ಬಿಳಿನೆಲೆ: ಕಾರು, ಜೀಪ್ ಢಿಕ್ಕಿ; ಹಲವು ಮಂದಿಗೆ ಗಾಯ
Team Udayavani, Oct 30, 2022, 11:32 PM IST
ಸುಬ್ರಹ್ಮಣ್ಯ: ಕಾರು ಮತ್ತು ಜೀಪು ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುಬ್ರಹ್ಮಣ್ಯ-ಮರ್ದಾಳ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಮೀಪ ರವಿವಾರ ಬೆಳಗ್ಗೆ ಸಂಭವಿಸಿದೆ.
ಹ್ಯುಂಡೈ ಕಾರು ಹಾಗೂ ಜೀಪು ಪರಸ್ಪರ ಢಿಕ್ಕಿಯಾಗಿದೆ. ಜೀಪು ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹಾಗೂ ಕಾರು ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದು, ಬಿಳಿನೆಲೆಯ ಸಿಪಿಸಿಆರ್ಐ ಬಳಿ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳೂ ಜಖಂಗೊಂಡಿವೆ.
ಅಪಘಾತದಲ್ಲಿ ಎರಡೂ ವಾಹನಗಳ ಚಾಲಕರ ಸಹಿತ ಹಲವು ಮಂದಿ ಗಾಯಗೊಂಡಿದ್ದಾರೆ. ಕಡಬ ತಾಲೂಕಿನ ಕುಟ್ರಾಪಾಡಿಯ ಜೋಸೆಫ್ ಕುರಿಯನ್ (59), ಸನಲ್ (39), ಲಿನಿ ಜೋಸೆಫ್ (54), ಸೇರಿದಂತೆ ಕಾರಿನಲ್ಲಿದ್ದ ಪುಟ್ಟ ಮಕ್ಕಳು, ವಯಸ್ಕರು ಸಹಿತ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ