Sullia: ಕಾಲೇಜಿಗೆ ಅಕ್ರಮ ಪ್ರವೇಶ ಆರೋಪ; ಪ್ರಕರಣ ದಾಖಲು
Team Udayavani, Oct 8, 2023, 12:37 AM IST
ಸುಳ್ಯ: ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಸಿಬಂದಿಯನ್ನು ಬೆದರಿಸಲಾಗಿದೆ ಎಂಬ ಬಗ್ಗೆ ಅಜ್ಜಾವರ ಗ್ರಾಮದ ಕಾಂತಮಂಗಲದ ಡಾ| ಜ್ಯೋತಿ ಆರ್. ಪ್ರಸಾದ್ ನೀಡಿರುವ ದೂರಿನ ಆಧಾರದಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ| ಜ್ಯೋತಿ ಆರ್. ಪ್ರಸಾದ್ ಅವರು ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿದ್ದರು. ಇದನ್ನು ಗಮನಿಸಿದ ಆರೋಪಿಗಳಾದ ದೂರುದಾರರ ಭಾವ ಡಾ| ಚಿದಾನಂದ, ಅವರ ಪತ್ನಿ ಶೋಭಾ ಚಿದಾನಂದ, ಮಗ ಅಕ್ಷಯ್ ಕೆ.ಸಿ., ಮಗಳು ಡಾ| ಐಶ್ವರ್ಯಾ, ಸಂಬಂದಿ ಹೇಮನಾಥ ಕೆ.ವಿ., ಜಗದೀಶ್ ಅಡ್ತಲೆ ಮತ್ತು ಅವರ ಇತರ ಸಿಬಂದಿ ಡಾ| ಜ್ಯೋತಿ ಆರ್.ಪ್ರಸಾದ್ ಹಾಗೂ ಅವರ ಪತಿ ವ್ಯವಹಾರ ನೋಡಿಕೊಳ್ಳುತ್ತಿದ್ದ ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಪ್ರಾಂಶುಪಾಲರು ಹಾಗೂ ಸಿಬಂದಿಯ ಮೊಬೈಲ್, ಸಿಸಿ ಕೆಮರಾ ಮುಂತಾದವುಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಬಳಿಕ ಮೊಬೈಲ್ಗಳನ್ನು ಹಿಂದಿರುಗಿಸಿ, ಬೆದರಿಸಿ ಹೋಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ