ಸುಳ್ಯ ಅರಣ್ಯ ವ್ಯಾಪ್ತಿ: 1.70 ಲಕ್ಷ ಗಿಡ ವಿತರಣೆಗೆ ಸಿದ್ಧ


Team Udayavani, May 18, 2020, 5:45 AM IST

ಸುಳ್ಯ ಅರಣ್ಯ ವ್ಯಾಪ್ತಿ: 1.70 ಲಕ್ಷ ಗಿಡ ವಿತರಣೆಗೆ ಸಿದ್ಧ

ಸುಳ್ಯ: ಅರಣ್ಯ ಇಲಾಖೆ ವ್ಯಾಪ್ತಿಯ ಸುಳ್ಯ ವಲಯ ವಿಭಾಗದ ಸಸ್ಯ ಕ್ಷೇತ್ರದಲ್ಲಿ ಈ ಬಾರಿ 1.70 ಲಕ್ಷ ಗಿಡ ಬೆಳೆಸಲಾಗಿದ್ದು, ನಾಟಿ ಹಾಗೂ ವಿತರಣೆಗೆ ಸಿದ್ಧವಾಗಿದೆ.

ಸಾರ್ವಜನಿಕರಿಗೆ ವಿತರಿಸಲು ಹಾಗೂ ನೆಡುತೋಪುಗಳಲ್ಲಿ ನೆಡಲು ಗಿಡ ಬೆಳೆಸಲಾಗುತ್ತದೆ. ಅರಣ್ಯ ಇಲಾಖೆ ವಿವಿಧ ಯೋಜನೆ ಮೂಲಕ ಗಿಡ ವಿತರಿಸಲಿದೆ.

ಸಾರ್ವಜನಿಕ ವಿತರಣೆಗೆ 60,800 ಗಿಡ
ಸುಳ್ಯ ವಲಯದ ಮೇದಿನಡ್ಕ ಸಸ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ವಿತರಣೆಗೆಂದು 60,800 ಗಿಡಗಳಿವೆ. ಕಳೆದ ವರ್ಷ 42,500 ಗಿಡಗಳಿತ್ತು. ಅಂದರೆ ಈ ಬಾರಿ 18,300 ಗಿಡಗಳು ಹೆಚ್ಚುವರಿಯಾಗಿ ಬೆಳೆಯಲಾಗಿದೆ. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಸಹಿತ ವಿವಿಧ ಯೋಜನೆಗಳಡಿ ಪ್ರೋತ್ಸಾಹ ದರದಲ್ಲಿ ಗಿಡ ವಿತರಿಸಲಾಗುತ್ತದೆ. ಪ್ರತಿ ವರ್ಷ ಮಳೆಗಾಲ ಆರಂಭಗೊಂಡ ಮೇಲೆ ಸಂಘ-ಸಂಸ್ಥೆ, ಶಾಲೆಗಳ ಸಹಯೋಗದಲ್ಲಿ ವನಮಹೋತ್ಸವ ಮೊದಲಾದ ಚಟುವಟಿಕೆ ಹಮ್ಮಿಕೊಳ್ಳಲು ಅರಣ್ಯ ಇಲಾಖೆ ತಯಾರಿ ನಡೆಸುತ್ತದೆ. ಆದರೆ ಬಾರಿ ಶಾಲಾ ಶೈಕ್ಷಣಿಕ ವರ್ಷ ಕಾರ್ಯಾರಂಭದ ಅನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ.ನೆಡುತೋಪುಗಳಲ್ಲಿ ನಾಟಿ ಮಾಡಲು ಮೇದಿನಡ್ಕ ಸಸ್ಯ ಕ್ಷೇತ್ರದಲ್ಲಿ 1,09,900 ಗಿಡಗಳಿವೆ. ಇವುಗಳು ಮಾರಾಟಕ್ಕೆಂದು ನಾಟಿ ಮಾಡಿದ ಗಿಡಗಳಲ್ಲ. ಅರಣ್ಯ ಇಲಾಖೆಯ ನೆಡುತೋಪುಗಳಲ್ಲಿ ಇವುಗಳನ್ನು ಬೆಳೆಸಲಾಗುತ್ತದೆ.

ಯಾವೆಲ್ಲ ಗಿಡಗಳಿವೆ?
ಮೂರು ವಲಯದ ಸಸ್ಯ ಕ್ಷೇತ್ರದಲ್ಲಿ ಸಾಗುವಾನಿ, ಮಹಾಗನಿ, ಹುಣಸೆ, ಶ್ರೀಗಂಧ, ನೆಲ್ಲಿ, ಕಿರಾಲ್‌ಬೋಗಿ, ರಾಂಪತ್ರೆ, ರೆಂಜೆ, ಹೊಂಗೆ, ಹೆಬ್ಬೇವು, ಅಂಟುವಾಳ, ಬಾದಾಮಿ, ನೇರಳೆ, ಮಾವು ಮೊದಲಾದ 55ಕ್ಕೂ ಅಧಿಕ ಜಾತಿಯ ಸಸ್ಯಗಳಿವೆ.

ಕಳೆದ ಎರಡು ವರ್ಷ 1.83 ಲಕ್ಷ ಗಿಡಗಳು
2018ರಲ್ಲಿ ಮೇದಿನಡ್ಕ ಕೇಂದ್ರೀಯ ಸಸ್ಯ ಕ್ಷೇತ್ರದಲ್ಲಿ 81,575 ಗಿಡಗಳನ್ನು ಬೆಳೆದು, ನೆಡು ತೋಪುಗಳಲ್ಲಿ ನೆಡಲು 67,575 ಮತ್ತು ಸಾರ್ವಜನಿಕ ವಿತರಣೆಗೆ 14 ಸಾವಿರ ಗಿಡಗಳನ್ನು ಬಳಸಲಾಗಿತ್ತು. 2019 ಸಾರ್ವಜನಿಕರಿಗೆ ವಿತರಣೆಗೆ 42,500 ಗಿಡಗಳು, ನೆಡುತೋಪುಗಳಲ್ಲಿ ನಾಟಿ ಮಾಡಲು 1,01,500 ಗಿಡಗಳು ಸಹಿತ 1.44 ಲಕ್ಷ ಗಿಡಗಳನ್ನು ವಿತರಿಸಲಾಗಿತ್ತು.

ಹಸುರು ಸಂಪತ್ತು ವೃದ್ಧಿಗೆ ಕ್ರಮ
ಮೇದಿನಡ್ಕ ಸಸ್ಯ ಕ್ಷೇತ್ರದಲ್ಲಿ ಸಾರ್ವಜನಿಕ ವಿತರಣೆ ಮತ್ತು ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ನೆಡಲು 1,70,700 ಗಿಡಗಳು ಸಿದ್ಧವಾಗಿವೆ. ಹಸುರು ಸಂಪತ್ತು ವೃದ್ಧಿಗೆ ಅರಣ್ಯ ಇಲಾಖೆ ಪೂರಕ ಕ್ರಮ ಕೈಗೊಂಡಿದೆ.
-ಮಂಜುನಾಥ,ವಲಯ ಅರಣ್ಯಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.