Stock Investment: ಬಿ.ಸಿ. ರೋಡಿನ ವ್ಯಕ್ತಿಗೆ 18.92 ಲಕ್ಷ ರೂ. ವಂಚನೆ
Team Udayavani, Feb 2, 2024, 11:07 PM IST
ಬಂಟ್ವಾಳ: ಷೇರು ಮೂಲಕ ಹಣ ಹೂಡಿಕೆ ಮಾಡಿ ಲಾಭ ಪಡೆಯುವಂತೆ ಬಿ.ಸಿ.ರೋಡಿನ ವ್ಯಕ್ತಿಯೋರ್ವರಿಗೆ ಬಂದ ವಾಟ್ಸ್ ಆ್ಯಪ್ ಸಂದೇಶವನ್ನು ಆಧರಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಿ ಅವರು ಒಟ್ಟು 18.92 ಲಕ್ಷ ರೂ. ಕಳೆದುಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬಿ.ಸಿ.ರೋಡು ನಿವಾಸಿ ಸುಬ್ರಾಯ ರಾಮ ಮಡಿವಾಳ ಹಣ ಕಳೆದುಕೊಂಡವರು. ಅವರ ಮೊಬೈಲ್ಗೆ 2023ರ ನವೆಂಬರ್ನಲ್ಲಿ ಷೇರು ಟ್ರೇಡಿಂಗ್ಗಾಗಿ ಹೂಡಿಕೆ ಮಾಡಿ ಲಾಭ ಪಡೆಯುವಂತೆ ವಾಟ್ಸ್ಆ್ಯಪ್ ಸಂದೇಶ ಬಂದಿತ್ತು. ಅದರ ಆಧಾರದಲ್ಲಿ ಅವರು ಅಪರಿಚಿತ ಆರೋಪಿಗಳು ನೀಡಿದ ಸೂಚನೆಯಂತೆ ಜ. 9ರ ವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 18,92,200 ರೂ.ಗಳನ್ನು ಪಾವತಿಸಿದ್ದರು.
ಆದರೆ ಆರೋಪಿಗಳು ಅವರಿಗೆ ಯಾವುದೇ ಲಾಭಾಂಶ ಹಾಗೂ ಪಾವತಿಸಿದ ಹಣವನ್ನೂ ನೀಡದೇ ವಂಚಿಸಿದ್ದಾರೆ.
ಸಂತ್ರಸ್ತ ವ್ಯಕ್ತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ