ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ಇನ್ನಿಲ್ಲ
Team Udayavani, Mar 23, 2021, 8:59 AM IST
ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಎಂದೇ ಪ್ರಸಿದ್ದರಾದ ಬನ್ನೂರು ಗ್ರಾಮದ ಕೃಷಿಕ ಧರ್ಣಪ್ಪ ಗೌಡ ಕುಂಟ್ಯಾನ ಮಾ.22 ರಂದು ಚಾರ್ವಾಕ ಗ್ರಾಮದ ಕುಂಟ್ಯಾನ ಫಾರ್ಮ್ ನಲ್ಲಿ ನಿಧನರಾದರು.
50 ವರ್ಷಗಳಿಂದ ತರಕಾರಿ ಕೃಷಿಯಲ್ಲಿ ಪರಿಣಿತರಾಗಿದ್ದ ಇವರು, ಚಾರ್ವಾಕ, ಸಂಪ್ಯ, ಮಾಡಾವುಗಳಲ್ಲಿ ಜಾಗವನ್ನು ಖರೀದಿಸಿ ತನ್ನ ಕೃಷಿ ಕ್ಷೇತ್ರದ ಸಾಧನೆಯನ್ನು ವಿಸ್ತರಿಸಿದ್ದರು. ಕೃಷಿ ಕ್ಷೇತ್ರದ ಮಹಾನ್ ಸಾಧಕರಾಗಿದ್ದ ಧರ್ಣಪ್ಪ ಗೌಡರವರಿಗೆ ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ. ಅವರ ಸಾಧನೆಯನ್ನು ಗುರುತಿಸಿ ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ.
ಇದನ್ನೂ ಓದಿ:ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ನಿಧನ
ಎತ್ತಿನಗಾಡಿಯಲ್ಲಿ ವ್ಯಾಪಾರ: ಹಣ್ಣಡಿಕೆ ವ್ಯಾಪಾರವನ್ನು ಆರಂಭಿಸಿದ ಮೊದಲಲ್ಲಿ ಅಡಿಕೆಯನ್ನು ತಲೆಹೊರೆಯಲ್ಲಿ ಹೊತ್ತು ವ್ಯಾಪಾರ ಮಾಡುತ್ತಿದ್ದ ಇವರು ಬಳಿಕ ಎತ್ತಿನಗಾಡಿಯೊಂದನ್ನು ಖರೀದಿಸಿ ಗೇರುಕಟ್ಟೆಯ ತನಕ ಸಂಚರಿಸಿ ವ್ಯಾಪಾರವನ್ನು ವೃದ್ಧಿಸಿಕೊಂಡರು. ನಂತರ ರಿಕ್ಷಾ ಟೆಂಪೋ ಒಂದನ್ನು ಖರೀದಿಸಿ ಅದರಲ್ಲಿ ತನ್ನ ವ್ಯಾಪಾರ ವಿಸ್ತರಿಸಿದ್ದರು.
ಧರ್ಣಪ್ಪ ಗೌಡರೊಬ್ಬ ಸೂಕ್ಷ್ಮ ಸಂವೇದನೆಯ ಆರ್ಥಿಕ ತಜ್ಞ. ತನ್ನ ತರಕಾರಿ ವ್ಯಾಪಾರದಲ್ಲಿ ಉಳಿಕೆಯಾದ ಹಣವನ್ನು ಡಬ್ಬಿಯಲ್ಲಿ ಸಂಗ್ರಹಿಸಿಡುತ್ತಿದ್ದರು. ಉತ್ತಮ ಮೊತ್ತವೊಂದು ಸಂಗ್ರಹವಾದಾಗ ಅದನ್ನು ವಿನಿಯೋಗಿಸಿ ಭೂಮಿ ಇಲ್ಲವೆ ವಾಹನ ಕೊಳ್ಳುವಂತಹ ಬೃಹತ್ ಹೂಡಿಕೆ ಮಾಡುತ್ತಿದ್ದರು. ಕೃಷಿಭೂಮಿಯಲ್ಲಿ ಸುರಿದ ಬೆವರು ಆಸ್ತಿಯಾಗಿ ಪರಿವರ್ತನೆಯಾಗುತ್ತಿತ್ತು.
ಇದನ್ನೂ ಓದಿ: ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು: ತವರೂರಿಗೆ ಮೃತದೇಹ ತರಲು ಸ್ಪಂದಿಸಿದ ಶಾಸಕ
ಮೃತರು ಪತ್ನಿ ಚೆನ್ನಮ್ಮ, ಪುತ್ರ ಪ್ರವೀಣ್ ಕುಂಟ್ಯಾಣ, ಪುತ್ರಿ ಸುಚಿತ್ರಾ, ಸುಮಿತ್ರಾ ಅಳಿಯಂದಿರಾದ ರಾಧಾಕೃಷ್ಣ, ರವಿ, ಪುತ್ರಿ ಸುನೀತಾ, ಸೊಸೆ ಸವಿತಾ ಪ್ರವೀಣ್ ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ