ಬಳಂಜ: ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ ಕಾರ್ಯಾಣ ನಿಧನ
Team Udayavani, Oct 28, 2022, 10:20 AM IST
ಪಡಂಗಡಿ: ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ, ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿರುವ ಊರಿನ ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ ಕಾರ್ಯಾಣ ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.28) ಬೆಳಗ್ಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಹಲವಾರು ವರ್ಷಗಳಿಂದ ಭಜನೆ,ಸಂಗೀತ,ಭಕ್ತಿ ರಸಮಂಜರಿ ಮುಖೇನಾ ಹಲವಾರು ವೇದಿಕೆಗಳಲ್ಲಿ ಹಾಡಿ ಜನರನ್ನು ರಂಜಿಸಿ, ಗುರುತಿಸಿಕೊಂಡಿದ್ದರು.
ಮೃದು, ಸಾಧು ಸ್ವಭಾವದ ವ್ಯಕ್ತಿತ್ವ ಹೊಂದಿದ್ದ ಇವರು ಊರಿನಲ್ಲಿಎಲ್ಲರೊಂದಿಗೂ ಆತ್ಮೀಯರಾಗಿದ್ದರು.
ಸ್ವಾತಿ ಮ್ಯೂಸಿಕಲ್ ಬೆಳ್ತಂಗಡಿ ಇದರ ಸಂಚಾಲಕರಾಗಿ, ನಮ ಮಾತೆರ್ಲ ಒಂಜೇ ಕಲಾತಂಡದ ಆಧಾರ ಸ್ತಂಭವಾಗಿ, ಆನೇಕ ಕಲಾವಿದರಿಗೆ ಬೆಳಕಾಗಿ ಕಲಾವಿದರನ್ನು ಬೆಳೆಸಿ ಕಲೆಗಾಗಿಯೆ ತನ್ನ ಜೀವನವನ್ನು ಸವೆಸಿದ್ದರು.
ಮೃತರು ಪತ್ನಿ ಶರ್ಮೀಳಾ ಶೆಟ್ಟಿ, ಪುತ್ರ ಜೀವನ್ ಶೆಟ್ಟಿ, ಪುತ್ರಿ ಜೀವಿತಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಇದನ್ನೂ ಓದಿ : ಕಾಪು : ಟಯರ್ ಸ್ಫೋಟಗೊಂಡು ಮರದ ದಿಮ್ಮಿ ಸಾಗಾಟದ ಲಾರಿಗೆ ಬೆಂಕಿ, ತಪ್ಪಿದ ಭಾರೀ ಅವಘಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ