನೆನಪು ಮಾಡ ಬೇಕಾದುದು ಅಗತ್ಯ ಎಂದು ಪುತ್ತೂರು ಸಹಾಯಕ ಕಮಿಷನರ್‌ ಡಾ| ಯತೀಶ್‌ ಉಳ್ಳಾಲ್‌ ಹೇಳಿದರು.

ಅವರು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಬಳಿಕ ಸಂದೇಶ ನೀಡಿದರು. ನಾವು ಶಾಂತಿಯುತವಾಗಿ ಬದುಕಬೇಕಾದರೆ ಸೈನಿಕರನ್ನು ನೆನಪಿ ಸಬೇಕು. ಜತೆಗೆ ಕೋವಿಡ್‌ ವಾರಿಯರ್ ಸೇವೆಯೂ ಅತ್ಯಮೂಲ್ಯವಾಗಿತ್ತು ಎಂದರು. ಪೊಲೀಸ್‌ ಇಲಾಖೆ, ಅಗ್ನಿಶಾಮಕ ದಳ ಮತ್ತು ಗೃಹರಕ್ಷಕ ದಳದಿಂದ ಪಥ ಸಂಚಲನ ನಡೆಯಿತು. ಬಳಿಕ ಪುರಭವನದಲ್ಲಿ ಸರಳ ಸಭಾ ಕಾರ್ಯಕ್ರಮ ನಡೆಯಿತು.

ಪುತ್ತೂರು ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ನಗರಸಭೆ ಅಧ್ಯಕ್ಷ ಜೀವಂಧರ ಜೈನ್‌, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್‌ ಶೆಣೈ, ಪುತ್ತೂರು ಡಿವೈಎಸ್‌ಪಿ ಡಾ| ಗಾನಾ ಪಿ. ಮಾತ ನಾಡಿದರು. ಕೊರೊನಾ ವಾರಿಯರ್ಸ್‌ ಆಗಿ ಕೆಲಸ ಮಾಡಿದ ಒಟ್ಟು ಏಳು ಇಲಾಖೆ/ ವಿಭಾಗಗಳ ಆಯ್ದ 35 ಸಿಬಂದಿಯನ್ನು ಗೌರವಿಸಲಾಯಿತು.

ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ಕುಮಾರ್‌ ರೈ, ಇಲಾಖೆ ಸಿಬಂದಿ ಗೀತಾ, ಪದ್ಮನಾಭ, ಗಾಯತ್ರಿ ಮತ್ತು ಚಂದ್ರಾವತಿ, ಕಂದಾಯ ಇಲಾಖೆಯ ವಿಜಯ ವಿಕ್ರಮ, ಮಹೇಶ್‌ ಎಸ್‌., ಕಾಶಪ್ಪ ನ್ಯಾಮೇಗೌಡ, ಚೈತ್ರಾ ಡಿ.ನಾಯಕ್‌, ಉಮೇಶ್‌ ನಾಯಕ್‌, ಪುತ್ತೂರು ನಗರಸಭೆ ಸಿಬಂದಿ ರಾಧಾಕೃಷ್ಣ, ಅಮಿತ್‌, ಜಯಂತ್‌, ಪುರುಷೋತ್ತಮ ಮತ್ತು ಲೋಕೇಶ್‌, ತಾ.ಪಂ. ವ್ಯಾಪ್ತಿಯ ರವಿಚಂದ್ರ ಯು., ಶರೀಫ್‌, ಪದ್ಮಕುಮಾರಿ, ಹೊನ್ನಪ್ಪ ಮತ್ತು ಇಸಾಕ್‌, ಶಿಕ್ಷಣ ಇಲಾಖೆಯಿಂದ ಶಿವಪ್ಪ ರಾಥೋಡ್‌, ತಾರಾನಾಥ ಪಿ., ರಾಕೇಶ್‌ ಡಿ., ಸ್ಮಿತಾ ಕೆ.ಎನ್‌., ಚಕ್ರಪಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸುಮಿತ್ರಾ, ಪ್ರಮೀಳಾ, ಅರುಣಾ, ಜಾನಕಿ ಮತ್ತು ರೇವತಿ, ಪೊಲೀಸ್‌ ಇಲಾಖೆಯಿಂದ ಕೃಷ್ಣಪ್ಪ ಎಂ., ದಿನೇಶ್‌, ಯೋಗೀಂದ್ರ, ನಾರಾಯಣ್‌, ಸುರೇಶ್‌ ಶರ್ಮಾ ಅವರನ್ನು ಸಮ್ಮಾನಿಸಲಾಯಿತು.

ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್‌ ಕುಮಾರ್‌ ಭಂಡಾರಿ ಉಪಸ್ಥಿತ ರಿದ್ದರು. ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ವಂದಿಸಿದರು.

ಸರ್ವ ಧರ್ಮಗಳ ಪವಿತ್ರ ಗ್ರಂಥ: ಮಠಂದೂರು :

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ|ಅಂಬೇಡ್ಕರ್‌ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ಸಂವಿಧಾನ ಇವತ್ತಿಗೂ ಭಾರತದ ಸರ್ವ ಧರ್ಮಗಳ ಪಾಲಿಗೆ ಪವಿತ್ರ ಧರ್ಮಗ್ರಂಥವಿದ್ದಂತೆ ಎಲ್ಲರಿಗೂ ನ್ಯಾಯ ಕೊಡಲು ಇದು ಸಮರ್ಥವಾಗಿದೆ ಎಂದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.