ನದಿಗೆಸೆದ ಪೂಜಾ ಸಾಮಗ್ರಿಯನ್ನು ಕಾದು ಕುಳಿತ ಸರ್ಪ!
Team Udayavani, Oct 18, 2022, 3:14 PM IST
ಗುತ್ತಿಗಾರು: ನದಿಯಲ್ಲಿ ಎಸೆದಿದ್ದ ಪೂಜಾ ಸಾಮಗ್ರಿಯ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಕಾದು ಕುಳಿತ ಪ್ರಸಂಗ ನಾಲ್ಕೂರು ಗ್ರಾಮದ ಇಜಿನಡ್ಕದಲ್ಲಿ ನಡೆದಿದೆ.
ಇದನ್ನು ಗಮನಿಸಿದ ಸ್ಥಳೀಯರು ಪೂಜಾ ಸಾಮಗ್ರಿಯನ್ನು ಎತ್ತಿ ಕೊಂಡೊಯ್ದ ಬಳಿಕ ಕಾಳಿಂಗ ಸರ್ಪವೂ ಅಲ್ಲಿಂದ ತೆರಳಿದೆ ಎನ್ನಲಾಗಿದೆ.
ಕಾಲುದೀಪ, ಆರತಿ, ಘಂಟೆ, ಹರಿವಾಣ ಸಹಿತ ಹಳೆಯ ಪೂಜಾ ಸಾಮಗ್ರಿಗಳನ್ನು ಇಜಿನಡ್ಕ ಎಂಬಲ್ಲಿ ನದಿಯಲ್ಲಿ ಎಸೆದಿರುವುದನ್ನು ಅದೇ ದಾರಿಯಲ್ಲಿ ಬಂದವರು ನೋಡಿದ್ದರು. ಈ ವೇಳೆ ಪೂಜಾ ಸಾಮಗ್ರಿ ಇದ್ದ ಜಾಗದ ಸನಿಹದಲ್ಲೇ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನೂ ಅವರು ಗಮನಿಸಿದ್ದಾರೆ. ಅವರು ಇತರರಿಗೆ ಮಾಹಿತಿ ನೀಡಿದ್ದು, ಇದನ್ನು ವೀಕ್ಷಿಸಲು ಹಲವಾರು ಜನರು ಸ್ಥಳಕ್ಕಾಗಮಿಸಿದ್ದರು. ಈ ಪೂಜಾ ಸಾಮಗ್ರಿಯನ್ನು ಯಾರು ಎಸೆದಿದ್ದರು ಎಂಬುದು ತಿಳಿದು ಬಂದಿರಲಿಲ್ಲ. ಹೀಗಾಗಿ ಪಕ್ಕದಲ್ಲೇ ಇರುವ ಚಾರ್ಮತ ನಾಗನ ಸನ್ನಿಧಿಯಲ್ಲಿ ಸ್ಥಳೀಯರು ಸೇರಿ ಪ್ರಾರ್ಥನೆ ನೆರವೇರಿಸಿ ಪೂಜಾ ಸಾಮಗ್ರಿ ಎಸೆದವರ ಕುರಿತು ಗೊತ್ತಾಗಬೇಕು ಎಂದು ದೇವರ ಮೊರೆ ಹೋದರು.
ಈ ವಿಚಾರ ತಿಳಿದ ರಾಮಣ್ಣ ಎಂಬವರು ಸ್ಥಳಕ್ಕಾಗಮಿಸಿ ಪೂಜಾ ಪರಿಕರಗಳನ್ನು ತಾನೇ ನದಿಗೆ ಎಸೆದಿರುವುದಾಗಿ ಹೇಳಿಕೊಂಡರು ಅದಕ್ಕೆ ಕಾರಣವನ್ನೂ ಕೊಟ್ಟರು. ಬಳಿಕ ಜನರು ನದಿಯಿಂದ ಎತ್ತಿ ದಡಕ್ಕೆ ತಂದಿದ್ದ ಪೂಜಾ ಸಾಮಗ್ರಿಗಳನ್ನು ರಾಮಣ್ಣ ಅವರು ಮರಳಿ ಮನೆಗೆ ಕೊಂಡೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು