ವಿಶೇಷ ವರದಿ: ಬಂಟ್ವಾಳದಲ್ಲಿ ಅನುಷ್ಠಾನಗೊಳ್ಳುತ್ತಿದೆ ಮೆಸ್ಕಾಂನ ಜಿಐ ಸಬ್‌ಸ್ಟೇಶನ್‌!

ಇಡೀ ನಗರಕ್ಕೆ ವಿದ್ಯುತ್‌ ಪೂರೈಕೆ; ಕೇವಲ 16 ಸೆಂಟ್ಸ್‌ ಜಾಗದಲ್ಲಿ ಅನುಷ್ಠಾನ

Team Udayavani, Jul 18, 2020, 11:59 AM IST

ವಿಶೇಷ ವರದಿ: ಬಂಟ್ವಾಳದಲ್ಲಿ ಅನುಷ್ಠಾನಗೊಳ್ಳುತ್ತಿದೆ ಮೆಸ್ಕಾಂನ ಜಿಐ ಸಬ್‌ಸ್ಟೇಶನ್‌!

ಬಂಟ್ವಾಳದಲ್ಲಿ ಜಿಐ ಸಬ್‌ಸ್ಟೇಷನ್‌ನ ಕಾಮಗಾರಿ ನಡೆಯುತ್ತಿದೆ.

ಬಂಟ್ವಾಳ: ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ತಲಾ ಎರಡೆರಡು ಜಿಐ(ಗ್ಯಾಸ್‌ ಇನ್ಸುಲೇಟೆಡ್‌) ಸಬ್‌ಸ್ಟೇಶನ್‌ಗಳ ಅನುಷ್ಠಾನಕ್ಕೆ ಮೆಸ್ಕಾಂ ಮುಂದಾಗಿದ್ದು, ದ.ಕ. ಜಿಲ್ಲೆಯ ಒಂದು ಜಿಐ ಸಬ್‌ಸ್ಟೇಶನ್‌ ಬಂಟ್ವಾಳದಲ್ಲಿ ಅನುಷ್ಠಾನಗೊಳುತ್ತಿದೆ. ಜಪಾನ್‌ ತಂತ್ರಜ್ಞಾನದ ಈ ಸಬ್‌ಸ್ಟೇಶನ್‌ಗಳು ಅತ್ಯಂತ ಕಡಿಮೆ ಸ್ಥಳವಕಾಶ, ಹೆಚ್ಚು ಗುಣಮಟ್ಟದಿಂದ ಕೂಡಿರುತ್ತದೆ.

ಕೇಂದ್ರ ಸರಕಾರದ ಸಮಗ್ರ ವಿದ್ಯುತ್‌ ಅಭಿವೃದ್ಧಿ ಯೋಜನೆ (ಐಪಿಡಿಎಸ್‌)ಯಡಿಜಿಐ ಸಬ್‌ಸ್ಟೇಶನ್‌ಗಳು ಅನುಷ್ಠಾನ ಗೊಳ್ಳುತ್ತಿದ್ದು, ಈ ಯೋಜನೆಯಲ್ಲಿ ಮಂಗಳೂರಿನ ಉರ್ವ, ಬಂಟ್ವಾಳ, ಉಡುಪಿ, ಸಾಲಿಗ್ರಾಮಗಳಲ್ಲಿ ಒಟ್ಟು 39 ಕೋ.ರೂ. ವೆಚ್ಚದಲ್ಲಿ ಇದು ಅನುಷ್ಠಾನವಾಗುತ್ತದೆ.

ಕಾಮಗಾರಿ ಈಗಾಗಲೇ ಪ್ರಾರಂಭ
ಬಂಟ್ವಾಳ ಪುರಸಭಾ ವ್ಯಾಪ್ತಿಯ ನಿತ್ಯಾನಂದ ನಗರ ಅರ್ಬಿಗುಡ್ಡೆ ಪ್ರದೇಶ (ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಸಮೀಪ)ದಲ್ಲಿ ಈ ಜಿಐ ಸಬ್‌ಸ್ಟೇಶನ್‌ನ
ಕಾಮಗಾರಿ ಈಗಾಗಲೇ ಪ್ರಾರಂಭ ಗೊಂಡಿದೆ. ಸಾಮಾನ್ಯವಾಗಿ ಇಂತಹ ಸಬ್‌ಸ್ಟೇಶನ್‌ ಅನುಷ್ಠಾನಗೊಳ್ಳಬೇಕಾದರೆ ಸುಮಾರು 50 ಸೆಂಟ್ಸ್‌ ಜಾಗಬೇಕಿದ್ದು, ಪ್ರಸ್ತುತ ಇದು ಕೇವಲ 16 ಸೆಂಟ್ಸ್‌ ಪ್ರದೇಶದಲ್ಲಿ ಅನುಷ್ಠಾನವಾಗುತ್ತಿದೆ.

ತಲಾ 8 ಎಂವಿಎ ಸಾಮರ್ಥ್ಯದ ಎರಡು ಅತ್ಯಾಧುನಿಕ ಟ್ರಾನ್ಸ್‌ಫಾರ್ಮರ್‌ಗಳನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಬಂಟ್ವಾಳ ನಗರ ಪ್ರದೇಶಕ್ಕೆ ಪ್ರಸ್ತುತ ತಲಪಾಡಿ ಸಬ್‌ಸ್ಟೇಷನ್‌ನಿಂದ ವಿದ್ಯುತ್‌ ಪೂರೈಕೆಯಾಗುತ್ತಿದ್ದು, ಇದರ ಕಾಮಗಾರಿ ಪೂರ್ಣಗೊಂಡರೆ ಇಡೀ ನಗರಕ್ಕೆ ಇದೇ ಸಬ್‌ಸ್ಟೇಶನ್‌ನಿಂದ ವಿದ್ಯುತ್‌ ಪೂರೈಕೆಯಾಗಲಿದೆ. ಲೈನ್‌ ಫಾಲ್ಟ್ ಸಹಿತ ಎಲ್ಲ ರೀತಿಯ ತಾಂತ್ರಿಕ ತೊಂದರೆಗಳು ಕಂಡುಬಾರದೇ ಇರುವುದು ಜಿಐ ಸಬ್‌ಸ್ಟೇಶನ್‌ನ ವಿಶೇಷ.
ಜಪಾನ್‌ ತಂತ್ರಜ್ಞಾನದ ಜಿಐ ಪ್ರಥಮ ಬಾರಿಗೆ ಜಪಾನ್‌ನಲ್ಲಿ ಗ್ಯಾಸ್‌ ಇನ್ಸುಲೇಟೆಡ್‌(ಜಿಐ) ವಿಧಾನ ಅಭಿವೃದ್ಧಿ ಪಡಿಸಲಾಗಿದ್ದು, ಹೈ ವೋಲ್ಟೆಜ್‌ ವಿದ್ಯುತ್‌ ಪ್ರಸರಣಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಕಿರಿದಾಗಿಸಿ, ಸಲ್ಪರ್‌ ಹೆಕ್ಸಾಫ್ಲೋರಿಡ್‌ ಗ್ಯಾಸ್‌ ಕವಚದಲ್ಲಿ ಮುಚ್ಚಿಡುವ ವಿಧಾನ ಇದಾಗಿದೆ. ಬ್ರೇಕರ್‌, ಟ್ರಾನ್ಸ್‌ಫಾರ್ಮರ್‌ ಯಾರ್ಡ್‌ ಸಣ್ಣ ಕಂಟ್ರೋಲ್‌ ರೂಂನಿಂದ ಇದನ್ನು ನಿಯಂತ್ರಿಸಬಹುದು.

ವಿದ್ಯುತ್‌ ಸಬ್‌ಸ್ಟೇಶನ್‌ಗಳಲ್ಲಿ ಸಾಮಾನ್ಯ
ವಾಗಿ ಏರ್‌ ಇನ್ಸುಲೇಟೆಡ್‌ ವಿಧಾನ ಅಳವಡಿಸಲಾಗುತ್ತಿದ್ದು, ಹೈ ವೋಲ್ಟೆಜ್‌ ವಿದ್ಯುತ್‌ ಪ್ರಸರಣವಾಗುವ ಕಾರಣ ವಿದ್ಯುತ್‌ ತಂತಿಗಳ ಮಧ್ಯೆ ಸಾಕಷ್ಟು ಅಂತರ ಅಗತ್ಯವಾಗಿದೆ. ಹೀಗಾಗಿ ಸಬ್‌ಸ್ಟೇಶನ್‌ಗಳಿಗೆ ಸುಮಾರು ಅರ್ಧ ಎಕರೆಯಷ್ಟು ಜಾಗ ಬೇಕಾಗುತ್ತದೆ. 110 ಕೆವಿಗೆ 3ರಿಂದ 4 ಎಕರೆ ಪ್ರದೇಶ ಬೇಕಾಗುತ್ತದೆ. ಹೀಗಾಗಿ ಕಡಿಮೆ ಸ್ಥಳಾವಕಾಶ, ಗುಣಮಟ್ಟಕ್ಕಾಗಿ ಕೊಂಚ ದುಬಾರಿಯಾದರೂ ಜಿಐ ಸಬ್‌ಸ್ಟೇಷನ್‌ ಅನುಷ್ಠಾನಕ್ಕೆ ನಿರ್ಧ ರಿಸಲಾಗಿದೆ.

ಕಡಿಮೆ ಸ್ಥಳದಲ್ಲಿ ಅನುಷ್ಠಾನ
ಬಂಟ್ವಾಳ ನಗರ ಪ್ರದೇಶಕ್ಕೆ ವಿದ್ಯುತ್‌ ಪೂರೈಕೆಯ ದೃಷ್ಟಿಯಿಂದ ಬಂಟ್ವಾಳದಲ್ಲಿ ಜಿಐ ಸಬ್‌ಸ್ಟೇಶನ್‌ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ಕಡಿಮೆ ಸ್ಥಳವಕಾಶಬೇಕಿದ್ದು, ಪ್ರಸ್ತುತ ಇದು 16 ಸೆಂಟ್ಸ್‌ ಪ್ರದೇಶದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಜಿಐ ತಂತ್ರಜ್ಞಾನದಲ್ಲಿ ಲೈನ್‌ ಫಾಲ್ಟ್ ಸೇರಿದಂತೆ ಹೆಚ್ಚಿನ ತಾಂತ್ರಿಕ ತೊಂದರೆಗಳಿರುವುದಿಲ್ಲ.
– ರಾಮಚಂದ್ರ ಎಂ.  ಕಾರ್ಯನಿರ್ವಾಹಕ ಎಂಜಿನಿಯರ್‌ ಮೆಸ್ಕಾಂ ಬಂಟ್ವಾಳ ವಿಭಾಗ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.