ಸುಬ್ರಹ್ಮಣ್ಯ: ನೆಟ್ಟಣದಲ್ಲಿ ಮರ ಬಿದ್ದು ಕಾರುಗಳು ಜಖಂ
Team Udayavani, May 30, 2023, 6:45 AM IST
ಸುಬ್ರಹ್ಮಣ್ಯ: ಸೋಮವಾರ ರಾತ್ರಿಯ ಗುಡುಗು ಸಹಿತ ಗಾಳಿ ಮಳೆಗೆ ಕಡಬ ತಾಲೂಕಿನ ನೆಟ್ಟಣ ಸಮೀಪ ಹೆದ್ದಾರಿ ಬದಿಯ ಮರಗಳು ಉರುಳಿ ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಸಂಭವಿಸಿದೆ.
ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಆಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ ಎಂದು ತಿಳಿದುಬಂದಿದೆ. ಮರ ಕಾರಿನ ಮೇಲ್ಛಾವಣಿಗೆ ಬಿದ್ದು ಸಿಲುಕಿಕೊಂಡಿದೆ. ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪೊಲೀಸ್, ಅರಣ್ಯ, ಅಗ್ನಿಶಾಮಕ ದಳ, ಲೋಕೋಪಯೋಗಿ ಇಲಾಖೆ, ಸ್ಥಳೀಯಾಡಳಿತ, ಸ್ಥಳೀಯರ ನೆರವಿನಿಂದ ಮರಗಳ ತೆರವು ಕಾರ್ಯ ನಡೆಸಲಾಗಿದೆ. ತೆರವಿಗೆ ಹರಸಾಹಸ ಪಡಬೇಕಾಯಿತು. ಹಾನಿಗೊಂಡ ಕಾರು ಯಾತ್ರಿಕರದ್ದು ಎಂದು ತಿಳಿದುಬಂದಿದೆ.
ಈ ಭಾಗದಲ್ಲಿ ಹೆದ್ದಾರಿ ಬದಿಯಲ್ಲಿ ದೂಪದ ಮರಗಳು ಅಪಾಯಕಾರಿಯಾಗಿದ್ದು ವರ್ಷಂಪ್ರತಿ ಹೆದ್ದಾರಿಗೆ ಉರುಳುತ್ತ¤, ರಸ್ತೆ ಸಂಚಾರಕ್ಕೆ ತೊಡಕಾಗುತ್ತಿದೆ ಎಂಬ ದೂರು ವ್ಯಕ್ತವಾಗಿದ್ದು, ಅಪಾಯಕಾರಿ ಮರಗಳನ್ನು ಕೂಡಲೇ ಅರಣ್ಯ ಇಲಾಖೆ ತೆರವು ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ