ಕ್ಯಾನ್ಸರ್ ಪೀಡಿತರಿಗೆ ಕೇಶದಾನ: 11ರ ಪೋರನ ಮಾದರಿ ಕಾರ್ಯ
Team Udayavani, Jun 1, 2023, 7:45 AM IST
ಸುಳ್ಯ: ಹನ್ನೊಂದು ವರ್ಷದ ಬಾಲಕನೊಬ್ಬ ಮೂರು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿ ಯಾಗಿದ್ದಾನೆ.
ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದ ಮಣಿಯೂರಿನ ನವೀನ್ ರಾವ್-ಸಿಂಧ್ಯಾ ಹಾಗೂ ಭವಾನಿ ದಂಪತಿಯ 11 ವರ್ಷ ಪ್ರಾಯದ ಪುತ್ರ ರತೀಶ್ ಸಿ. ಕೇಶದಾನ ಮಾಡಿರುವ ಬಾಲಕ. ಈತ ಮುಳ್ಳೇರಿಯಾದ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ಕಲಿಯುತ್ತಿದ್ದಾಗಲೇ ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಬೇಕೆನ್ನುವ ಸಂಕಲ್ಪ ಕೈಗೊಂಡಿದ್ದನು. ಆಗ ಈತನಿಗೆ 8 ವರ್ಷ ಪ್ರಾಯವಿತ್ತು. ಹೆತ್ತವರು ಮಗನ ಇಚ್ಛೆಗೆ ಒಪ್ಪಿಗೆ ಕೊಟ್ಟಿದ್ದರು.
ಮೂರು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಆತ ಇದೀಗ ಕತ್ತರಿಸಿ ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ ಉದಯಭಾಸ್ಕರ್ ಅವರ ಮೂಲಕ ಕ್ಯಾನ್ಸರ್ ಪೀಡಿತರಿಗೆ ಹಸ್ತಾಂತರಿಸಿದ್ದಾನೆ.
ರತೀಶ್ ಪ್ರಸ್ತುತ ಈಶ್ವರಮಂಗಲದ ಶ್ರೀ ಗಜಾನನ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು