ಅರ್ಧ ಶತಮಾನದ ಠಾಣೆಗಿಲ್ಲ ಹೊಸ ಕಟ್ಟಡ ಭಾಗ್ಯ!


Team Udayavani, Apr 1, 2021, 4:40 AM IST

ಅರ್ಧ ಶತಮಾನದ ಠಾಣೆಗಿಲ್ಲ ಹೊಸ ಕಟ್ಟಡ ಭಾಗ್ಯ!

ಸುಬ್ರಹ್ಮಣ್ಯ, : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡವೇ ಸೂಕ್ತ ರೀತಿಯಲ್ಲಿಲ್ಲ! ಹಳೆ   ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿ ವಾರ್ಯತೆ ಸುಬ್ರಹ್ಮಣ್ಯ ಪೊಲೀಸರದು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರ್ಯಚರಿಸುತ್ತಿರುವ ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ಸುಮಾರು 49 ವರ್ಷಗಳ ಇತಿಹಾಸವನ್ನೊಳಗೊಂಡಿದೆ. ಇದು ಸುಮಾರು 15 ವರ್ಷಗಳವರೆಗೆ ಕಡಬ ಪೊಲೀಸ್‌ ಠಾಣೆಯ ಹೊರ ಠಾಣೆ ಯಾಗಿ ಕಾರ್ಯನಿರ್ವಹಿಸಿ ಹೆಸರುವಾಸಿ ಯಾಗಿತ್ತು. ಇಂದು ಪೊಲೀಸ್‌ ಠಾಣೆ ಯಾಗಿ ಕಾರ್ಯಚರಿಸುತ್ತಿದೆ. ಪ್ರಸ್ತುತ ಠಾಣಾಧಿ ಕಾರಿಯಾಗಿ  ಮೂರು ವರ್ಷಗಳಿಂದ ಓಮನಾ ಕರ್ತವ್ಯದಲ್ಲಿದ್ದಾರೆ.

ಹಳೇ ಕಟ್ಟಡ :

ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯನ್ನು 1972ರಲ್ಲಿ ತೆರೆಯಲಾಯಿತು. 1979ರಲ್ಲಿ ಇದರ ಕಟ್ಟಡವನ್ನು ಅಂದಿನ ಪೊಲೀಸ್‌ ಮಹಾನಿರೀಕ್ಷಕರು ಉದ್ಘಾಟಿಸಿದ್ದರು. ಹಂಚು ಮಾಡಿನ ಈ ಕಟ್ಟಡ 3 ಕೊಠಡಿಗಳನ್ನು ಹೊಂದಿದೆ. ಠಾಣೆಗೆ ಕೊಠಡಿ ಸಮಸ್ಯೆ ಇರುವುದರಿಂದ 2001ರಲ್ಲಿ ಊರ ದಾಣಿಗಳ ಸಹಕಾರದಿಂದ ಹೆಚ್ಚುವರಿ ಕೊಠಡಿ ನಿರ್ಮಿಸಲಾಯಿತು. ಸದ್ಯ ಇದೇ ಕಟ್ಟಡದಲ್ಲಿ ಕಾರ್ಯಚರಿಸುತ್ತಿದೆ. ಪ್ರಸ್ತುತ ಠಾಣೆಯಲ್ಲಿ 28 ಸಿಬಂದಿ ಕರ್ತವ್ಯದಲ್ಲಿದ್ದಾರೆ. ವಸತಿ ಸೇರಿದಂತೆ ಮೂಲ ಸೌಕರ್ಯ ವ್ಯವಸ್ಥಿತವಾಗಿದೆ. ಠಾಣೆ ಸುಮಾರು 3 ಎಕ್ರೆ ಹೊಂದಿದೆ. ಹಳೆ ಕಟ್ಟಡವಾಗಿರುವುದರಿಂದ ಮಳೆಗಾಲದಲ್ಲಿ ಸಮಸ್ಯೆಯಾಗುತ್ತಿದೆ.

ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ಪ್ರಸ್ತುತ ಸುಳ್ಯ ನ್ಯಾಯಲಯ ವ್ಯಾಪ್ತಿಯಲ್ಲಿದ್ದು, ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು, ಬಳ್ಪ, ಕೇನ್ಯ, ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ನಾಲ್ಕೂರು, ಐವತ್ತೋಕ್ಲು, ಮರ್ಕಂಜ, ಕಲ್ಮಡ್ಕ ಮೊದಲಾದ    ಸುಳ್ಯ ಹಾಗೂ ಕಡಬ ತಾಲೂಕಿನ 15 ಗ್ರಾಮ ಗಳನ್ನೊಳಗೊಂಡಿದೆ.

ಬೇಕಿದೆ ಹೊಸ ಕಟ್ಟಡ :

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಹೆಚ್ಚಿನ ಪೊಲೀಸ್‌ ಠಾಣೆಗಳಿಗೆ ಸುಸಜ್ಜಿತ ಕಟ್ಟಡಗಳು ನಿರ್ಮಾಣಗೊಂಡು ಕಾರ್ಯಚರಿಸುತ್ತಿವೆ. ಅದರಂತೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೂ ನೂತನ ಕಟ್ಟಡ ಭಾಗ್ಯ ಕೂಡಿಬರಲಿ ಎಂಬುದು ಈ ಭಾಗದ ಜನತೆಯ ಆಶಯ. ದಾಖಲೆಗಳ ಕೊಠಡಿ, ಉಪನಿರೀಕ್ಷಕರು, ಸಂದರ್ಶಕರು ಸೇರಿದಂತೆ ವಿವಿಧ ವಿಭಾಗಗಳಿಗೆ ಪ್ರತ್ಯೇಕ ಕೊಠಡಿ ನಿರ್ಮಿಸಿ ಉತ್ತಮ ಸೇವೆ ನೀಡಬಹುದು ಎಂಬುದು ಸಾರ್ವಜನಿಕರ ಅಭಿಪ್ರಾಯ. ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಪೊಲೀಸ್‌ ಠಾಣೆ ಇದ್ದು, ವ್ಯವಸ್ಥಿತ ಕಟ್ಟಡದ ಅಗತ್ಯವಿದೆ. ಹೇಳಿ ಕೇಳಿ ಸುಬ್ರಹ್ಮಣ್ಯ ರಾಜ್ಯದ ಶ್ರೀಮಂತ ದೇವಸ್ಥಾನವಿರುವ ಕ್ಷೇತ್ರ. ದಿನನಿತ್ಯ ರಾಜ್ಯ, ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿರುತ್ತಾರೆ.

ಭದ್ರತೆ ನಿರ್ವಹಿಸುವ ಪೊಲೀಸರು ಕೆಲಸ ಮಾಡುವ ಕಟ್ಟಡ ಸುಸಜ್ಜಿತವಾಗಿರಬೇಕು ಎನ್ನುತ್ತಾರೆ ನಾಗರಿಕರು.  ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ನೂತನ ಕಟ್ಟಡಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿರಿಯ ಅಧಿಕಾರಿಗಳು ಇತ್ತೀಚೆಗೆ ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲೂ ಹೊಸ ಕಟ್ಟಡ ಕೂಡಲೇ ಆಗಬೇಕಿದೆ ಎಂದು ತಿಳಿಸಿ, ವರದಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಹೊಸ ಕಟ್ಟಡದ ಬೇಡಿಕೆ ಬಗ್ಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನ ಬರುವ ನಿರೀಕ್ಷೆಯಿದೆ.  –ಲಕ್ಷ್ಮೀಪ್ರಸಾದ್‌ ಬಿ.ಎಂ.,  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ದ.ಕ.

 

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.